Homeಅಂತರಾಷ್ಟ್ರೀಯ40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

- Advertisement -
- Advertisement -

150 ರಾಷ್ಟ್ರಗಳಲ್ಲಿ ಜಾಗತಿಕ ಹವಾಮಾನ ಮುಷ್ಕರದಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದಾಗ ನಿನ್ನೆ ವಿಶ್ವವು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ವರ್ಷದ ಹಿಂದೆಯಷ್ಟೇ ಸ್ವೀಡನ್ ನಲ್ಲಿ ಏಕಾಂಗಿಯಾಗಿ ಹವಾಮಾನ ವೈಪರಿತ್ಯದ ವಿರುದ್ಧ ಹೋರಾಟ ಆರಂಭಿಸಿದ್ದ 16 ವರ್ಷದ ಗ್ರೆಟಾ ಥನ್ಬರ್ಗ್ ನೀಡಿದ ಕರೆಗೆ ವಿಶ್ವಾದಾದ್ಯಂತ ಸಹಮತದ ದನಿಗಳು ಅಪ್ಪಳಿಸಿವೆ.

ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರಾಗಿದ್ದು ಶಾಲೆ ಮತ್ತು ಕೆಲಸ ಬಿಟ್ಟು ಪ್ರತಿಭಟನಾ ಪ್ರದರ್ಶನಗಳಿಗೆ ಸೇರಿದ್ದರು. ಈ ಚಳುವಳಿ ಮೂರು ಬೇಡಿಕೆಗಳ ಮೇಲೆ ಕೇಂದ್ರೀಕರಿಸಿದೆ: 100% ಶುದ್ಧ ಶಕ್ತಿ; ಮರುಬಳಕೆ ಮಾಡಲಾಗದ ಇಂಧನಗಳನ್ನು ಕಾಪಾಡುವುದು, ಮತ್ತು ಹವಾಮಾನ ನಿರಾಶ್ರಿತರಿಗೆ ಸಹಾಯ ಮಾಡುವುದು.

ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಮಧ್ಯಪ್ರಾಚ್ಯ, ಪೆಸಿಫಿಕ್ ದ್ವೀಪಗಳಲ್ಲಿ ಮತ್ತು ಉತ್ತರ ಮತ್ತು ದಕ್ಷಿಣ ಅಮೆರಿಕಾದಾದ್ಯಂತ ಪ್ರತಿಭಟನಾ ಪ್ರದರ್ಶನಗಳು ನಡೆದು ಜಗತ್ತಿನಾದ್ಯಂತ ಸದ್ದು ಮಾಡಿವೆ.

ಭಾರತದಲ್ಲಿ, ಜಾಗತಿಕ ಮುಷ್ಕರಗಳ ಭಾಗವಾಗಿ ದೇಶಾದ್ಯಂತ 26 ಕಾರ್ಯಕ್ರಮಗಳಿಗೆ 14,000 ಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಭಾರತದಲ್ಲಿ ತಕ್ಷಣದ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸುವಂತೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳು ದೆಹಲಿಯಲ್ಲಿ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದರು.

ನ್ಯೂಯಾರ್ಕ್  ನಿಂದ ಗ್ವಾಟೆಮಾಲಾ ನಗರ, ಸಿಡ್ನಿಯಿಂದ ಕಾಬೂಲ್ ಮತ್ತು ಕೇಪ್ ಟೌನ್ ಲಂಡನ್ ವರೆಗೆ, ವಿಶ್ವದಾದ್ಯಂತ ನೂರಾರು ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಪರಿಸರ ದುರಂತವನ್ನು ತಡೆಗಟ್ಟಲು ತಮ್ಮ ಸರ್ಕಾರಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಈ ಆಂದೋಲನವು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರಿಂದ ಸ್ಫೂರ್ತಿ ಪಡೆದಿದೆ. ಗ್ರೆಟಾ ಥನ್‌ಬರ್ಗ್, 16 ವರ್ಷದ ಸ್ವೀಡಿಷ್ ಯುವತಿಯು ಪ್ರತಿ ಶುಕ್ರವಾರ ಶಾಲೆಗೆ ಹೋಗದೆ  ಸ್ವೀಡಿಷ್ ಸಂಸತ್ತಿನ ಹೊರಗೆ ನಿಂತು ಬಲವಾದ ಹವಾಮಾನ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದಳು.

ಹೀಗೆ ಆರಂಭವಾದ ಚಳವಳಿ ದಿನೇ ದಿನೇ ವ್ಯಾಪಕ ಪ್ರಚಾರ ಪಡೆದುಕೊಂಡಿದೆ. ಕೆಲವೇ ದಿನಗಳಲ್ಲಿ ಇತರ ವಿದ್ಯಾರ್ಥಿಗಳು ತಮ್ಮದೇ ಸಮುದಾಯಗಳಲ್ಲಿ ಇದೇ ರೀತಿಯ ಪ್ರತಿಭಟನೆಯಲ್ಲಿ ತೊಡಗಿದರು.

ಥನ್ಬರ್ಗ್ 2018 ರ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನಂತರ, ಪ್ರತಿ ವಾರ ವಿಶ್ವದ ಎಲ್ಲಾ ಕಡೆ ವಿದ್ಯಾರ್ಥಿಗಳು ಮುಷ್ಕರಗಳನ್ನು ಆರಂಭಿಸಿದರು. 2019 ರಲ್ಲಿ, ಹಲವು ನಗರಗಳಲ್ಲಿ ತಲಾ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ ಎರಡು ಸಂಘಟಿತ ಪ್ರತಿಭಟನೆಗಳು ನಡೆದವು.

ಪಳೆಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನ ಮೂಲಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಹವಾಮಾನ ಬದಲಾವಣೆ ತಗ್ಗಿಸುವಿಕೆಯ ಕಾರ್ಯತಂತ್ರಗಳನ್ನು ಚರ್ಚಿಸಲು ವಿಶ್ವಸಂಸ್ಥೆಯ ತುರ್ತು ಹವಾಮಾನ ಶೃಂಗಸಭೆಗಾಗಿ ವಿಶ್ವ ನಾಯಕರು ನ್ಯೂಯಾರ್ಕ್‌ನಲ್ಲಿ ಭೇಟಿಯಾಗುವ ಮೂರು ದಿನಗಳ ಮೊದಲು ಈ ಮುಷ್ಕರ ನಡೆದಿದೆ.

350.org, ಅಮ್ನೆಸ್ಟಿ ಇಂಟರ್ನ್ಯಾಷನಲ್, ಅಳಿವಿನ ದಂಗೆ, ಗ್ರೀನ್‌ಪೀಸ್ ಇಂಟರ್ನ್ಯಾಷನಲ್, ಆಕ್ಸ್‌ಫ್ಯಾಮ್, ಡಬ್ಲ್ಯುಡಬ್ಲ್ಯುಎಫ್, ಪ್ಯಾಟಗೋನಿಯಾ, ಬೆನ್ & ಜೆರ್ರಿ, ಲಷ್, ಅಟ್ಲಾಸಿಯನ್ ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಅನೇಕ ಎನ್‌ಜಿಒಗಳು, ಒಕ್ಕೂಟಗಳು, ಸಾಮಾಜಿಕ ಚಳುವಳಿಗಳು ಮತ್ತು ಕಂಪನಿಗಳು ಸಹ ಮುಷ್ಕರದಲ್ಲಿ ಪಾಲ್ಗೊಂಡಿವೆ.

ನ್ಯೂಯಾರ್ಕ್ ನಗರದ ಸಾರ್ವಜನಿಕ ಶಾಲೆಗಳು ಪೋಷಕರ ಅನುಮತಿಯೊಂದಿಗೆ “ಹವಾಮಾನ ಮುಷ್ಕರಗಳಲ್ಲಿ” ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದಾರೆ. ಕೆಲವು ಆಸ್ಟ್ರೇಲಿಯಾದ ಕಂಪನಿಗಳು ವಹಿವಾಟು ನಡೆಸದೆ ತಮ್ಮ ಕಾರ್ಮಿಕರನ್ನು ಆಯಾ ನಗರಗಳಲ್ಲಿ ಮುಷ್ಕರಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿವೆ. ಎಲ್ಲಾ ಆಸ್ಟ್ರೇಲಿಯಾದ ಕಂಪೆನಿಗಳು ಹವಾಮಾನ ಕ್ರಮ ತೆಗೆದುಕೊಳ್ಳುವುದನ್ನು ಬೆಂಬಲಿಸುವಂತೆ ಸಲಹೆ ನೀಡಿವೆ.

ನಿನ್ನೆ ಒಂದೇ ದಿನ 150 ದೇಶಗಳಲ್ಲಿ 4,500 ಸ್ಥಳಗಳಲ್ಲಿ ಪ್ರತಿಭಟನೆ ನಡೆದಿದೆ. ಸೆಪ್ಟೆಂಬರ್ 20 ರಂದು ಜರ್ಮನ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ 14 ಲಕ್ಷ ಜನರು ಭಾಗವಹಿಸಿದ್ದರು ಎಂದು ಸಂಘಟಕರು ವರದಿ ಮಾಡಿದ್ದಾರೆ. ಮತ್ತು ಅಂದಾಜು 3,00,000 ಪ್ರತಿಭಟನಾಕಾರರು ಆಸ್ಟ್ರೇಲಿಯಾದ ಮುಷ್ಕರಗಳಲ್ಲಿ ಭಾಗವಹಿಸಿದ್ದು, ಲಂಡನ್‌ನಲ್ಲಿ ನಡೆದ ರ್ಯಾಲಿಯಲ್ಲಿ 1,00,000 ಮಂದಿ ಭಾಗವಹಿಸಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.

ನಿನ್ನೆ ಮಾತ್ರವಲ್ಲದೇ ಸೆಪ್ಟೆಂಬರ್ 20 ರಿಂದ 27 ರವರೆಗೆ ಪೂರ್ಣ ವಾರವನ್ನು ಮುಷ್ಕರ ಮಾಡಲು ಸಂಘಟಕರು ಯೋಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...