Homeಮುಖಪುಟಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

ಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

- Advertisement -
- Advertisement -

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಲಂನಿವಾಸಿ ಕುಟುಂಬಗಳಿಗೆ ಹಾಲು ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಹಾಗೆ ಹಾಲು ವಿತರಿಸುವ ವೇಳೆಯಲ್ಲಿ ಎಲ್ಲ ಕುಟುಂಬಗಳಿಗೆ ಹಾಲು ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾದುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ಆತುರದಲ್ಲಿ ಹಾಲು ನೀಡುವುದಕ್ಕೆ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಘೋಷಿತ ಸ್ಲಂಗಳಿಗೆ ಮಾತ್ರ ಹಾಲು ನೀಡುತ್ತಿದ್ದು ಅಘೋಷಿತ ಸ್ಲಂ ಕುಟುಂಬಗಳಿಗೆ ಹಾಲು ದೊರೆಯುತ್ತಿಲ್ಲ. ಕೆಲವು ಸ್ಲಂಗಳು ಪರಿವರ್ತನೆ ಆಗಿ ಬಡಾವಣೆಗಳಾಗಿವೆ. ಸ್ಲಂಗಳ ನಡುವೆ ಬಲಾಢ್ಯ ಕುಟುಂಬಗಳು ಸೇರಿ ಹೋಗಿವೆ. ಹೀಗಾಗಿ ಅರ್ಹ ಕುಟುಂಬಗಳಿಗೆ ಸಿಗಬೇಕಾದ ಹಾಲು ಬೇರೆಯವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ  ಸರ್ಕಾರವೇ ಘೋಷಿಸಿರುವಂತೆ 2804 ಸ್ಲಂಗಳಿವೆ. ಈ ಸ್ಲಂಗಳಲ್ಲಿ 45 ಲಕ್ಷ ಮಂದಿ ಜನ ವಾಸಿಸುತ್ತಿದ್ದಾರೆ. ಇವರ ಪೈಕಿ 12 ಲಕ್ಷ ಮಂದಿ ಮಕ್ಕಳೇ ಇದ್ದಾರೆಂಬುದು ಗಮನಾರ್ಹ ಸಂಗತಿ. ಘೋಷಿತ ಸ್ಲಂ ನಿವಾಸಿಗಳಿಗೆ ಒಟ್ಟು 7 ಲಕ್ಷ ಲೀಟರ್ ಹಾಲು ವಿತರಿಸುವ ಒಳ್ಳೆಯ ಕೆಲಸಕ್ಕೆ ಸರ್ಕಾರ ಕೈಹಾಕಿದ್ದರೂ ನಿಜವಾಗಿಯೂ ತಲುಪಬೇಕಾದವರಿಗೆ ಹಾಲು ತಲುಪುತ್ತಿಲ್ಲ. ರಾಜ್ಯ ಸರ್ಕಾರ 2011 ಗಣತಿಯನ್ನಾಧರಿಸಿ ಸ್ಲಂ ಕುಟುಂಬಗಳಿಗೆ ಹಾಲು ವಿತರಿಸುತ್ತಿದೆ. ಕಳೆದ 8 ವರ್ಷಗಳಲ್ಲಿ ಸ್ಲಂಗಳ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಬಡ ಕುಟುಂಬಗಳು ಹೊಸದಾಗಿ ಸೇರ್ಪಡೆಯಾಗಿದೆ. ಈ ಕುಟುಂಬಗಳಿಗೆ ಹಾಲು ಸಿಗುತ್ತಿಲ್ಲ. ಅರ್ಹ ಫಲನುಭವಿ ಕುಟುಂಬಗಳು ಸರ್ಕಾರದ ಆಪತ್ಕಾಲದ ಯೋಜನೆಯಿಂದ ವಂಚಿತವಾಗಲಿದ್ದು ಸರ್ಕಾರ ಈ ಬಗ್ಗೆ ಯೋಚಿಸಬೇಕಾಗಿದೆ.

ಬೆಂಗಳೂರು ನಗರದಲ್ಲಿ 800 ಘೋಷಿತ ಅಂದರೆ ಅಧಿಕೃತ ಸ್ಲಂಗಳಿವೆ. ಅಘೋಷಿತ ಸ್ಲಂಗಳು 200 ಇವೆ. ಅಂದರೆ ಸರ್ಕಾರ ಘೋಷಿಸಿರುವ ಅರ್ಧದಷ್ಟು ಸ್ಲಂಗಳು ಬೆಂಗಳೂರಿನಲ್ಲಿಯೇ ಇವೆ. ಬೆಂಗಳೂರು ಒಂದಕ್ಕೆ 25 ಸಾವಿರ ಲೀಟರ್ ಹಾಲು ವಿತರಿಸಲಾಗುತ್ತಿದೆ. ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. 2011 ನಂತರ ಹೊಸ ಕುಟುಂಬಗಳು ವಲಸೆ ಬಂದು ಸೇರ್ಪಡೆಯಾಗಿವೆ. ಚಿಕ್ಕಚಿಕ್ಕ ಕುಟೀರಗಳಲ್ಲಿ, ಡೇರೆಗಳಲ್ಲಿ ವಾಸಿಸುವ ಈ ಕುಟುಂಬಗಳು ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಂದೊಂದು ಕುಟುಂಬದಲ್ಲಿ 6-7 ಮಂದಿ ಇದ್ದು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಸ್ಲಂಗಳಲ್ಲಿ ಬಂದು ಸೇರಿಕೊಂಡಿರುವ ಬಲಾಢ್ಯರಿಂದಾಗಿ ಅವು ಬಡಾವಣೆಗಳಾಗಿ ಪರಿವರ್ತನೆಯಾಗಿವೆ. ಅಲ್ಲಿ ವಾಸಿಸುತ್ತಿದ್ದ ಸ್ಲಂ ನಿವಾಸಿ ಕುಟುಂಬಗಳು ಬೇರೆ ಕಡೆಗೆ ಹೋಗಿದ್ದು ಅರ್ಹ ಕುಟುಂಬಗಳಿಗೆ ಸಿಗಬೇಕಾದ ಸೌಲಭ್ಯಗಳ ಲಾಭ ಬಲಾಢ್ಯರು ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸ್ಲಂ ಜನರು, ಅಲೆಮಾರಿಗಳು ಹಂದಿಜೋಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಹೇಳುವಂತೆ ರಾಜ್ಯದಲ್ಲಿ 1500 ಸ್ಲಂಗಳನ್ನು ಸರ್ಕಾರ ಘೋಷಣೆ ಮಾಡುವುದು ಬಾಕಿ ಇದೆ. ಈ ಸ್ಲಂಗಳಲ್ಲಿ ಸುಮಾರು 55 ಲಕ್ಷ ಜನ ವಾಸ ಮಾಡುತ್ತಿದ್ದಾರೆ. ಅವರಲ್ಲಿ 20 ರಿಂದ 22 ಲಕ್ಷ ಮಂದಿ ಮಕ್ಕಳಿದ್ದಾರೆ. 18 ಲಕ್ಷ ಮಂದಿ ಯುವಜನರು ಇದ್ದಾರೆ. ಈಗ ಸರ್ಕಾರದ ಆಪತ್ಕಾಲದ ಹಾಲು ವಿತರಣೆ ಯೋಜನೆಯ ಲಾಭ ಈ ಅಘೋಷಿತ ಸ್ಲಂ ಜನರಿಗೆ ಸಿಗುತ್ತಿಲ್ಲ. ಸರ್ಕಾರ ಒಂದು ಕುಟುಂಬಕ್ಕೆ ಒಂದು ಲೀಟರ್ ವಿತರಿಸುವುದಾಗಿ ಹೇಳಿತ್ತು. ತಲುಪಬೇಕಾದವರಿಗೆ ತಲುಪದ ಹಿನ್ನೆಲೆಯಲ್ಲಿ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್ ಹಾಲು ವಿತರಿಸುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಹಾಲು ವಿತರಣೆ ಮಾಡುವುದರಲ್ಲಿ ಅನ್ಯಾಯವಾಗುತ್ತಿದೆ. ಅರ್ಹ ಕುಟುಂಬಗಳು ಈ ತಾತ್ಕಾಲಿಕ ಯೋಜನೆಯಿಂದ ವಂಚಿತವಾಗಿವೆ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ಲಂಗಳು ನಿರ್ಮಾಣವಾಗಿವೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕೆಲಸ ಅರಸಿಕೊಂಡು ಬಂದಿರುವ ಕುಟುಂಬಗಳು ಸ್ಲಂ ಪ್ರದೇಶದಲ್ಲಿ ಹಂಚಿಕೊಂಡು ಸೌರ್ಹಾತೆಯಿಂದ ಬದುಕುತ್ತಿವೆ. ಒಗ್ಗೂಡಿ ಸಹಬಾಳ್ವೆ ನಡೆಸುವ ಸ್ಲಂ ನಿವಾಸಿಗಳಿಗೆ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅಘೋಷಿತ ಸ್ಲಂಗಳಲ್ಲಿರುವ ಕುಟುಂಬಗಳು ಹಾಲು ಪಡೆಯಲು ಸಾಧ್ಯವಾಗಿಲ್ಲ. ಹಾಲು, ದಿನಸಿ ಎಲ್ಲರಿಗೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಪೌಷ್ಠಿಕತೆಯಲ್ಲಿ ಬಳಲುತ್ತಿರುವ ಮಕ್ಕಳು ಪೌಷ್ಟಿಕತೆಯಿಂದ ಬೆಳೆಯಲು ಅನುವಾಗುವಂತೆ ಸರ್ಕಾರ ನಿಗಾ ವಹಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಸರ್ಕಾರ ಇತ್ತ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...