Homeಅಂತರಾಷ್ಟ್ರೀಯ40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

- Advertisement -
- Advertisement -

150 ರಾಷ್ಟ್ರಗಳಲ್ಲಿ ಜಾಗತಿಕ ಹವಾಮಾನ ಮುಷ್ಕರದಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದಾಗ ನಿನ್ನೆ ವಿಶ್ವವು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ವರ್ಷದ ಹಿಂದೆಯಷ್ಟೇ ಸ್ವೀಡನ್ ನಲ್ಲಿ ಏಕಾಂಗಿಯಾಗಿ ಹವಾಮಾನ ವೈಪರಿತ್ಯದ ವಿರುದ್ಧ ಹೋರಾಟ ಆರಂಭಿಸಿದ್ದ 16 ವರ್ಷದ ಗ್ರೆಟಾ ಥನ್ಬರ್ಗ್ ನೀಡಿದ ಕರೆಗೆ ವಿಶ್ವಾದಾದ್ಯಂತ ಸಹಮತದ ದನಿಗಳು ಅಪ್ಪಳಿಸಿವೆ.

ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರಾಗಿದ್ದು ಶಾಲೆ ಮತ್ತು ಕೆಲಸ ಬಿಟ್ಟು ಪ್ರತಿಭಟನಾ ಪ್ರದರ್ಶನಗಳಿಗೆ ಸೇರಿದ್ದರು. ಈ ಚಳುವಳಿ ಮೂರು ಬೇಡಿಕೆಗಳ ಮೇಲೆ ಕೇಂದ್ರೀಕರಿಸಿದೆ: 100% ಶುದ್ಧ ಶಕ್ತಿ; ಮರುಬಳಕೆ ಮಾಡಲಾಗದ ಇಂಧನಗಳನ್ನು ಕಾಪಾಡುವುದು, ಮತ್ತು ಹವಾಮಾನ ನಿರಾಶ್ರಿತರಿಗೆ ಸಹಾಯ ಮಾಡುವುದು.

ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಮಧ್ಯಪ್ರಾಚ್ಯ, ಪೆಸಿಫಿಕ್ ದ್ವೀಪಗಳಲ್ಲಿ ಮತ್ತು ಉತ್ತರ ಮತ್ತು ದಕ್ಷಿಣ ಅಮೆರಿಕಾದಾದ್ಯಂತ ಪ್ರತಿಭಟನಾ ಪ್ರದರ್ಶನಗಳು ನಡೆದು ಜಗತ್ತಿನಾದ್ಯಂತ ಸದ್ದು ಮಾಡಿವೆ.

ಭಾರತದಲ್ಲಿ, ಜಾಗತಿಕ ಮುಷ್ಕರಗಳ ಭಾಗವಾಗಿ ದೇಶಾದ್ಯಂತ 26 ಕಾರ್ಯಕ್ರಮಗಳಿಗೆ 14,000 ಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಭಾರತದಲ್ಲಿ ತಕ್ಷಣದ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸುವಂತೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳು ದೆಹಲಿಯಲ್ಲಿ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದರು.

ನ್ಯೂಯಾರ್ಕ್  ನಿಂದ ಗ್ವಾಟೆಮಾಲಾ ನಗರ, ಸಿಡ್ನಿಯಿಂದ ಕಾಬೂಲ್ ಮತ್ತು ಕೇಪ್ ಟೌನ್ ಲಂಡನ್ ವರೆಗೆ, ವಿಶ್ವದಾದ್ಯಂತ ನೂರಾರು ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಪರಿಸರ ದುರಂತವನ್ನು ತಡೆಗಟ್ಟಲು ತಮ್ಮ ಸರ್ಕಾರಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಈ ಆಂದೋಲನವು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರಿಂದ ಸ್ಫೂರ್ತಿ ಪಡೆದಿದೆ. ಗ್ರೆಟಾ ಥನ್‌ಬರ್ಗ್, 16 ವರ್ಷದ ಸ್ವೀಡಿಷ್ ಯುವತಿಯು ಪ್ರತಿ ಶುಕ್ರವಾರ ಶಾಲೆಗೆ ಹೋಗದೆ  ಸ್ವೀಡಿಷ್ ಸಂಸತ್ತಿನ ಹೊರಗೆ ನಿಂತು ಬಲವಾದ ಹವಾಮಾನ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದಳು.

ಹೀಗೆ ಆರಂಭವಾದ ಚಳವಳಿ ದಿನೇ ದಿನೇ ವ್ಯಾಪಕ ಪ್ರಚಾರ ಪಡೆದುಕೊಂಡಿದೆ. ಕೆಲವೇ ದಿನಗಳಲ್ಲಿ ಇತರ ವಿದ್ಯಾರ್ಥಿಗಳು ತಮ್ಮದೇ ಸಮುದಾಯಗಳಲ್ಲಿ ಇದೇ ರೀತಿಯ ಪ್ರತಿಭಟನೆಯಲ್ಲಿ ತೊಡಗಿದರು.

ಥನ್ಬರ್ಗ್ 2018 ರ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನಂತರ, ಪ್ರತಿ ವಾರ ವಿಶ್ವದ ಎಲ್ಲಾ ಕಡೆ ವಿದ್ಯಾರ್ಥಿಗಳು ಮುಷ್ಕರಗಳನ್ನು ಆರಂಭಿಸಿದರು. 2019 ರಲ್ಲಿ, ಹಲವು ನಗರಗಳಲ್ಲಿ ತಲಾ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ ಎರಡು ಸಂಘಟಿತ ಪ್ರತಿಭಟನೆಗಳು ನಡೆದವು.

ಪಳೆಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನ ಮೂಲಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಹವಾಮಾನ ಬದಲಾವಣೆ ತಗ್ಗಿಸುವಿಕೆಯ ಕಾರ್ಯತಂತ್ರಗಳನ್ನು ಚರ್ಚಿಸಲು ವಿಶ್ವಸಂಸ್ಥೆಯ ತುರ್ತು ಹವಾಮಾನ ಶೃಂಗಸಭೆಗಾಗಿ ವಿಶ್ವ ನಾಯಕರು ನ್ಯೂಯಾರ್ಕ್‌ನಲ್ಲಿ ಭೇಟಿಯಾಗುವ ಮೂರು ದಿನಗಳ ಮೊದಲು ಈ ಮುಷ್ಕರ ನಡೆದಿದೆ.

350.org, ಅಮ್ನೆಸ್ಟಿ ಇಂಟರ್ನ್ಯಾಷನಲ್, ಅಳಿವಿನ ದಂಗೆ, ಗ್ರೀನ್‌ಪೀಸ್ ಇಂಟರ್ನ್ಯಾಷನಲ್, ಆಕ್ಸ್‌ಫ್ಯಾಮ್, ಡಬ್ಲ್ಯುಡಬ್ಲ್ಯುಎಫ್, ಪ್ಯಾಟಗೋನಿಯಾ, ಬೆನ್ & ಜೆರ್ರಿ, ಲಷ್, ಅಟ್ಲಾಸಿಯನ್ ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಅನೇಕ ಎನ್‌ಜಿಒಗಳು, ಒಕ್ಕೂಟಗಳು, ಸಾಮಾಜಿಕ ಚಳುವಳಿಗಳು ಮತ್ತು ಕಂಪನಿಗಳು ಸಹ ಮುಷ್ಕರದಲ್ಲಿ ಪಾಲ್ಗೊಂಡಿವೆ.

ನ್ಯೂಯಾರ್ಕ್ ನಗರದ ಸಾರ್ವಜನಿಕ ಶಾಲೆಗಳು ಪೋಷಕರ ಅನುಮತಿಯೊಂದಿಗೆ “ಹವಾಮಾನ ಮುಷ್ಕರಗಳಲ್ಲಿ” ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದಾರೆ. ಕೆಲವು ಆಸ್ಟ್ರೇಲಿಯಾದ ಕಂಪನಿಗಳು ವಹಿವಾಟು ನಡೆಸದೆ ತಮ್ಮ ಕಾರ್ಮಿಕರನ್ನು ಆಯಾ ನಗರಗಳಲ್ಲಿ ಮುಷ್ಕರಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿವೆ. ಎಲ್ಲಾ ಆಸ್ಟ್ರೇಲಿಯಾದ ಕಂಪೆನಿಗಳು ಹವಾಮಾನ ಕ್ರಮ ತೆಗೆದುಕೊಳ್ಳುವುದನ್ನು ಬೆಂಬಲಿಸುವಂತೆ ಸಲಹೆ ನೀಡಿವೆ.

ನಿನ್ನೆ ಒಂದೇ ದಿನ 150 ದೇಶಗಳಲ್ಲಿ 4,500 ಸ್ಥಳಗಳಲ್ಲಿ ಪ್ರತಿಭಟನೆ ನಡೆದಿದೆ. ಸೆಪ್ಟೆಂಬರ್ 20 ರಂದು ಜರ್ಮನ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ 14 ಲಕ್ಷ ಜನರು ಭಾಗವಹಿಸಿದ್ದರು ಎಂದು ಸಂಘಟಕರು ವರದಿ ಮಾಡಿದ್ದಾರೆ. ಮತ್ತು ಅಂದಾಜು 3,00,000 ಪ್ರತಿಭಟನಾಕಾರರು ಆಸ್ಟ್ರೇಲಿಯಾದ ಮುಷ್ಕರಗಳಲ್ಲಿ ಭಾಗವಹಿಸಿದ್ದು, ಲಂಡನ್‌ನಲ್ಲಿ ನಡೆದ ರ್ಯಾಲಿಯಲ್ಲಿ 1,00,000 ಮಂದಿ ಭಾಗವಹಿಸಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.

ನಿನ್ನೆ ಮಾತ್ರವಲ್ಲದೇ ಸೆಪ್ಟೆಂಬರ್ 20 ರಿಂದ 27 ರವರೆಗೆ ಪೂರ್ಣ ವಾರವನ್ನು ಮುಷ್ಕರ ಮಾಡಲು ಸಂಘಟಕರು ಯೋಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...