Homeಮುಖಪುಟ‘ಫ್ಲೈಯಿಂಗ್ ಸಿಖ್’ ಮಿಲ್ಖಾ ಸಿಂಗ್ (91) ನಿಧನ

‘ಫ್ಲೈಯಿಂಗ್ ಸಿಖ್’ ಮಿಲ್ಖಾ ಸಿಂಗ್ (91) ನಿಧನ

- Advertisement -
- Advertisement -

ಭಾರತದ ಶ್ರೇಷ್ಠ ಕ್ರೀಡಾಪಟುಗಳಲ್ಲಿ ಒಬ್ಬರಾದ ಮಿಲ್ಖಾ ಸಿಂಗ್ ಅವರು ಕೊರೊನಾ ಸಂಬಂಧಿತ ತೊಂದರೆಗಳಿಂದಾಗಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ‘ಫ್ಲೈಯಿಂಗ್ ಸಿಖ್’ ಎಂದೇ ಜನಪ್ರಿಯವಾಗಿರುವ ಮಿಲ್ಖಾ ಸಿಂಗ್ ನಾಲ್ಕು ಏಷ್ಯನ್ ಚಿನ್ನದ ಪದಕಗಳನ್ನು ಗೆದ್ದಿದ್ದರು. 1960 ರ ರೋಮ್ ಒಲಿಂಪಿಕ್ಸ್‌ನಲ್ಲಿ 400 ಮೀಟರ್‌ ಫೈನಲ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು.

ಅವರ ಕುರಿತು 2013 ರಲ್ಲಿ ‘ಭಾಗ್‌ ಮಿಲ್ಖಾ ಭಾಗ್’ ಎಂಬ ಬಾಲಿವುಡ್‌ ಸಿನಿಮಾವನ್ನು ಮಾಡಲಾಗಿತ್ತು.

ಮಿಲ್ಖಾ ಅವರ ಪತ್ನಿ, ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೂಡಾ ಈ ವಾರದ ಆರಂಭದಲ್ಲಿ ಕೊರೊನಾ ಸೋಂಕಿಗೆ ನಿಧನರಾಗಿದ್ದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ತಿಂಗಳು ಕೊರೊನಾಗೆ ತುತ್ತಾಗಿದ್ದ ಮಿಲ್ಖಾ ಸೋಂಕಿನ ತೊಂದರೆಗಳಿಗಾಗಿ ಚಂಡೀಗಡದ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ತಡರಾತ್ರಿ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಎಚ್. ಎಸ್. ದೊರೆಸ್ವಾಮಿ ಸದಾ ಜಾಗೃತವಾಗಿರುತ್ತಿದ್ದ ಪ್ರಜ್ಞೆ: ಡಾ. ಎ ಎಸ್ ಪ್ರಭಾಕರ್

ಮಿಲ್ಖಾ ಸಿಂಗ್ ಅವರನ್ನು ಸ್ವತಂತ್ರ ಭಾರತದ ಮೊದಲ ಕ್ರೀಡಾ ಸೂಪರ್‌ ಸ್ಟಾರ್‌‌ ಎಂದೇ ಬಣ್ಣಿಸಲಾಗಿತ್ತು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸಲ್ಲಿಸಿದ್ದಾರೆ.

ಪ್ರಧಾನಿ ತನ್ನ ಟ್ವೀಟ್‌ನಲ್ಲಿ, “ನಾನು ಕೆಲವು ದಿನಗಳ ಹಿಂದೆ ಮಿಲ್ಖಾ ಸಿಂಗ್‌ ಅವರೊಂದಿಗೆ ಮಾತನಾಡಿದ್ದೆ. ಇದುವೆ ನಮ್ಮ ಕೊನೆಯ ಸಂಭಾಷಣೆ ಎಂದು ನನಗೆ ತಿಳಿದಿರಲಿಲ್ಲ. ಹಲವಾರು ಉದಯೋನ್ಮುಖ ಕ್ರೀಡಾಪಟುಗಳು ಅವರಿಂದ ಪ್ರಭಾವಿತರಾಗಿದ್ದಾರೆ. ಅವರ ಕುಟುಂಬ ಮತ್ತು ಪ್ರಪಂಚದಾದ್ಯಂತ ಇರುವ ಅವರ ಅನೇಕ ಅಭಿಮಾನಿಗಳಿಗೆ ನನ್ನ ಸಂತಾಪ” ಎಂದು ಬರೆದಿದ್ದಾರೆ.

ಟ್ರ್ಯಾಕ್ ಮತ್ತು ಮೈದಾನದಲ್ಲಿ ಮಿಲ್ಖಾ ಅವರ ಸಾಧನೆಯು ಭಾರತದಲ್ಲಿ ಒಂದು ದಂತಕತೆಯಾಗಿದೆ. ಅವರು ಅಂತರ್‌ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಐದು ಚಿನ್ನ ಗೆದ್ದಿದ್ದಾರೆ. ತನ್ನ 80 ಅಂತರರಾಷ್ಟ್ರೀಯ ರೇಸ್‌ಗಳಲ್ಲಿ 77 ಪಂದ್ಯಗಳನ್ನು ಗೆದ್ದಿದ್ದಕ್ಕಾಗಿ 1959 ರಲ್ಲಿ “ಹೆಲ್ಮ್ಸ್ ವರ್ಲ್ಡ್ ಟ್ರೋಫಿ”ಯನ್ನು ಪಡೆದ್ದಾರೆ. 1958 ರಲ್ಲಿ ಅವರು ಭಾರತದ ಮೊದಲ ಕಾಮನ್ವೆಲ್ತ್ ಚಿನ್ನವನ್ನೂ ಗೆದ್ದಿದ್ದಾರೆ.

ಇದನ್ನೂ ಓದಿ: ಭಾರತದ ಅಥ್ಲೆಟಿಕ್ ದಂತಕಥೆ ಮಿಲ್ಕಾ ಸಿಂಗ್ ಆರೋಗ್ಯ ಸ್ಥಿತಿ ಮತ್ತೆ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...