Homeಕರ್ನಾಟಕಹಾಲಿನ ದರ ₹5 ಏರಿಕೆ ಸಾಧ್ಯತೆ | ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಹಾಲಿನ ದರ ₹5 ಏರಿಕೆ ಸಾಧ್ಯತೆ | ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಂದಿನಿ ಹಾಲಿನ ದರ ಮತ್ತೊಮ್ಮೆ ಹೆಚ್ಚಿಸುವ  ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸುಳಿವು ನೀಡಿದ್ದು, ಈ ಕುರಿತು ಕೆಎಂಎಫ್ ನಿರ್ದೇಶಕರ ಸಭೆ ಕರೆದು ತೀರ್ಮಾನ ಕೈಗೊಳ್ಳುವಂತೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಸೂಚಿಸಿದ್ದಾರೆ. ಈ ವರ್ಷದ ಜೂನ್‌ನಲ್ಲಿ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) 500 ಮಿಲಿ ಸ್ಯಾಚೆಟ್‌ಗೆ ಹೆಚ್ಚುವರಿ 50 ಮಿಲಿ ಹಾಲು ನೀಡಿ ಹಾಲಿನ ದರವನ್ನು 2 ರೂ.ಗಳಷ್ಟು ಹೆಚ್ಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆಂಗಳೂರು ಹಾಲು ಒಕ್ಕೂಟದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಹಾಲಿನ ದರವನ್ನು 5 ರೂಪಾಯಿ ಹೆಚ್ಚಿಸುವಂತೆ ಸಹಕಾರಿ ಇಲಾಖೆ ಮನವಿ ಮಾಡಿದೆ ಎಂದು ಹೇಳಿದ್ದಾರೆ. ರೈತರ ಹಿತದೃಷ್ಟಿಯಿಂದ ಎಲ್ಲ ಭಾಗೀದಾರರ ಜತೆ ಸಭೆ ನಡೆಸಿ, ಬೆಲೆ ಹೆಚ್ಚಿಸಲಾಗುವುದು. ಈ ಏರಿಕೆಯಿಂದ ರೈತರಿಗೆ ನೇರವಾಗಿ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಆದರೆ ಈ ಏರಿಕೆಯ ಹೊರೆಯನ್ನು ಗ್ರಾಹಕರು ಭರಿಸಬೇಕೇ ಎಂಬುದನ್ನು ಸಿದ್ದರಾಮಯ್ಯ ಹೇಳಿಲ್ಲವಾದರೂ, ಹಾಲು ಸಂಗ್ರಹಣೆ ದರವನ್ನು ಹೆಚ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಅಲ್ಲದೆ, ಹಿಂದಿನಿಂದಲೂ ಪ್ರತಿ ಲೀಟರ್ ಹಾಲಿಗೆ 20 ಪೈಸೆಯನ್ನು ರೈತರು ಸಹಕಾರಿ ಸಂಘಗಳಿಗೆ ಪಾವತಿಸುವ ಪದ್ಧತಿ ಇದೆ. ಅದನ್ನೂ ಶೀಘ್ರದಲ್ಲೇ ನಿರ್ಧರಿಸುತ್ತೇವೆ. ನಾವು ಯಾವಾಗಲೂ ರೈತರ ಪರವಾಗಿದ್ದೇವೆ, ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂಓದಿ: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ : ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎಫ್‌ಐಆರ್ ದಾಖಲು

“ಇತ್ತೀಚೆಗಷ್ಟೇ ಸರ್ಕಾರ ಹಾಲಿನ ದರವನ್ನು ಹೆಚ್ಚಿಸಿದಾಗ ಜನರಿಗೆ ಹೊರೆಯಾಗುತ್ತದೆ ಎಂದು ಬಿಜೆಪಿಯವರು ಗದ್ದಲ ಎಬ್ಬಿಸಿದರು. ಆಗ ಬೆಲೆ ಏರಿಕೆಯ ಫಲಾನುಭವಿಗಳಾದ ನೀವು (ಹಾಲು ಉತ್ಪಾದಕರು) ಮೌನವಾಗಿದ್ದಿರಿ. ಆದರೆ ರೈತರಿಗೆ ಅನುಕೂಲವಾಗುವ ದರ ಏರಿಕೆಯನ್ನು ವಿರೋಧಿಸಿದ ಬಿಜೆಪಿ ನಾಯಕರ ಬಾಯಿ ಮುಚ್ಚಿಸಬೇಕಿತ್ತಲ್ಲವೇ” ಎಂದು ಮುಖ್ಯಮಂತ್ರಿ ಸಭಿಕರನ್ನು ಪ್ರಶ್ನಿಸಿದ್ದಾರೆ.

ಹಾಲಿನ ಉತ್ಪಾದನೆ ಹೆಚ್ಚಾದಾಗ ರೈತರಿಗೆ ಪ್ರೋತ್ಸಾಹಧನವನ್ನು ತಮ್ಮ ಸರ್ಕಾರ ಹೆಚ್ಚಿಸಿದೆ ಎಂದು ಹೇಳಿದ ಸಿಎಂ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹೆಚ್ಚುವರಿ ಹಾಲು ವಿತರಿಸಲು ಕ್ಷೀರ ಭಾಗ್ಯ ಯೋಜನೆ ಜಾರಿಗೆ ತಂದೆವು ಎಂದು ಹೇಳಿದ್ದಾರೆ. ಈ ನಡುವೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು, ರೈತರಿಗೆ ಏನನ್ನೂ ಮಾಡದವರು ಮಣ್ಣಿನ ಮಗ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೊನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Increase in milk price is unprecedented and condemnable. They have increased two rupees three months back. Government should be ashamed to think about price increase

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...