Homeಅಂತರಾಷ್ಟ್ರೀಯ40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

- Advertisement -
- Advertisement -

150 ರಾಷ್ಟ್ರಗಳಲ್ಲಿ ಜಾಗತಿಕ ಹವಾಮಾನ ಮುಷ್ಕರದಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದಾಗ ನಿನ್ನೆ ವಿಶ್ವವು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ವರ್ಷದ ಹಿಂದೆಯಷ್ಟೇ ಸ್ವೀಡನ್ ನಲ್ಲಿ ಏಕಾಂಗಿಯಾಗಿ ಹವಾಮಾನ ವೈಪರಿತ್ಯದ ವಿರುದ್ಧ ಹೋರಾಟ ಆರಂಭಿಸಿದ್ದ 16 ವರ್ಷದ ಗ್ರೆಟಾ ಥನ್ಬರ್ಗ್ ನೀಡಿದ ಕರೆಗೆ ವಿಶ್ವಾದಾದ್ಯಂತ ಸಹಮತದ ದನಿಗಳು ಅಪ್ಪಳಿಸಿವೆ.

ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರಾಗಿದ್ದು ಶಾಲೆ ಮತ್ತು ಕೆಲಸ ಬಿಟ್ಟು ಪ್ರತಿಭಟನಾ ಪ್ರದರ್ಶನಗಳಿಗೆ ಸೇರಿದ್ದರು. ಈ ಚಳುವಳಿ ಮೂರು ಬೇಡಿಕೆಗಳ ಮೇಲೆ ಕೇಂದ್ರೀಕರಿಸಿದೆ: 100% ಶುದ್ಧ ಶಕ್ತಿ; ಮರುಬಳಕೆ ಮಾಡಲಾಗದ ಇಂಧನಗಳನ್ನು ಕಾಪಾಡುವುದು, ಮತ್ತು ಹವಾಮಾನ ನಿರಾಶ್ರಿತರಿಗೆ ಸಹಾಯ ಮಾಡುವುದು.

ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಮಧ್ಯಪ್ರಾಚ್ಯ, ಪೆಸಿಫಿಕ್ ದ್ವೀಪಗಳಲ್ಲಿ ಮತ್ತು ಉತ್ತರ ಮತ್ತು ದಕ್ಷಿಣ ಅಮೆರಿಕಾದಾದ್ಯಂತ ಪ್ರತಿಭಟನಾ ಪ್ರದರ್ಶನಗಳು ನಡೆದು ಜಗತ್ತಿನಾದ್ಯಂತ ಸದ್ದು ಮಾಡಿವೆ.

ಭಾರತದಲ್ಲಿ, ಜಾಗತಿಕ ಮುಷ್ಕರಗಳ ಭಾಗವಾಗಿ ದೇಶಾದ್ಯಂತ 26 ಕಾರ್ಯಕ್ರಮಗಳಿಗೆ 14,000 ಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಭಾರತದಲ್ಲಿ ತಕ್ಷಣದ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸುವಂತೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳು ದೆಹಲಿಯಲ್ಲಿ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದರು.

ನ್ಯೂಯಾರ್ಕ್  ನಿಂದ ಗ್ವಾಟೆಮಾಲಾ ನಗರ, ಸಿಡ್ನಿಯಿಂದ ಕಾಬೂಲ್ ಮತ್ತು ಕೇಪ್ ಟೌನ್ ಲಂಡನ್ ವರೆಗೆ, ವಿಶ್ವದಾದ್ಯಂತ ನೂರಾರು ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಪರಿಸರ ದುರಂತವನ್ನು ತಡೆಗಟ್ಟಲು ತಮ್ಮ ಸರ್ಕಾರಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಈ ಆಂದೋಲನವು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರಿಂದ ಸ್ಫೂರ್ತಿ ಪಡೆದಿದೆ. ಗ್ರೆಟಾ ಥನ್‌ಬರ್ಗ್, 16 ವರ್ಷದ ಸ್ವೀಡಿಷ್ ಯುವತಿಯು ಪ್ರತಿ ಶುಕ್ರವಾರ ಶಾಲೆಗೆ ಹೋಗದೆ  ಸ್ವೀಡಿಷ್ ಸಂಸತ್ತಿನ ಹೊರಗೆ ನಿಂತು ಬಲವಾದ ಹವಾಮಾನ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದಳು.

ಹೀಗೆ ಆರಂಭವಾದ ಚಳವಳಿ ದಿನೇ ದಿನೇ ವ್ಯಾಪಕ ಪ್ರಚಾರ ಪಡೆದುಕೊಂಡಿದೆ. ಕೆಲವೇ ದಿನಗಳಲ್ಲಿ ಇತರ ವಿದ್ಯಾರ್ಥಿಗಳು ತಮ್ಮದೇ ಸಮುದಾಯಗಳಲ್ಲಿ ಇದೇ ರೀತಿಯ ಪ್ರತಿಭಟನೆಯಲ್ಲಿ ತೊಡಗಿದರು.

ಥನ್ಬರ್ಗ್ 2018 ರ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನಂತರ, ಪ್ರತಿ ವಾರ ವಿಶ್ವದ ಎಲ್ಲಾ ಕಡೆ ವಿದ್ಯಾರ್ಥಿಗಳು ಮುಷ್ಕರಗಳನ್ನು ಆರಂಭಿಸಿದರು. 2019 ರಲ್ಲಿ, ಹಲವು ನಗರಗಳಲ್ಲಿ ತಲಾ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ ಎರಡು ಸಂಘಟಿತ ಪ್ರತಿಭಟನೆಗಳು ನಡೆದವು.

ಪಳೆಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನ ಮೂಲಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಹವಾಮಾನ ಬದಲಾವಣೆ ತಗ್ಗಿಸುವಿಕೆಯ ಕಾರ್ಯತಂತ್ರಗಳನ್ನು ಚರ್ಚಿಸಲು ವಿಶ್ವಸಂಸ್ಥೆಯ ತುರ್ತು ಹವಾಮಾನ ಶೃಂಗಸಭೆಗಾಗಿ ವಿಶ್ವ ನಾಯಕರು ನ್ಯೂಯಾರ್ಕ್‌ನಲ್ಲಿ ಭೇಟಿಯಾಗುವ ಮೂರು ದಿನಗಳ ಮೊದಲು ಈ ಮುಷ್ಕರ ನಡೆದಿದೆ.

350.org, ಅಮ್ನೆಸ್ಟಿ ಇಂಟರ್ನ್ಯಾಷನಲ್, ಅಳಿವಿನ ದಂಗೆ, ಗ್ರೀನ್‌ಪೀಸ್ ಇಂಟರ್ನ್ಯಾಷನಲ್, ಆಕ್ಸ್‌ಫ್ಯಾಮ್, ಡಬ್ಲ್ಯುಡಬ್ಲ್ಯುಎಫ್, ಪ್ಯಾಟಗೋನಿಯಾ, ಬೆನ್ & ಜೆರ್ರಿ, ಲಷ್, ಅಟ್ಲಾಸಿಯನ್ ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಅನೇಕ ಎನ್‌ಜಿಒಗಳು, ಒಕ್ಕೂಟಗಳು, ಸಾಮಾಜಿಕ ಚಳುವಳಿಗಳು ಮತ್ತು ಕಂಪನಿಗಳು ಸಹ ಮುಷ್ಕರದಲ್ಲಿ ಪಾಲ್ಗೊಂಡಿವೆ.

ನ್ಯೂಯಾರ್ಕ್ ನಗರದ ಸಾರ್ವಜನಿಕ ಶಾಲೆಗಳು ಪೋಷಕರ ಅನುಮತಿಯೊಂದಿಗೆ “ಹವಾಮಾನ ಮುಷ್ಕರಗಳಲ್ಲಿ” ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದಾರೆ. ಕೆಲವು ಆಸ್ಟ್ರೇಲಿಯಾದ ಕಂಪನಿಗಳು ವಹಿವಾಟು ನಡೆಸದೆ ತಮ್ಮ ಕಾರ್ಮಿಕರನ್ನು ಆಯಾ ನಗರಗಳಲ್ಲಿ ಮುಷ್ಕರಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿವೆ. ಎಲ್ಲಾ ಆಸ್ಟ್ರೇಲಿಯಾದ ಕಂಪೆನಿಗಳು ಹವಾಮಾನ ಕ್ರಮ ತೆಗೆದುಕೊಳ್ಳುವುದನ್ನು ಬೆಂಬಲಿಸುವಂತೆ ಸಲಹೆ ನೀಡಿವೆ.

ನಿನ್ನೆ ಒಂದೇ ದಿನ 150 ದೇಶಗಳಲ್ಲಿ 4,500 ಸ್ಥಳಗಳಲ್ಲಿ ಪ್ರತಿಭಟನೆ ನಡೆದಿದೆ. ಸೆಪ್ಟೆಂಬರ್ 20 ರಂದು ಜರ್ಮನ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ 14 ಲಕ್ಷ ಜನರು ಭಾಗವಹಿಸಿದ್ದರು ಎಂದು ಸಂಘಟಕರು ವರದಿ ಮಾಡಿದ್ದಾರೆ. ಮತ್ತು ಅಂದಾಜು 3,00,000 ಪ್ರತಿಭಟನಾಕಾರರು ಆಸ್ಟ್ರೇಲಿಯಾದ ಮುಷ್ಕರಗಳಲ್ಲಿ ಭಾಗವಹಿಸಿದ್ದು, ಲಂಡನ್‌ನಲ್ಲಿ ನಡೆದ ರ್ಯಾಲಿಯಲ್ಲಿ 1,00,000 ಮಂದಿ ಭಾಗವಹಿಸಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.

ನಿನ್ನೆ ಮಾತ್ರವಲ್ಲದೇ ಸೆಪ್ಟೆಂಬರ್ 20 ರಿಂದ 27 ರವರೆಗೆ ಪೂರ್ಣ ವಾರವನ್ನು ಮುಷ್ಕರ ಮಾಡಲು ಸಂಘಟಕರು ಯೋಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...