Homeಮುಖಪುಟಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

ಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

- Advertisement -
- Advertisement -

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಲಂನಿವಾಸಿ ಕುಟುಂಬಗಳಿಗೆ ಹಾಲು ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಹಾಗೆ ಹಾಲು ವಿತರಿಸುವ ವೇಳೆಯಲ್ಲಿ ಎಲ್ಲ ಕುಟುಂಬಗಳಿಗೆ ಹಾಲು ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾದುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ಆತುರದಲ್ಲಿ ಹಾಲು ನೀಡುವುದಕ್ಕೆ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಘೋಷಿತ ಸ್ಲಂಗಳಿಗೆ ಮಾತ್ರ ಹಾಲು ನೀಡುತ್ತಿದ್ದು ಅಘೋಷಿತ ಸ್ಲಂ ಕುಟುಂಬಗಳಿಗೆ ಹಾಲು ದೊರೆಯುತ್ತಿಲ್ಲ. ಕೆಲವು ಸ್ಲಂಗಳು ಪರಿವರ್ತನೆ ಆಗಿ ಬಡಾವಣೆಗಳಾಗಿವೆ. ಸ್ಲಂಗಳ ನಡುವೆ ಬಲಾಢ್ಯ ಕುಟುಂಬಗಳು ಸೇರಿ ಹೋಗಿವೆ. ಹೀಗಾಗಿ ಅರ್ಹ ಕುಟುಂಬಗಳಿಗೆ ಸಿಗಬೇಕಾದ ಹಾಲು ಬೇರೆಯವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ  ಸರ್ಕಾರವೇ ಘೋಷಿಸಿರುವಂತೆ 2804 ಸ್ಲಂಗಳಿವೆ. ಈ ಸ್ಲಂಗಳಲ್ಲಿ 45 ಲಕ್ಷ ಮಂದಿ ಜನ ವಾಸಿಸುತ್ತಿದ್ದಾರೆ. ಇವರ ಪೈಕಿ 12 ಲಕ್ಷ ಮಂದಿ ಮಕ್ಕಳೇ ಇದ್ದಾರೆಂಬುದು ಗಮನಾರ್ಹ ಸಂಗತಿ. ಘೋಷಿತ ಸ್ಲಂ ನಿವಾಸಿಗಳಿಗೆ ಒಟ್ಟು 7 ಲಕ್ಷ ಲೀಟರ್ ಹಾಲು ವಿತರಿಸುವ ಒಳ್ಳೆಯ ಕೆಲಸಕ್ಕೆ ಸರ್ಕಾರ ಕೈಹಾಕಿದ್ದರೂ ನಿಜವಾಗಿಯೂ ತಲುಪಬೇಕಾದವರಿಗೆ ಹಾಲು ತಲುಪುತ್ತಿಲ್ಲ. ರಾಜ್ಯ ಸರ್ಕಾರ 2011 ಗಣತಿಯನ್ನಾಧರಿಸಿ ಸ್ಲಂ ಕುಟುಂಬಗಳಿಗೆ ಹಾಲು ವಿತರಿಸುತ್ತಿದೆ. ಕಳೆದ 8 ವರ್ಷಗಳಲ್ಲಿ ಸ್ಲಂಗಳ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಬಡ ಕುಟುಂಬಗಳು ಹೊಸದಾಗಿ ಸೇರ್ಪಡೆಯಾಗಿದೆ. ಈ ಕುಟುಂಬಗಳಿಗೆ ಹಾಲು ಸಿಗುತ್ತಿಲ್ಲ. ಅರ್ಹ ಫಲನುಭವಿ ಕುಟುಂಬಗಳು ಸರ್ಕಾರದ ಆಪತ್ಕಾಲದ ಯೋಜನೆಯಿಂದ ವಂಚಿತವಾಗಲಿದ್ದು ಸರ್ಕಾರ ಈ ಬಗ್ಗೆ ಯೋಚಿಸಬೇಕಾಗಿದೆ.

ಬೆಂಗಳೂರು ನಗರದಲ್ಲಿ 800 ಘೋಷಿತ ಅಂದರೆ ಅಧಿಕೃತ ಸ್ಲಂಗಳಿವೆ. ಅಘೋಷಿತ ಸ್ಲಂಗಳು 200 ಇವೆ. ಅಂದರೆ ಸರ್ಕಾರ ಘೋಷಿಸಿರುವ ಅರ್ಧದಷ್ಟು ಸ್ಲಂಗಳು ಬೆಂಗಳೂರಿನಲ್ಲಿಯೇ ಇವೆ. ಬೆಂಗಳೂರು ಒಂದಕ್ಕೆ 25 ಸಾವಿರ ಲೀಟರ್ ಹಾಲು ವಿತರಿಸಲಾಗುತ್ತಿದೆ. ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. 2011 ನಂತರ ಹೊಸ ಕುಟುಂಬಗಳು ವಲಸೆ ಬಂದು ಸೇರ್ಪಡೆಯಾಗಿವೆ. ಚಿಕ್ಕಚಿಕ್ಕ ಕುಟೀರಗಳಲ್ಲಿ, ಡೇರೆಗಳಲ್ಲಿ ವಾಸಿಸುವ ಈ ಕುಟುಂಬಗಳು ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಂದೊಂದು ಕುಟುಂಬದಲ್ಲಿ 6-7 ಮಂದಿ ಇದ್ದು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಸ್ಲಂಗಳಲ್ಲಿ ಬಂದು ಸೇರಿಕೊಂಡಿರುವ ಬಲಾಢ್ಯರಿಂದಾಗಿ ಅವು ಬಡಾವಣೆಗಳಾಗಿ ಪರಿವರ್ತನೆಯಾಗಿವೆ. ಅಲ್ಲಿ ವಾಸಿಸುತ್ತಿದ್ದ ಸ್ಲಂ ನಿವಾಸಿ ಕುಟುಂಬಗಳು ಬೇರೆ ಕಡೆಗೆ ಹೋಗಿದ್ದು ಅರ್ಹ ಕುಟುಂಬಗಳಿಗೆ ಸಿಗಬೇಕಾದ ಸೌಲಭ್ಯಗಳ ಲಾಭ ಬಲಾಢ್ಯರು ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸ್ಲಂ ಜನರು, ಅಲೆಮಾರಿಗಳು ಹಂದಿಜೋಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಹೇಳುವಂತೆ ರಾಜ್ಯದಲ್ಲಿ 1500 ಸ್ಲಂಗಳನ್ನು ಸರ್ಕಾರ ಘೋಷಣೆ ಮಾಡುವುದು ಬಾಕಿ ಇದೆ. ಈ ಸ್ಲಂಗಳಲ್ಲಿ ಸುಮಾರು 55 ಲಕ್ಷ ಜನ ವಾಸ ಮಾಡುತ್ತಿದ್ದಾರೆ. ಅವರಲ್ಲಿ 20 ರಿಂದ 22 ಲಕ್ಷ ಮಂದಿ ಮಕ್ಕಳಿದ್ದಾರೆ. 18 ಲಕ್ಷ ಮಂದಿ ಯುವಜನರು ಇದ್ದಾರೆ. ಈಗ ಸರ್ಕಾರದ ಆಪತ್ಕಾಲದ ಹಾಲು ವಿತರಣೆ ಯೋಜನೆಯ ಲಾಭ ಈ ಅಘೋಷಿತ ಸ್ಲಂ ಜನರಿಗೆ ಸಿಗುತ್ತಿಲ್ಲ. ಸರ್ಕಾರ ಒಂದು ಕುಟುಂಬಕ್ಕೆ ಒಂದು ಲೀಟರ್ ವಿತರಿಸುವುದಾಗಿ ಹೇಳಿತ್ತು. ತಲುಪಬೇಕಾದವರಿಗೆ ತಲುಪದ ಹಿನ್ನೆಲೆಯಲ್ಲಿ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್ ಹಾಲು ವಿತರಿಸುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಹಾಲು ವಿತರಣೆ ಮಾಡುವುದರಲ್ಲಿ ಅನ್ಯಾಯವಾಗುತ್ತಿದೆ. ಅರ್ಹ ಕುಟುಂಬಗಳು ಈ ತಾತ್ಕಾಲಿಕ ಯೋಜನೆಯಿಂದ ವಂಚಿತವಾಗಿವೆ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ಲಂಗಳು ನಿರ್ಮಾಣವಾಗಿವೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕೆಲಸ ಅರಸಿಕೊಂಡು ಬಂದಿರುವ ಕುಟುಂಬಗಳು ಸ್ಲಂ ಪ್ರದೇಶದಲ್ಲಿ ಹಂಚಿಕೊಂಡು ಸೌರ್ಹಾತೆಯಿಂದ ಬದುಕುತ್ತಿವೆ. ಒಗ್ಗೂಡಿ ಸಹಬಾಳ್ವೆ ನಡೆಸುವ ಸ್ಲಂ ನಿವಾಸಿಗಳಿಗೆ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅಘೋಷಿತ ಸ್ಲಂಗಳಲ್ಲಿರುವ ಕುಟುಂಬಗಳು ಹಾಲು ಪಡೆಯಲು ಸಾಧ್ಯವಾಗಿಲ್ಲ. ಹಾಲು, ದಿನಸಿ ಎಲ್ಲರಿಗೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಪೌಷ್ಠಿಕತೆಯಲ್ಲಿ ಬಳಲುತ್ತಿರುವ ಮಕ್ಕಳು ಪೌಷ್ಟಿಕತೆಯಿಂದ ಬೆಳೆಯಲು ಅನುವಾಗುವಂತೆ ಸರ್ಕಾರ ನಿಗಾ ವಹಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಸರ್ಕಾರ ಇತ್ತ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...