Homeಅಂತರಾಷ್ಟ್ರೀಯ40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

- Advertisement -
- Advertisement -

150 ರಾಷ್ಟ್ರಗಳಲ್ಲಿ ಜಾಗತಿಕ ಹವಾಮಾನ ಮುಷ್ಕರದಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದಾಗ ನಿನ್ನೆ ವಿಶ್ವವು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ವರ್ಷದ ಹಿಂದೆಯಷ್ಟೇ ಸ್ವೀಡನ್ ನಲ್ಲಿ ಏಕಾಂಗಿಯಾಗಿ ಹವಾಮಾನ ವೈಪರಿತ್ಯದ ವಿರುದ್ಧ ಹೋರಾಟ ಆರಂಭಿಸಿದ್ದ 16 ವರ್ಷದ ಗ್ರೆಟಾ ಥನ್ಬರ್ಗ್ ನೀಡಿದ ಕರೆಗೆ ವಿಶ್ವಾದಾದ್ಯಂತ ಸಹಮತದ ದನಿಗಳು ಅಪ್ಪಳಿಸಿವೆ.

ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರಾಗಿದ್ದು ಶಾಲೆ ಮತ್ತು ಕೆಲಸ ಬಿಟ್ಟು ಪ್ರತಿಭಟನಾ ಪ್ರದರ್ಶನಗಳಿಗೆ ಸೇರಿದ್ದರು. ಈ ಚಳುವಳಿ ಮೂರು ಬೇಡಿಕೆಗಳ ಮೇಲೆ ಕೇಂದ್ರೀಕರಿಸಿದೆ: 100% ಶುದ್ಧ ಶಕ್ತಿ; ಮರುಬಳಕೆ ಮಾಡಲಾಗದ ಇಂಧನಗಳನ್ನು ಕಾಪಾಡುವುದು, ಮತ್ತು ಹವಾಮಾನ ನಿರಾಶ್ರಿತರಿಗೆ ಸಹಾಯ ಮಾಡುವುದು.

ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಮಧ್ಯಪ್ರಾಚ್ಯ, ಪೆಸಿಫಿಕ್ ದ್ವೀಪಗಳಲ್ಲಿ ಮತ್ತು ಉತ್ತರ ಮತ್ತು ದಕ್ಷಿಣ ಅಮೆರಿಕಾದಾದ್ಯಂತ ಪ್ರತಿಭಟನಾ ಪ್ರದರ್ಶನಗಳು ನಡೆದು ಜಗತ್ತಿನಾದ್ಯಂತ ಸದ್ದು ಮಾಡಿವೆ.

ಭಾರತದಲ್ಲಿ, ಜಾಗತಿಕ ಮುಷ್ಕರಗಳ ಭಾಗವಾಗಿ ದೇಶಾದ್ಯಂತ 26 ಕಾರ್ಯಕ್ರಮಗಳಿಗೆ 14,000 ಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಭಾರತದಲ್ಲಿ ತಕ್ಷಣದ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸುವಂತೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳು ದೆಹಲಿಯಲ್ಲಿ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದರು.

ನ್ಯೂಯಾರ್ಕ್  ನಿಂದ ಗ್ವಾಟೆಮಾಲಾ ನಗರ, ಸಿಡ್ನಿಯಿಂದ ಕಾಬೂಲ್ ಮತ್ತು ಕೇಪ್ ಟೌನ್ ಲಂಡನ್ ವರೆಗೆ, ವಿಶ್ವದಾದ್ಯಂತ ನೂರಾರು ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಪರಿಸರ ದುರಂತವನ್ನು ತಡೆಗಟ್ಟಲು ತಮ್ಮ ಸರ್ಕಾರಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಈ ಆಂದೋಲನವು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರಿಂದ ಸ್ಫೂರ್ತಿ ಪಡೆದಿದೆ. ಗ್ರೆಟಾ ಥನ್‌ಬರ್ಗ್, 16 ವರ್ಷದ ಸ್ವೀಡಿಷ್ ಯುವತಿಯು ಪ್ರತಿ ಶುಕ್ರವಾರ ಶಾಲೆಗೆ ಹೋಗದೆ  ಸ್ವೀಡಿಷ್ ಸಂಸತ್ತಿನ ಹೊರಗೆ ನಿಂತು ಬಲವಾದ ಹವಾಮಾನ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದಳು.

ಹೀಗೆ ಆರಂಭವಾದ ಚಳವಳಿ ದಿನೇ ದಿನೇ ವ್ಯಾಪಕ ಪ್ರಚಾರ ಪಡೆದುಕೊಂಡಿದೆ. ಕೆಲವೇ ದಿನಗಳಲ್ಲಿ ಇತರ ವಿದ್ಯಾರ್ಥಿಗಳು ತಮ್ಮದೇ ಸಮುದಾಯಗಳಲ್ಲಿ ಇದೇ ರೀತಿಯ ಪ್ರತಿಭಟನೆಯಲ್ಲಿ ತೊಡಗಿದರು.

ಥನ್ಬರ್ಗ್ 2018 ರ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನಂತರ, ಪ್ರತಿ ವಾರ ವಿಶ್ವದ ಎಲ್ಲಾ ಕಡೆ ವಿದ್ಯಾರ್ಥಿಗಳು ಮುಷ್ಕರಗಳನ್ನು ಆರಂಭಿಸಿದರು. 2019 ರಲ್ಲಿ, ಹಲವು ನಗರಗಳಲ್ಲಿ ತಲಾ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ ಎರಡು ಸಂಘಟಿತ ಪ್ರತಿಭಟನೆಗಳು ನಡೆದವು.

ಪಳೆಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನ ಮೂಲಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಹವಾಮಾನ ಬದಲಾವಣೆ ತಗ್ಗಿಸುವಿಕೆಯ ಕಾರ್ಯತಂತ್ರಗಳನ್ನು ಚರ್ಚಿಸಲು ವಿಶ್ವಸಂಸ್ಥೆಯ ತುರ್ತು ಹವಾಮಾನ ಶೃಂಗಸಭೆಗಾಗಿ ವಿಶ್ವ ನಾಯಕರು ನ್ಯೂಯಾರ್ಕ್‌ನಲ್ಲಿ ಭೇಟಿಯಾಗುವ ಮೂರು ದಿನಗಳ ಮೊದಲು ಈ ಮುಷ್ಕರ ನಡೆದಿದೆ.

350.org, ಅಮ್ನೆಸ್ಟಿ ಇಂಟರ್ನ್ಯಾಷನಲ್, ಅಳಿವಿನ ದಂಗೆ, ಗ್ರೀನ್‌ಪೀಸ್ ಇಂಟರ್ನ್ಯಾಷನಲ್, ಆಕ್ಸ್‌ಫ್ಯಾಮ್, ಡಬ್ಲ್ಯುಡಬ್ಲ್ಯುಎಫ್, ಪ್ಯಾಟಗೋನಿಯಾ, ಬೆನ್ & ಜೆರ್ರಿ, ಲಷ್, ಅಟ್ಲಾಸಿಯನ್ ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಅನೇಕ ಎನ್‌ಜಿಒಗಳು, ಒಕ್ಕೂಟಗಳು, ಸಾಮಾಜಿಕ ಚಳುವಳಿಗಳು ಮತ್ತು ಕಂಪನಿಗಳು ಸಹ ಮುಷ್ಕರದಲ್ಲಿ ಪಾಲ್ಗೊಂಡಿವೆ.

ನ್ಯೂಯಾರ್ಕ್ ನಗರದ ಸಾರ್ವಜನಿಕ ಶಾಲೆಗಳು ಪೋಷಕರ ಅನುಮತಿಯೊಂದಿಗೆ “ಹವಾಮಾನ ಮುಷ್ಕರಗಳಲ್ಲಿ” ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದಾರೆ. ಕೆಲವು ಆಸ್ಟ್ರೇಲಿಯಾದ ಕಂಪನಿಗಳು ವಹಿವಾಟು ನಡೆಸದೆ ತಮ್ಮ ಕಾರ್ಮಿಕರನ್ನು ಆಯಾ ನಗರಗಳಲ್ಲಿ ಮುಷ್ಕರಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿವೆ. ಎಲ್ಲಾ ಆಸ್ಟ್ರೇಲಿಯಾದ ಕಂಪೆನಿಗಳು ಹವಾಮಾನ ಕ್ರಮ ತೆಗೆದುಕೊಳ್ಳುವುದನ್ನು ಬೆಂಬಲಿಸುವಂತೆ ಸಲಹೆ ನೀಡಿವೆ.

ನಿನ್ನೆ ಒಂದೇ ದಿನ 150 ದೇಶಗಳಲ್ಲಿ 4,500 ಸ್ಥಳಗಳಲ್ಲಿ ಪ್ರತಿಭಟನೆ ನಡೆದಿದೆ. ಸೆಪ್ಟೆಂಬರ್ 20 ರಂದು ಜರ್ಮನ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ 14 ಲಕ್ಷ ಜನರು ಭಾಗವಹಿಸಿದ್ದರು ಎಂದು ಸಂಘಟಕರು ವರದಿ ಮಾಡಿದ್ದಾರೆ. ಮತ್ತು ಅಂದಾಜು 3,00,000 ಪ್ರತಿಭಟನಾಕಾರರು ಆಸ್ಟ್ರೇಲಿಯಾದ ಮುಷ್ಕರಗಳಲ್ಲಿ ಭಾಗವಹಿಸಿದ್ದು, ಲಂಡನ್‌ನಲ್ಲಿ ನಡೆದ ರ್ಯಾಲಿಯಲ್ಲಿ 1,00,000 ಮಂದಿ ಭಾಗವಹಿಸಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.

ನಿನ್ನೆ ಮಾತ್ರವಲ್ಲದೇ ಸೆಪ್ಟೆಂಬರ್ 20 ರಿಂದ 27 ರವರೆಗೆ ಪೂರ್ಣ ವಾರವನ್ನು ಮುಷ್ಕರ ಮಾಡಲು ಸಂಘಟಕರು ಯೋಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...