Homeಅಂತರಾಷ್ಟ್ರೀಯ40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

- Advertisement -
- Advertisement -

150 ರಾಷ್ಟ್ರಗಳಲ್ಲಿ ಜಾಗತಿಕ ಹವಾಮಾನ ಮುಷ್ಕರದಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದಾಗ ನಿನ್ನೆ ವಿಶ್ವವು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ವರ್ಷದ ಹಿಂದೆಯಷ್ಟೇ ಸ್ವೀಡನ್ ನಲ್ಲಿ ಏಕಾಂಗಿಯಾಗಿ ಹವಾಮಾನ ವೈಪರಿತ್ಯದ ವಿರುದ್ಧ ಹೋರಾಟ ಆರಂಭಿಸಿದ್ದ 16 ವರ್ಷದ ಗ್ರೆಟಾ ಥನ್ಬರ್ಗ್ ನೀಡಿದ ಕರೆಗೆ ವಿಶ್ವಾದಾದ್ಯಂತ ಸಹಮತದ ದನಿಗಳು ಅಪ್ಪಳಿಸಿವೆ.

ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರಾಗಿದ್ದು ಶಾಲೆ ಮತ್ತು ಕೆಲಸ ಬಿಟ್ಟು ಪ್ರತಿಭಟನಾ ಪ್ರದರ್ಶನಗಳಿಗೆ ಸೇರಿದ್ದರು. ಈ ಚಳುವಳಿ ಮೂರು ಬೇಡಿಕೆಗಳ ಮೇಲೆ ಕೇಂದ್ರೀಕರಿಸಿದೆ: 100% ಶುದ್ಧ ಶಕ್ತಿ; ಮರುಬಳಕೆ ಮಾಡಲಾಗದ ಇಂಧನಗಳನ್ನು ಕಾಪಾಡುವುದು, ಮತ್ತು ಹವಾಮಾನ ನಿರಾಶ್ರಿತರಿಗೆ ಸಹಾಯ ಮಾಡುವುದು.

ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಮಧ್ಯಪ್ರಾಚ್ಯ, ಪೆಸಿಫಿಕ್ ದ್ವೀಪಗಳಲ್ಲಿ ಮತ್ತು ಉತ್ತರ ಮತ್ತು ದಕ್ಷಿಣ ಅಮೆರಿಕಾದಾದ್ಯಂತ ಪ್ರತಿಭಟನಾ ಪ್ರದರ್ಶನಗಳು ನಡೆದು ಜಗತ್ತಿನಾದ್ಯಂತ ಸದ್ದು ಮಾಡಿವೆ.

ಭಾರತದಲ್ಲಿ, ಜಾಗತಿಕ ಮುಷ್ಕರಗಳ ಭಾಗವಾಗಿ ದೇಶಾದ್ಯಂತ 26 ಕಾರ್ಯಕ್ರಮಗಳಿಗೆ 14,000 ಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಭಾರತದಲ್ಲಿ ತಕ್ಷಣದ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸುವಂತೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳು ದೆಹಲಿಯಲ್ಲಿ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದರು.

ನ್ಯೂಯಾರ್ಕ್  ನಿಂದ ಗ್ವಾಟೆಮಾಲಾ ನಗರ, ಸಿಡ್ನಿಯಿಂದ ಕಾಬೂಲ್ ಮತ್ತು ಕೇಪ್ ಟೌನ್ ಲಂಡನ್ ವರೆಗೆ, ವಿಶ್ವದಾದ್ಯಂತ ನೂರಾರು ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಪರಿಸರ ದುರಂತವನ್ನು ತಡೆಗಟ್ಟಲು ತಮ್ಮ ಸರ್ಕಾರಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಈ ಆಂದೋಲನವು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರಿಂದ ಸ್ಫೂರ್ತಿ ಪಡೆದಿದೆ. ಗ್ರೆಟಾ ಥನ್‌ಬರ್ಗ್, 16 ವರ್ಷದ ಸ್ವೀಡಿಷ್ ಯುವತಿಯು ಪ್ರತಿ ಶುಕ್ರವಾರ ಶಾಲೆಗೆ ಹೋಗದೆ  ಸ್ವೀಡಿಷ್ ಸಂಸತ್ತಿನ ಹೊರಗೆ ನಿಂತು ಬಲವಾದ ಹವಾಮಾನ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದಳು.

ಹೀಗೆ ಆರಂಭವಾದ ಚಳವಳಿ ದಿನೇ ದಿನೇ ವ್ಯಾಪಕ ಪ್ರಚಾರ ಪಡೆದುಕೊಂಡಿದೆ. ಕೆಲವೇ ದಿನಗಳಲ್ಲಿ ಇತರ ವಿದ್ಯಾರ್ಥಿಗಳು ತಮ್ಮದೇ ಸಮುದಾಯಗಳಲ್ಲಿ ಇದೇ ರೀತಿಯ ಪ್ರತಿಭಟನೆಯಲ್ಲಿ ತೊಡಗಿದರು.

ಥನ್ಬರ್ಗ್ 2018 ರ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನಂತರ, ಪ್ರತಿ ವಾರ ವಿಶ್ವದ ಎಲ್ಲಾ ಕಡೆ ವಿದ್ಯಾರ್ಥಿಗಳು ಮುಷ್ಕರಗಳನ್ನು ಆರಂಭಿಸಿದರು. 2019 ರಲ್ಲಿ, ಹಲವು ನಗರಗಳಲ್ಲಿ ತಲಾ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ ಎರಡು ಸಂಘಟಿತ ಪ್ರತಿಭಟನೆಗಳು ನಡೆದವು.

ಪಳೆಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನ ಮೂಲಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಹವಾಮಾನ ಬದಲಾವಣೆ ತಗ್ಗಿಸುವಿಕೆಯ ಕಾರ್ಯತಂತ್ರಗಳನ್ನು ಚರ್ಚಿಸಲು ವಿಶ್ವಸಂಸ್ಥೆಯ ತುರ್ತು ಹವಾಮಾನ ಶೃಂಗಸಭೆಗಾಗಿ ವಿಶ್ವ ನಾಯಕರು ನ್ಯೂಯಾರ್ಕ್‌ನಲ್ಲಿ ಭೇಟಿಯಾಗುವ ಮೂರು ದಿನಗಳ ಮೊದಲು ಈ ಮುಷ್ಕರ ನಡೆದಿದೆ.

350.org, ಅಮ್ನೆಸ್ಟಿ ಇಂಟರ್ನ್ಯಾಷನಲ್, ಅಳಿವಿನ ದಂಗೆ, ಗ್ರೀನ್‌ಪೀಸ್ ಇಂಟರ್ನ್ಯಾಷನಲ್, ಆಕ್ಸ್‌ಫ್ಯಾಮ್, ಡಬ್ಲ್ಯುಡಬ್ಲ್ಯುಎಫ್, ಪ್ಯಾಟಗೋನಿಯಾ, ಬೆನ್ & ಜೆರ್ರಿ, ಲಷ್, ಅಟ್ಲಾಸಿಯನ್ ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಅನೇಕ ಎನ್‌ಜಿಒಗಳು, ಒಕ್ಕೂಟಗಳು, ಸಾಮಾಜಿಕ ಚಳುವಳಿಗಳು ಮತ್ತು ಕಂಪನಿಗಳು ಸಹ ಮುಷ್ಕರದಲ್ಲಿ ಪಾಲ್ಗೊಂಡಿವೆ.

ನ್ಯೂಯಾರ್ಕ್ ನಗರದ ಸಾರ್ವಜನಿಕ ಶಾಲೆಗಳು ಪೋಷಕರ ಅನುಮತಿಯೊಂದಿಗೆ “ಹವಾಮಾನ ಮುಷ್ಕರಗಳಲ್ಲಿ” ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದಾರೆ. ಕೆಲವು ಆಸ್ಟ್ರೇಲಿಯಾದ ಕಂಪನಿಗಳು ವಹಿವಾಟು ನಡೆಸದೆ ತಮ್ಮ ಕಾರ್ಮಿಕರನ್ನು ಆಯಾ ನಗರಗಳಲ್ಲಿ ಮುಷ್ಕರಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿವೆ. ಎಲ್ಲಾ ಆಸ್ಟ್ರೇಲಿಯಾದ ಕಂಪೆನಿಗಳು ಹವಾಮಾನ ಕ್ರಮ ತೆಗೆದುಕೊಳ್ಳುವುದನ್ನು ಬೆಂಬಲಿಸುವಂತೆ ಸಲಹೆ ನೀಡಿವೆ.

ನಿನ್ನೆ ಒಂದೇ ದಿನ 150 ದೇಶಗಳಲ್ಲಿ 4,500 ಸ್ಥಳಗಳಲ್ಲಿ ಪ್ರತಿಭಟನೆ ನಡೆದಿದೆ. ಸೆಪ್ಟೆಂಬರ್ 20 ರಂದು ಜರ್ಮನ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ 14 ಲಕ್ಷ ಜನರು ಭಾಗವಹಿಸಿದ್ದರು ಎಂದು ಸಂಘಟಕರು ವರದಿ ಮಾಡಿದ್ದಾರೆ. ಮತ್ತು ಅಂದಾಜು 3,00,000 ಪ್ರತಿಭಟನಾಕಾರರು ಆಸ್ಟ್ರೇಲಿಯಾದ ಮುಷ್ಕರಗಳಲ್ಲಿ ಭಾಗವಹಿಸಿದ್ದು, ಲಂಡನ್‌ನಲ್ಲಿ ನಡೆದ ರ್ಯಾಲಿಯಲ್ಲಿ 1,00,000 ಮಂದಿ ಭಾಗವಹಿಸಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.

ನಿನ್ನೆ ಮಾತ್ರವಲ್ಲದೇ ಸೆಪ್ಟೆಂಬರ್ 20 ರಿಂದ 27 ರವರೆಗೆ ಪೂರ್ಣ ವಾರವನ್ನು ಮುಷ್ಕರ ಮಾಡಲು ಸಂಘಟಕರು ಯೋಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...