Homeಮುಖಪುಟಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

ಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

- Advertisement -
- Advertisement -

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಲಂನಿವಾಸಿ ಕುಟುಂಬಗಳಿಗೆ ಹಾಲು ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಹಾಗೆ ಹಾಲು ವಿತರಿಸುವ ವೇಳೆಯಲ್ಲಿ ಎಲ್ಲ ಕುಟುಂಬಗಳಿಗೆ ಹಾಲು ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾದುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ಆತುರದಲ್ಲಿ ಹಾಲು ನೀಡುವುದಕ್ಕೆ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಘೋಷಿತ ಸ್ಲಂಗಳಿಗೆ ಮಾತ್ರ ಹಾಲು ನೀಡುತ್ತಿದ್ದು ಅಘೋಷಿತ ಸ್ಲಂ ಕುಟುಂಬಗಳಿಗೆ ಹಾಲು ದೊರೆಯುತ್ತಿಲ್ಲ. ಕೆಲವು ಸ್ಲಂಗಳು ಪರಿವರ್ತನೆ ಆಗಿ ಬಡಾವಣೆಗಳಾಗಿವೆ. ಸ್ಲಂಗಳ ನಡುವೆ ಬಲಾಢ್ಯ ಕುಟುಂಬಗಳು ಸೇರಿ ಹೋಗಿವೆ. ಹೀಗಾಗಿ ಅರ್ಹ ಕುಟುಂಬಗಳಿಗೆ ಸಿಗಬೇಕಾದ ಹಾಲು ಬೇರೆಯವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ  ಸರ್ಕಾರವೇ ಘೋಷಿಸಿರುವಂತೆ 2804 ಸ್ಲಂಗಳಿವೆ. ಈ ಸ್ಲಂಗಳಲ್ಲಿ 45 ಲಕ್ಷ ಮಂದಿ ಜನ ವಾಸಿಸುತ್ತಿದ್ದಾರೆ. ಇವರ ಪೈಕಿ 12 ಲಕ್ಷ ಮಂದಿ ಮಕ್ಕಳೇ ಇದ್ದಾರೆಂಬುದು ಗಮನಾರ್ಹ ಸಂಗತಿ. ಘೋಷಿತ ಸ್ಲಂ ನಿವಾಸಿಗಳಿಗೆ ಒಟ್ಟು 7 ಲಕ್ಷ ಲೀಟರ್ ಹಾಲು ವಿತರಿಸುವ ಒಳ್ಳೆಯ ಕೆಲಸಕ್ಕೆ ಸರ್ಕಾರ ಕೈಹಾಕಿದ್ದರೂ ನಿಜವಾಗಿಯೂ ತಲುಪಬೇಕಾದವರಿಗೆ ಹಾಲು ತಲುಪುತ್ತಿಲ್ಲ. ರಾಜ್ಯ ಸರ್ಕಾರ 2011 ಗಣತಿಯನ್ನಾಧರಿಸಿ ಸ್ಲಂ ಕುಟುಂಬಗಳಿಗೆ ಹಾಲು ವಿತರಿಸುತ್ತಿದೆ. ಕಳೆದ 8 ವರ್ಷಗಳಲ್ಲಿ ಸ್ಲಂಗಳ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಬಡ ಕುಟುಂಬಗಳು ಹೊಸದಾಗಿ ಸೇರ್ಪಡೆಯಾಗಿದೆ. ಈ ಕುಟುಂಬಗಳಿಗೆ ಹಾಲು ಸಿಗುತ್ತಿಲ್ಲ. ಅರ್ಹ ಫಲನುಭವಿ ಕುಟುಂಬಗಳು ಸರ್ಕಾರದ ಆಪತ್ಕಾಲದ ಯೋಜನೆಯಿಂದ ವಂಚಿತವಾಗಲಿದ್ದು ಸರ್ಕಾರ ಈ ಬಗ್ಗೆ ಯೋಚಿಸಬೇಕಾಗಿದೆ.

ಬೆಂಗಳೂರು ನಗರದಲ್ಲಿ 800 ಘೋಷಿತ ಅಂದರೆ ಅಧಿಕೃತ ಸ್ಲಂಗಳಿವೆ. ಅಘೋಷಿತ ಸ್ಲಂಗಳು 200 ಇವೆ. ಅಂದರೆ ಸರ್ಕಾರ ಘೋಷಿಸಿರುವ ಅರ್ಧದಷ್ಟು ಸ್ಲಂಗಳು ಬೆಂಗಳೂರಿನಲ್ಲಿಯೇ ಇವೆ. ಬೆಂಗಳೂರು ಒಂದಕ್ಕೆ 25 ಸಾವಿರ ಲೀಟರ್ ಹಾಲು ವಿತರಿಸಲಾಗುತ್ತಿದೆ. ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. 2011 ನಂತರ ಹೊಸ ಕುಟುಂಬಗಳು ವಲಸೆ ಬಂದು ಸೇರ್ಪಡೆಯಾಗಿವೆ. ಚಿಕ್ಕಚಿಕ್ಕ ಕುಟೀರಗಳಲ್ಲಿ, ಡೇರೆಗಳಲ್ಲಿ ವಾಸಿಸುವ ಈ ಕುಟುಂಬಗಳು ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಂದೊಂದು ಕುಟುಂಬದಲ್ಲಿ 6-7 ಮಂದಿ ಇದ್ದು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಸ್ಲಂಗಳಲ್ಲಿ ಬಂದು ಸೇರಿಕೊಂಡಿರುವ ಬಲಾಢ್ಯರಿಂದಾಗಿ ಅವು ಬಡಾವಣೆಗಳಾಗಿ ಪರಿವರ್ತನೆಯಾಗಿವೆ. ಅಲ್ಲಿ ವಾಸಿಸುತ್ತಿದ್ದ ಸ್ಲಂ ನಿವಾಸಿ ಕುಟುಂಬಗಳು ಬೇರೆ ಕಡೆಗೆ ಹೋಗಿದ್ದು ಅರ್ಹ ಕುಟುಂಬಗಳಿಗೆ ಸಿಗಬೇಕಾದ ಸೌಲಭ್ಯಗಳ ಲಾಭ ಬಲಾಢ್ಯರು ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸ್ಲಂ ಜನರು, ಅಲೆಮಾರಿಗಳು ಹಂದಿಜೋಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಹೇಳುವಂತೆ ರಾಜ್ಯದಲ್ಲಿ 1500 ಸ್ಲಂಗಳನ್ನು ಸರ್ಕಾರ ಘೋಷಣೆ ಮಾಡುವುದು ಬಾಕಿ ಇದೆ. ಈ ಸ್ಲಂಗಳಲ್ಲಿ ಸುಮಾರು 55 ಲಕ್ಷ ಜನ ವಾಸ ಮಾಡುತ್ತಿದ್ದಾರೆ. ಅವರಲ್ಲಿ 20 ರಿಂದ 22 ಲಕ್ಷ ಮಂದಿ ಮಕ್ಕಳಿದ್ದಾರೆ. 18 ಲಕ್ಷ ಮಂದಿ ಯುವಜನರು ಇದ್ದಾರೆ. ಈಗ ಸರ್ಕಾರದ ಆಪತ್ಕಾಲದ ಹಾಲು ವಿತರಣೆ ಯೋಜನೆಯ ಲಾಭ ಈ ಅಘೋಷಿತ ಸ್ಲಂ ಜನರಿಗೆ ಸಿಗುತ್ತಿಲ್ಲ. ಸರ್ಕಾರ ಒಂದು ಕುಟುಂಬಕ್ಕೆ ಒಂದು ಲೀಟರ್ ವಿತರಿಸುವುದಾಗಿ ಹೇಳಿತ್ತು. ತಲುಪಬೇಕಾದವರಿಗೆ ತಲುಪದ ಹಿನ್ನೆಲೆಯಲ್ಲಿ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್ ಹಾಲು ವಿತರಿಸುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಹಾಲು ವಿತರಣೆ ಮಾಡುವುದರಲ್ಲಿ ಅನ್ಯಾಯವಾಗುತ್ತಿದೆ. ಅರ್ಹ ಕುಟುಂಬಗಳು ಈ ತಾತ್ಕಾಲಿಕ ಯೋಜನೆಯಿಂದ ವಂಚಿತವಾಗಿವೆ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ಲಂಗಳು ನಿರ್ಮಾಣವಾಗಿವೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕೆಲಸ ಅರಸಿಕೊಂಡು ಬಂದಿರುವ ಕುಟುಂಬಗಳು ಸ್ಲಂ ಪ್ರದೇಶದಲ್ಲಿ ಹಂಚಿಕೊಂಡು ಸೌರ್ಹಾತೆಯಿಂದ ಬದುಕುತ್ತಿವೆ. ಒಗ್ಗೂಡಿ ಸಹಬಾಳ್ವೆ ನಡೆಸುವ ಸ್ಲಂ ನಿವಾಸಿಗಳಿಗೆ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅಘೋಷಿತ ಸ್ಲಂಗಳಲ್ಲಿರುವ ಕುಟುಂಬಗಳು ಹಾಲು ಪಡೆಯಲು ಸಾಧ್ಯವಾಗಿಲ್ಲ. ಹಾಲು, ದಿನಸಿ ಎಲ್ಲರಿಗೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಪೌಷ್ಠಿಕತೆಯಲ್ಲಿ ಬಳಲುತ್ತಿರುವ ಮಕ್ಕಳು ಪೌಷ್ಟಿಕತೆಯಿಂದ ಬೆಳೆಯಲು ಅನುವಾಗುವಂತೆ ಸರ್ಕಾರ ನಿಗಾ ವಹಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಸರ್ಕಾರ ಇತ್ತ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...