Homeಮುಖಪುಟಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

ಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

- Advertisement -
- Advertisement -

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಲಂನಿವಾಸಿ ಕುಟುಂಬಗಳಿಗೆ ಹಾಲು ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಹಾಗೆ ಹಾಲು ವಿತರಿಸುವ ವೇಳೆಯಲ್ಲಿ ಎಲ್ಲ ಕುಟುಂಬಗಳಿಗೆ ಹಾಲು ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾದುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ಆತುರದಲ್ಲಿ ಹಾಲು ನೀಡುವುದಕ್ಕೆ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಘೋಷಿತ ಸ್ಲಂಗಳಿಗೆ ಮಾತ್ರ ಹಾಲು ನೀಡುತ್ತಿದ್ದು ಅಘೋಷಿತ ಸ್ಲಂ ಕುಟುಂಬಗಳಿಗೆ ಹಾಲು ದೊರೆಯುತ್ತಿಲ್ಲ. ಕೆಲವು ಸ್ಲಂಗಳು ಪರಿವರ್ತನೆ ಆಗಿ ಬಡಾವಣೆಗಳಾಗಿವೆ. ಸ್ಲಂಗಳ ನಡುವೆ ಬಲಾಢ್ಯ ಕುಟುಂಬಗಳು ಸೇರಿ ಹೋಗಿವೆ. ಹೀಗಾಗಿ ಅರ್ಹ ಕುಟುಂಬಗಳಿಗೆ ಸಿಗಬೇಕಾದ ಹಾಲು ಬೇರೆಯವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ  ಸರ್ಕಾರವೇ ಘೋಷಿಸಿರುವಂತೆ 2804 ಸ್ಲಂಗಳಿವೆ. ಈ ಸ್ಲಂಗಳಲ್ಲಿ 45 ಲಕ್ಷ ಮಂದಿ ಜನ ವಾಸಿಸುತ್ತಿದ್ದಾರೆ. ಇವರ ಪೈಕಿ 12 ಲಕ್ಷ ಮಂದಿ ಮಕ್ಕಳೇ ಇದ್ದಾರೆಂಬುದು ಗಮನಾರ್ಹ ಸಂಗತಿ. ಘೋಷಿತ ಸ್ಲಂ ನಿವಾಸಿಗಳಿಗೆ ಒಟ್ಟು 7 ಲಕ್ಷ ಲೀಟರ್ ಹಾಲು ವಿತರಿಸುವ ಒಳ್ಳೆಯ ಕೆಲಸಕ್ಕೆ ಸರ್ಕಾರ ಕೈಹಾಕಿದ್ದರೂ ನಿಜವಾಗಿಯೂ ತಲುಪಬೇಕಾದವರಿಗೆ ಹಾಲು ತಲುಪುತ್ತಿಲ್ಲ. ರಾಜ್ಯ ಸರ್ಕಾರ 2011 ಗಣತಿಯನ್ನಾಧರಿಸಿ ಸ್ಲಂ ಕುಟುಂಬಗಳಿಗೆ ಹಾಲು ವಿತರಿಸುತ್ತಿದೆ. ಕಳೆದ 8 ವರ್ಷಗಳಲ್ಲಿ ಸ್ಲಂಗಳ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಬಡ ಕುಟುಂಬಗಳು ಹೊಸದಾಗಿ ಸೇರ್ಪಡೆಯಾಗಿದೆ. ಈ ಕುಟುಂಬಗಳಿಗೆ ಹಾಲು ಸಿಗುತ್ತಿಲ್ಲ. ಅರ್ಹ ಫಲನುಭವಿ ಕುಟುಂಬಗಳು ಸರ್ಕಾರದ ಆಪತ್ಕಾಲದ ಯೋಜನೆಯಿಂದ ವಂಚಿತವಾಗಲಿದ್ದು ಸರ್ಕಾರ ಈ ಬಗ್ಗೆ ಯೋಚಿಸಬೇಕಾಗಿದೆ.

ಬೆಂಗಳೂರು ನಗರದಲ್ಲಿ 800 ಘೋಷಿತ ಅಂದರೆ ಅಧಿಕೃತ ಸ್ಲಂಗಳಿವೆ. ಅಘೋಷಿತ ಸ್ಲಂಗಳು 200 ಇವೆ. ಅಂದರೆ ಸರ್ಕಾರ ಘೋಷಿಸಿರುವ ಅರ್ಧದಷ್ಟು ಸ್ಲಂಗಳು ಬೆಂಗಳೂರಿನಲ್ಲಿಯೇ ಇವೆ. ಬೆಂಗಳೂರು ಒಂದಕ್ಕೆ 25 ಸಾವಿರ ಲೀಟರ್ ಹಾಲು ವಿತರಿಸಲಾಗುತ್ತಿದೆ. ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. 2011 ನಂತರ ಹೊಸ ಕುಟುಂಬಗಳು ವಲಸೆ ಬಂದು ಸೇರ್ಪಡೆಯಾಗಿವೆ. ಚಿಕ್ಕಚಿಕ್ಕ ಕುಟೀರಗಳಲ್ಲಿ, ಡೇರೆಗಳಲ್ಲಿ ವಾಸಿಸುವ ಈ ಕುಟುಂಬಗಳು ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಂದೊಂದು ಕುಟುಂಬದಲ್ಲಿ 6-7 ಮಂದಿ ಇದ್ದು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಸ್ಲಂಗಳಲ್ಲಿ ಬಂದು ಸೇರಿಕೊಂಡಿರುವ ಬಲಾಢ್ಯರಿಂದಾಗಿ ಅವು ಬಡಾವಣೆಗಳಾಗಿ ಪರಿವರ್ತನೆಯಾಗಿವೆ. ಅಲ್ಲಿ ವಾಸಿಸುತ್ತಿದ್ದ ಸ್ಲಂ ನಿವಾಸಿ ಕುಟುಂಬಗಳು ಬೇರೆ ಕಡೆಗೆ ಹೋಗಿದ್ದು ಅರ್ಹ ಕುಟುಂಬಗಳಿಗೆ ಸಿಗಬೇಕಾದ ಸೌಲಭ್ಯಗಳ ಲಾಭ ಬಲಾಢ್ಯರು ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸ್ಲಂ ಜನರು, ಅಲೆಮಾರಿಗಳು ಹಂದಿಜೋಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಹೇಳುವಂತೆ ರಾಜ್ಯದಲ್ಲಿ 1500 ಸ್ಲಂಗಳನ್ನು ಸರ್ಕಾರ ಘೋಷಣೆ ಮಾಡುವುದು ಬಾಕಿ ಇದೆ. ಈ ಸ್ಲಂಗಳಲ್ಲಿ ಸುಮಾರು 55 ಲಕ್ಷ ಜನ ವಾಸ ಮಾಡುತ್ತಿದ್ದಾರೆ. ಅವರಲ್ಲಿ 20 ರಿಂದ 22 ಲಕ್ಷ ಮಂದಿ ಮಕ್ಕಳಿದ್ದಾರೆ. 18 ಲಕ್ಷ ಮಂದಿ ಯುವಜನರು ಇದ್ದಾರೆ. ಈಗ ಸರ್ಕಾರದ ಆಪತ್ಕಾಲದ ಹಾಲು ವಿತರಣೆ ಯೋಜನೆಯ ಲಾಭ ಈ ಅಘೋಷಿತ ಸ್ಲಂ ಜನರಿಗೆ ಸಿಗುತ್ತಿಲ್ಲ. ಸರ್ಕಾರ ಒಂದು ಕುಟುಂಬಕ್ಕೆ ಒಂದು ಲೀಟರ್ ವಿತರಿಸುವುದಾಗಿ ಹೇಳಿತ್ತು. ತಲುಪಬೇಕಾದವರಿಗೆ ತಲುಪದ ಹಿನ್ನೆಲೆಯಲ್ಲಿ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್ ಹಾಲು ವಿತರಿಸುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಹಾಲು ವಿತರಣೆ ಮಾಡುವುದರಲ್ಲಿ ಅನ್ಯಾಯವಾಗುತ್ತಿದೆ. ಅರ್ಹ ಕುಟುಂಬಗಳು ಈ ತಾತ್ಕಾಲಿಕ ಯೋಜನೆಯಿಂದ ವಂಚಿತವಾಗಿವೆ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ಲಂಗಳು ನಿರ್ಮಾಣವಾಗಿವೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕೆಲಸ ಅರಸಿಕೊಂಡು ಬಂದಿರುವ ಕುಟುಂಬಗಳು ಸ್ಲಂ ಪ್ರದೇಶದಲ್ಲಿ ಹಂಚಿಕೊಂಡು ಸೌರ್ಹಾತೆಯಿಂದ ಬದುಕುತ್ತಿವೆ. ಒಗ್ಗೂಡಿ ಸಹಬಾಳ್ವೆ ನಡೆಸುವ ಸ್ಲಂ ನಿವಾಸಿಗಳಿಗೆ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅಘೋಷಿತ ಸ್ಲಂಗಳಲ್ಲಿರುವ ಕುಟುಂಬಗಳು ಹಾಲು ಪಡೆಯಲು ಸಾಧ್ಯವಾಗಿಲ್ಲ. ಹಾಲು, ದಿನಸಿ ಎಲ್ಲರಿಗೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಪೌಷ್ಠಿಕತೆಯಲ್ಲಿ ಬಳಲುತ್ತಿರುವ ಮಕ್ಕಳು ಪೌಷ್ಟಿಕತೆಯಿಂದ ಬೆಳೆಯಲು ಅನುವಾಗುವಂತೆ ಸರ್ಕಾರ ನಿಗಾ ವಹಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಸರ್ಕಾರ ಇತ್ತ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...