Homeಮುಖಪುಟಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

ಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

- Advertisement -
- Advertisement -

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಲಂನಿವಾಸಿ ಕುಟುಂಬಗಳಿಗೆ ಹಾಲು ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಹಾಗೆ ಹಾಲು ವಿತರಿಸುವ ವೇಳೆಯಲ್ಲಿ ಎಲ್ಲ ಕುಟುಂಬಗಳಿಗೆ ಹಾಲು ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾದುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ಆತುರದಲ್ಲಿ ಹಾಲು ನೀಡುವುದಕ್ಕೆ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಘೋಷಿತ ಸ್ಲಂಗಳಿಗೆ ಮಾತ್ರ ಹಾಲು ನೀಡುತ್ತಿದ್ದು ಅಘೋಷಿತ ಸ್ಲಂ ಕುಟುಂಬಗಳಿಗೆ ಹಾಲು ದೊರೆಯುತ್ತಿಲ್ಲ. ಕೆಲವು ಸ್ಲಂಗಳು ಪರಿವರ್ತನೆ ಆಗಿ ಬಡಾವಣೆಗಳಾಗಿವೆ. ಸ್ಲಂಗಳ ನಡುವೆ ಬಲಾಢ್ಯ ಕುಟುಂಬಗಳು ಸೇರಿ ಹೋಗಿವೆ. ಹೀಗಾಗಿ ಅರ್ಹ ಕುಟುಂಬಗಳಿಗೆ ಸಿಗಬೇಕಾದ ಹಾಲು ಬೇರೆಯವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ  ಸರ್ಕಾರವೇ ಘೋಷಿಸಿರುವಂತೆ 2804 ಸ್ಲಂಗಳಿವೆ. ಈ ಸ್ಲಂಗಳಲ್ಲಿ 45 ಲಕ್ಷ ಮಂದಿ ಜನ ವಾಸಿಸುತ್ತಿದ್ದಾರೆ. ಇವರ ಪೈಕಿ 12 ಲಕ್ಷ ಮಂದಿ ಮಕ್ಕಳೇ ಇದ್ದಾರೆಂಬುದು ಗಮನಾರ್ಹ ಸಂಗತಿ. ಘೋಷಿತ ಸ್ಲಂ ನಿವಾಸಿಗಳಿಗೆ ಒಟ್ಟು 7 ಲಕ್ಷ ಲೀಟರ್ ಹಾಲು ವಿತರಿಸುವ ಒಳ್ಳೆಯ ಕೆಲಸಕ್ಕೆ ಸರ್ಕಾರ ಕೈಹಾಕಿದ್ದರೂ ನಿಜವಾಗಿಯೂ ತಲುಪಬೇಕಾದವರಿಗೆ ಹಾಲು ತಲುಪುತ್ತಿಲ್ಲ. ರಾಜ್ಯ ಸರ್ಕಾರ 2011 ಗಣತಿಯನ್ನಾಧರಿಸಿ ಸ್ಲಂ ಕುಟುಂಬಗಳಿಗೆ ಹಾಲು ವಿತರಿಸುತ್ತಿದೆ. ಕಳೆದ 8 ವರ್ಷಗಳಲ್ಲಿ ಸ್ಲಂಗಳ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಬಡ ಕುಟುಂಬಗಳು ಹೊಸದಾಗಿ ಸೇರ್ಪಡೆಯಾಗಿದೆ. ಈ ಕುಟುಂಬಗಳಿಗೆ ಹಾಲು ಸಿಗುತ್ತಿಲ್ಲ. ಅರ್ಹ ಫಲನುಭವಿ ಕುಟುಂಬಗಳು ಸರ್ಕಾರದ ಆಪತ್ಕಾಲದ ಯೋಜನೆಯಿಂದ ವಂಚಿತವಾಗಲಿದ್ದು ಸರ್ಕಾರ ಈ ಬಗ್ಗೆ ಯೋಚಿಸಬೇಕಾಗಿದೆ.

ಬೆಂಗಳೂರು ನಗರದಲ್ಲಿ 800 ಘೋಷಿತ ಅಂದರೆ ಅಧಿಕೃತ ಸ್ಲಂಗಳಿವೆ. ಅಘೋಷಿತ ಸ್ಲಂಗಳು 200 ಇವೆ. ಅಂದರೆ ಸರ್ಕಾರ ಘೋಷಿಸಿರುವ ಅರ್ಧದಷ್ಟು ಸ್ಲಂಗಳು ಬೆಂಗಳೂರಿನಲ್ಲಿಯೇ ಇವೆ. ಬೆಂಗಳೂರು ಒಂದಕ್ಕೆ 25 ಸಾವಿರ ಲೀಟರ್ ಹಾಲು ವಿತರಿಸಲಾಗುತ್ತಿದೆ. ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. 2011 ನಂತರ ಹೊಸ ಕುಟುಂಬಗಳು ವಲಸೆ ಬಂದು ಸೇರ್ಪಡೆಯಾಗಿವೆ. ಚಿಕ್ಕಚಿಕ್ಕ ಕುಟೀರಗಳಲ್ಲಿ, ಡೇರೆಗಳಲ್ಲಿ ವಾಸಿಸುವ ಈ ಕುಟುಂಬಗಳು ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಂದೊಂದು ಕುಟುಂಬದಲ್ಲಿ 6-7 ಮಂದಿ ಇದ್ದು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಸ್ಲಂಗಳಲ್ಲಿ ಬಂದು ಸೇರಿಕೊಂಡಿರುವ ಬಲಾಢ್ಯರಿಂದಾಗಿ ಅವು ಬಡಾವಣೆಗಳಾಗಿ ಪರಿವರ್ತನೆಯಾಗಿವೆ. ಅಲ್ಲಿ ವಾಸಿಸುತ್ತಿದ್ದ ಸ್ಲಂ ನಿವಾಸಿ ಕುಟುಂಬಗಳು ಬೇರೆ ಕಡೆಗೆ ಹೋಗಿದ್ದು ಅರ್ಹ ಕುಟುಂಬಗಳಿಗೆ ಸಿಗಬೇಕಾದ ಸೌಲಭ್ಯಗಳ ಲಾಭ ಬಲಾಢ್ಯರು ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸ್ಲಂ ಜನರು, ಅಲೆಮಾರಿಗಳು ಹಂದಿಜೋಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಹೇಳುವಂತೆ ರಾಜ್ಯದಲ್ಲಿ 1500 ಸ್ಲಂಗಳನ್ನು ಸರ್ಕಾರ ಘೋಷಣೆ ಮಾಡುವುದು ಬಾಕಿ ಇದೆ. ಈ ಸ್ಲಂಗಳಲ್ಲಿ ಸುಮಾರು 55 ಲಕ್ಷ ಜನ ವಾಸ ಮಾಡುತ್ತಿದ್ದಾರೆ. ಅವರಲ್ಲಿ 20 ರಿಂದ 22 ಲಕ್ಷ ಮಂದಿ ಮಕ್ಕಳಿದ್ದಾರೆ. 18 ಲಕ್ಷ ಮಂದಿ ಯುವಜನರು ಇದ್ದಾರೆ. ಈಗ ಸರ್ಕಾರದ ಆಪತ್ಕಾಲದ ಹಾಲು ವಿತರಣೆ ಯೋಜನೆಯ ಲಾಭ ಈ ಅಘೋಷಿತ ಸ್ಲಂ ಜನರಿಗೆ ಸಿಗುತ್ತಿಲ್ಲ. ಸರ್ಕಾರ ಒಂದು ಕುಟುಂಬಕ್ಕೆ ಒಂದು ಲೀಟರ್ ವಿತರಿಸುವುದಾಗಿ ಹೇಳಿತ್ತು. ತಲುಪಬೇಕಾದವರಿಗೆ ತಲುಪದ ಹಿನ್ನೆಲೆಯಲ್ಲಿ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್ ಹಾಲು ವಿತರಿಸುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಹಾಲು ವಿತರಣೆ ಮಾಡುವುದರಲ್ಲಿ ಅನ್ಯಾಯವಾಗುತ್ತಿದೆ. ಅರ್ಹ ಕುಟುಂಬಗಳು ಈ ತಾತ್ಕಾಲಿಕ ಯೋಜನೆಯಿಂದ ವಂಚಿತವಾಗಿವೆ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ಲಂಗಳು ನಿರ್ಮಾಣವಾಗಿವೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕೆಲಸ ಅರಸಿಕೊಂಡು ಬಂದಿರುವ ಕುಟುಂಬಗಳು ಸ್ಲಂ ಪ್ರದೇಶದಲ್ಲಿ ಹಂಚಿಕೊಂಡು ಸೌರ್ಹಾತೆಯಿಂದ ಬದುಕುತ್ತಿವೆ. ಒಗ್ಗೂಡಿ ಸಹಬಾಳ್ವೆ ನಡೆಸುವ ಸ್ಲಂ ನಿವಾಸಿಗಳಿಗೆ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅಘೋಷಿತ ಸ್ಲಂಗಳಲ್ಲಿರುವ ಕುಟುಂಬಗಳು ಹಾಲು ಪಡೆಯಲು ಸಾಧ್ಯವಾಗಿಲ್ಲ. ಹಾಲು, ದಿನಸಿ ಎಲ್ಲರಿಗೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಪೌಷ್ಠಿಕತೆಯಲ್ಲಿ ಬಳಲುತ್ತಿರುವ ಮಕ್ಕಳು ಪೌಷ್ಟಿಕತೆಯಿಂದ ಬೆಳೆಯಲು ಅನುವಾಗುವಂತೆ ಸರ್ಕಾರ ನಿಗಾ ವಹಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಸರ್ಕಾರ ಇತ್ತ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....