Homeಅಂತರಾಷ್ಟ್ರೀಯಜನವಸತಿ ಪ್ರದೇಶದಲ್ಲಿ ಮಿಲಿಟರಿ ವಿಮಾನ ಪತನ : 46 ಜನರು ಸಾವು

ಜನವಸತಿ ಪ್ರದೇಶದಲ್ಲಿ ಮಿಲಿಟರಿ ವಿಮಾನ ಪತನ : 46 ಜನರು ಸಾವು

- Advertisement -
- Advertisement -

ಸುಡಾನ್‌ನ ವಾಡಿ ಸೈದ್ನಾ ವಾಯುನೆಲೆಯ ಬಳಿಯ ಜನವಸತಿ ಪ್ರದೇಶದಲ್ಲಿ ಮಂಗಳವಾರ (ಫೆ.25) ರಾತ್ರಿ ಮಿಲಿಟರಿ ವಿಮಾನವೊಂದು ಪತನಗೊಂಡಿದ್ದು, 46 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಾಜಧಾನಿ ಖಾರ್ಟೌಮ್‌ನ ವಾಯುವ್ಯದಲ್ಲಿರುವ ಓಮ್‌ದುರ್ಮನ್‌ನಲ್ಲಿರುವ ಈ ನೆಲೆಯು ಸೇನೆಯ ಅತಿದೊಡ್ಡ ಮಿಲಿಟರಿ ಕೇಂದ್ರಗಳಲ್ಲಿ ಒಂದಾಗಿದೆ.

ಸುಡಾನ್‌ನ ಮಿಲಿಟರಿ ಬೆಂಬಲಿತ ಸರ್ಕಾರದ ಪ್ರಧಾನ ಕೇಂದ್ರವಾದ ಪೋರ್ಟ್ ಸುಡಾನ್‌ನ ಕೆಂಪು ಸಮುದ್ರ ನಗರಕ್ಕೆ ವಿಮಾನ ತೆರಳುತ್ತಿತ್ತು ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಎಎಫ್‌ಪಿ ತಿಳಿಸಿದೆ. ವಿಮಾನವು ಉನ್ನತ ಶ್ರೇಣಿಯ ಮಿಲಿಟರಿ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿತ್ತು ಎಂಬ ವರದಿಗಳನ್ನು ಸೇನೆ ದೃಢಪಡಿಸಿಲ್ಲ ಮತ್ತು ನಿರಾಕರಿಸಿಲ್ಲ.

“ಅಂತಿಮ ಪರಿಶೀಲನೆಯ ಬಳಿಕ ಮೃತರ ಸಂಖ್ಯೆ 46ಕ್ಕೆ ತಲುಪಿದ್ದು, 10 ಮಂದಿ ಗಾಯಗೊಂಡಿದ್ದಾರೆ” ಎಂದು ಖಾರ್ಟೌಮ್ ಪ್ರಾದೇಶಿಕ ಸರ್ಕಾರದ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಮಕ್ಕಳು ಸೇರಿದಂತೆ ಗಾಯಗೊಂಡ ನಾಗರಿಕರನ್ನು ತುರ್ತು ರಕ್ಷಣಾ ಸಿಬ್ಬಂದಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಸೇನೆಯೊಂದಿಗೆ ಸಂಯೋಜಿತ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಂತ್ರಿಕ ದೋಷದಿಂದಾಗಿ ಸೇನಾ ಸಾರಿಗೆ ವಿಮಾನ ಅಪಘಾತಕ್ಕೀಡಾಗಿರಬಹುದು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಸೇನಾ ಮೂಲವೊಂದು ತಿಳಿಸಿದ್ದಾಗಿ ಎಎಫ್‌ಪಿ ಹೇಳಿದೆ.

ವಿಮಾನ ಪತನದ ನಂತರ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂತು, ದಟ್ಟ ಹೊಗೆ ಆವರಿಸಿತ್ತು. ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ದುರಂತ ಸ್ಥಳದ ನಿವಾಸಿಗಳು ವಿವರಿಸಿದ್ದಾರೆ. ಅವಘಡದಿಂದ ಆ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಸುಡಾನ್ ಅಂತರ್ಯುದ್ಧ

ಸೇನೆ ಮತ್ತು ಅರೆಸೈನಿಕ ಗುಂಪು ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ನಡುವಿನ ಅಂತರ್ಯುದ್ಧದಿಂದ ಸುಡಾನ್ ಈಗಾಗಲೇ ನಲುಗಿ ಹೋಗಿದೆ. ಇಬ್ಬರ ನಡುವಿನ ಕಿತ್ತಾಟ 2023ರಲ್ಲಿ ಪೂರ್ಣ ಪ್ರಮಾಣದ ಹೋರಾಟದ ಸ್ವರೂಪ ಪಡೆದಿತ್ತು.

ಪಶ್ಚಿಮ ಡಾರ್ಫರ್ ಪ್ರದೇಶದ ಹೆಚ್ಚಿನ ಪ್ರದೇಶಗಳನ್ನು ತನ್ನ ನಿಯಂತ್ರನದಲ್ಲಿಟ್ಟುಕೊಂಡಿರುವ ಆರ್‌ಎಸ್‌ಎಫ್, ಸೋಮವಾರ ನ್ಯಾಲಾ ನಗರದಲ್ಲಿ ಮಿಲಿಟರಿ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೇಳಿದೆ.

ಸೇನೆ ಮತ್ತು ಆರ್‌ಎಸ್‌ಎಫ್‌ ನಡುವಿನ ಕಾದಾಟ, ಸುಡಾನ್‌ನ ನಗರ ಪ್ರದೇಶಗಳನ್ನು ಹಾನಿಗೊಳಿಸಿದೆ. ಅತ್ಯಾಚಾರ ಮತ್ತು ಜನಾಂಗೀಯ ಪ್ರೇರಿತ ಹತ್ಯೆಗಳು ಸೇರಿದಂತೆ ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪಗಳಿಗೆ ಸಾಕ್ಷಿಯಾಗಿದೆ. ವಿಶ್ವಸಂಸ್ಥೆಯಿಂದ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳು ಎಂದು ಪರಿಗಣಿಸಲ್ಪಟ್ಟಿದೆ.

ಗಾಜಾ ಕದನ ವಿರಾಮ: 2ನೇ ಹಂತದ ಮಾತುಕತೆಗಳು ಮತ್ತೆ ಹಳಿಗೆ; ನಿನ್ನೆಯಷ್ಟೇ ಮಾತುಕತೆ ಸಾಧ್ಯವಿಲ್ಲವೆಂದಿದ್ದ ಹಮಾಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...