Homeಮುಖಪುಟಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

ಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

- Advertisement -
- Advertisement -

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಲಂನಿವಾಸಿ ಕುಟುಂಬಗಳಿಗೆ ಹಾಲು ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಹಾಗೆ ಹಾಲು ವಿತರಿಸುವ ವೇಳೆಯಲ್ಲಿ ಎಲ್ಲ ಕುಟುಂಬಗಳಿಗೆ ಹಾಲು ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾದುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ಆತುರದಲ್ಲಿ ಹಾಲು ನೀಡುವುದಕ್ಕೆ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಘೋಷಿತ ಸ್ಲಂಗಳಿಗೆ ಮಾತ್ರ ಹಾಲು ನೀಡುತ್ತಿದ್ದು ಅಘೋಷಿತ ಸ್ಲಂ ಕುಟುಂಬಗಳಿಗೆ ಹಾಲು ದೊರೆಯುತ್ತಿಲ್ಲ. ಕೆಲವು ಸ್ಲಂಗಳು ಪರಿವರ್ತನೆ ಆಗಿ ಬಡಾವಣೆಗಳಾಗಿವೆ. ಸ್ಲಂಗಳ ನಡುವೆ ಬಲಾಢ್ಯ ಕುಟುಂಬಗಳು ಸೇರಿ ಹೋಗಿವೆ. ಹೀಗಾಗಿ ಅರ್ಹ ಕುಟುಂಬಗಳಿಗೆ ಸಿಗಬೇಕಾದ ಹಾಲು ಬೇರೆಯವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ  ಸರ್ಕಾರವೇ ಘೋಷಿಸಿರುವಂತೆ 2804 ಸ್ಲಂಗಳಿವೆ. ಈ ಸ್ಲಂಗಳಲ್ಲಿ 45 ಲಕ್ಷ ಮಂದಿ ಜನ ವಾಸಿಸುತ್ತಿದ್ದಾರೆ. ಇವರ ಪೈಕಿ 12 ಲಕ್ಷ ಮಂದಿ ಮಕ್ಕಳೇ ಇದ್ದಾರೆಂಬುದು ಗಮನಾರ್ಹ ಸಂಗತಿ. ಘೋಷಿತ ಸ್ಲಂ ನಿವಾಸಿಗಳಿಗೆ ಒಟ್ಟು 7 ಲಕ್ಷ ಲೀಟರ್ ಹಾಲು ವಿತರಿಸುವ ಒಳ್ಳೆಯ ಕೆಲಸಕ್ಕೆ ಸರ್ಕಾರ ಕೈಹಾಕಿದ್ದರೂ ನಿಜವಾಗಿಯೂ ತಲುಪಬೇಕಾದವರಿಗೆ ಹಾಲು ತಲುಪುತ್ತಿಲ್ಲ. ರಾಜ್ಯ ಸರ್ಕಾರ 2011 ಗಣತಿಯನ್ನಾಧರಿಸಿ ಸ್ಲಂ ಕುಟುಂಬಗಳಿಗೆ ಹಾಲು ವಿತರಿಸುತ್ತಿದೆ. ಕಳೆದ 8 ವರ್ಷಗಳಲ್ಲಿ ಸ್ಲಂಗಳ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಬಡ ಕುಟುಂಬಗಳು ಹೊಸದಾಗಿ ಸೇರ್ಪಡೆಯಾಗಿದೆ. ಈ ಕುಟುಂಬಗಳಿಗೆ ಹಾಲು ಸಿಗುತ್ತಿಲ್ಲ. ಅರ್ಹ ಫಲನುಭವಿ ಕುಟುಂಬಗಳು ಸರ್ಕಾರದ ಆಪತ್ಕಾಲದ ಯೋಜನೆಯಿಂದ ವಂಚಿತವಾಗಲಿದ್ದು ಸರ್ಕಾರ ಈ ಬಗ್ಗೆ ಯೋಚಿಸಬೇಕಾಗಿದೆ.

ಬೆಂಗಳೂರು ನಗರದಲ್ಲಿ 800 ಘೋಷಿತ ಅಂದರೆ ಅಧಿಕೃತ ಸ್ಲಂಗಳಿವೆ. ಅಘೋಷಿತ ಸ್ಲಂಗಳು 200 ಇವೆ. ಅಂದರೆ ಸರ್ಕಾರ ಘೋಷಿಸಿರುವ ಅರ್ಧದಷ್ಟು ಸ್ಲಂಗಳು ಬೆಂಗಳೂರಿನಲ್ಲಿಯೇ ಇವೆ. ಬೆಂಗಳೂರು ಒಂದಕ್ಕೆ 25 ಸಾವಿರ ಲೀಟರ್ ಹಾಲು ವಿತರಿಸಲಾಗುತ್ತಿದೆ. ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. 2011 ನಂತರ ಹೊಸ ಕುಟುಂಬಗಳು ವಲಸೆ ಬಂದು ಸೇರ್ಪಡೆಯಾಗಿವೆ. ಚಿಕ್ಕಚಿಕ್ಕ ಕುಟೀರಗಳಲ್ಲಿ, ಡೇರೆಗಳಲ್ಲಿ ವಾಸಿಸುವ ಈ ಕುಟುಂಬಗಳು ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಂದೊಂದು ಕುಟುಂಬದಲ್ಲಿ 6-7 ಮಂದಿ ಇದ್ದು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಸ್ಲಂಗಳಲ್ಲಿ ಬಂದು ಸೇರಿಕೊಂಡಿರುವ ಬಲಾಢ್ಯರಿಂದಾಗಿ ಅವು ಬಡಾವಣೆಗಳಾಗಿ ಪರಿವರ್ತನೆಯಾಗಿವೆ. ಅಲ್ಲಿ ವಾಸಿಸುತ್ತಿದ್ದ ಸ್ಲಂ ನಿವಾಸಿ ಕುಟುಂಬಗಳು ಬೇರೆ ಕಡೆಗೆ ಹೋಗಿದ್ದು ಅರ್ಹ ಕುಟುಂಬಗಳಿಗೆ ಸಿಗಬೇಕಾದ ಸೌಲಭ್ಯಗಳ ಲಾಭ ಬಲಾಢ್ಯರು ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸ್ಲಂ ಜನರು, ಅಲೆಮಾರಿಗಳು ಹಂದಿಜೋಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಹೇಳುವಂತೆ ರಾಜ್ಯದಲ್ಲಿ 1500 ಸ್ಲಂಗಳನ್ನು ಸರ್ಕಾರ ಘೋಷಣೆ ಮಾಡುವುದು ಬಾಕಿ ಇದೆ. ಈ ಸ್ಲಂಗಳಲ್ಲಿ ಸುಮಾರು 55 ಲಕ್ಷ ಜನ ವಾಸ ಮಾಡುತ್ತಿದ್ದಾರೆ. ಅವರಲ್ಲಿ 20 ರಿಂದ 22 ಲಕ್ಷ ಮಂದಿ ಮಕ್ಕಳಿದ್ದಾರೆ. 18 ಲಕ್ಷ ಮಂದಿ ಯುವಜನರು ಇದ್ದಾರೆ. ಈಗ ಸರ್ಕಾರದ ಆಪತ್ಕಾಲದ ಹಾಲು ವಿತರಣೆ ಯೋಜನೆಯ ಲಾಭ ಈ ಅಘೋಷಿತ ಸ್ಲಂ ಜನರಿಗೆ ಸಿಗುತ್ತಿಲ್ಲ. ಸರ್ಕಾರ ಒಂದು ಕುಟುಂಬಕ್ಕೆ ಒಂದು ಲೀಟರ್ ವಿತರಿಸುವುದಾಗಿ ಹೇಳಿತ್ತು. ತಲುಪಬೇಕಾದವರಿಗೆ ತಲುಪದ ಹಿನ್ನೆಲೆಯಲ್ಲಿ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್ ಹಾಲು ವಿತರಿಸುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಹಾಲು ವಿತರಣೆ ಮಾಡುವುದರಲ್ಲಿ ಅನ್ಯಾಯವಾಗುತ್ತಿದೆ. ಅರ್ಹ ಕುಟುಂಬಗಳು ಈ ತಾತ್ಕಾಲಿಕ ಯೋಜನೆಯಿಂದ ವಂಚಿತವಾಗಿವೆ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ಲಂಗಳು ನಿರ್ಮಾಣವಾಗಿವೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕೆಲಸ ಅರಸಿಕೊಂಡು ಬಂದಿರುವ ಕುಟುಂಬಗಳು ಸ್ಲಂ ಪ್ರದೇಶದಲ್ಲಿ ಹಂಚಿಕೊಂಡು ಸೌರ್ಹಾತೆಯಿಂದ ಬದುಕುತ್ತಿವೆ. ಒಗ್ಗೂಡಿ ಸಹಬಾಳ್ವೆ ನಡೆಸುವ ಸ್ಲಂ ನಿವಾಸಿಗಳಿಗೆ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅಘೋಷಿತ ಸ್ಲಂಗಳಲ್ಲಿರುವ ಕುಟುಂಬಗಳು ಹಾಲು ಪಡೆಯಲು ಸಾಧ್ಯವಾಗಿಲ್ಲ. ಹಾಲು, ದಿನಸಿ ಎಲ್ಲರಿಗೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಪೌಷ್ಠಿಕತೆಯಲ್ಲಿ ಬಳಲುತ್ತಿರುವ ಮಕ್ಕಳು ಪೌಷ್ಟಿಕತೆಯಿಂದ ಬೆಳೆಯಲು ಅನುವಾಗುವಂತೆ ಸರ್ಕಾರ ನಿಗಾ ವಹಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಸರ್ಕಾರ ಇತ್ತ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...