Homeಅಂತರಾಷ್ಟ್ರೀಯ40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

- Advertisement -
- Advertisement -

150 ರಾಷ್ಟ್ರಗಳಲ್ಲಿ ಜಾಗತಿಕ ಹವಾಮಾನ ಮುಷ್ಕರದಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದಾಗ ನಿನ್ನೆ ವಿಶ್ವವು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ವರ್ಷದ ಹಿಂದೆಯಷ್ಟೇ ಸ್ವೀಡನ್ ನಲ್ಲಿ ಏಕಾಂಗಿಯಾಗಿ ಹವಾಮಾನ ವೈಪರಿತ್ಯದ ವಿರುದ್ಧ ಹೋರಾಟ ಆರಂಭಿಸಿದ್ದ 16 ವರ್ಷದ ಗ್ರೆಟಾ ಥನ್ಬರ್ಗ್ ನೀಡಿದ ಕರೆಗೆ ವಿಶ್ವಾದಾದ್ಯಂತ ಸಹಮತದ ದನಿಗಳು ಅಪ್ಪಳಿಸಿವೆ.

ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರಾಗಿದ್ದು ಶಾಲೆ ಮತ್ತು ಕೆಲಸ ಬಿಟ್ಟು ಪ್ರತಿಭಟನಾ ಪ್ರದರ್ಶನಗಳಿಗೆ ಸೇರಿದ್ದರು. ಈ ಚಳುವಳಿ ಮೂರು ಬೇಡಿಕೆಗಳ ಮೇಲೆ ಕೇಂದ್ರೀಕರಿಸಿದೆ: 100% ಶುದ್ಧ ಶಕ್ತಿ; ಮರುಬಳಕೆ ಮಾಡಲಾಗದ ಇಂಧನಗಳನ್ನು ಕಾಪಾಡುವುದು, ಮತ್ತು ಹವಾಮಾನ ನಿರಾಶ್ರಿತರಿಗೆ ಸಹಾಯ ಮಾಡುವುದು.

ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಮಧ್ಯಪ್ರಾಚ್ಯ, ಪೆಸಿಫಿಕ್ ದ್ವೀಪಗಳಲ್ಲಿ ಮತ್ತು ಉತ್ತರ ಮತ್ತು ದಕ್ಷಿಣ ಅಮೆರಿಕಾದಾದ್ಯಂತ ಪ್ರತಿಭಟನಾ ಪ್ರದರ್ಶನಗಳು ನಡೆದು ಜಗತ್ತಿನಾದ್ಯಂತ ಸದ್ದು ಮಾಡಿವೆ.

ಭಾರತದಲ್ಲಿ, ಜಾಗತಿಕ ಮುಷ್ಕರಗಳ ಭಾಗವಾಗಿ ದೇಶಾದ್ಯಂತ 26 ಕಾರ್ಯಕ್ರಮಗಳಿಗೆ 14,000 ಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಭಾರತದಲ್ಲಿ ತಕ್ಷಣದ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸುವಂತೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳು ದೆಹಲಿಯಲ್ಲಿ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದರು.

ನ್ಯೂಯಾರ್ಕ್  ನಿಂದ ಗ್ವಾಟೆಮಾಲಾ ನಗರ, ಸಿಡ್ನಿಯಿಂದ ಕಾಬೂಲ್ ಮತ್ತು ಕೇಪ್ ಟೌನ್ ಲಂಡನ್ ವರೆಗೆ, ವಿಶ್ವದಾದ್ಯಂತ ನೂರಾರು ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಪರಿಸರ ದುರಂತವನ್ನು ತಡೆಗಟ್ಟಲು ತಮ್ಮ ಸರ್ಕಾರಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಈ ಆಂದೋಲನವು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರಿಂದ ಸ್ಫೂರ್ತಿ ಪಡೆದಿದೆ. ಗ್ರೆಟಾ ಥನ್‌ಬರ್ಗ್, 16 ವರ್ಷದ ಸ್ವೀಡಿಷ್ ಯುವತಿಯು ಪ್ರತಿ ಶುಕ್ರವಾರ ಶಾಲೆಗೆ ಹೋಗದೆ  ಸ್ವೀಡಿಷ್ ಸಂಸತ್ತಿನ ಹೊರಗೆ ನಿಂತು ಬಲವಾದ ಹವಾಮಾನ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದಳು.

ಹೀಗೆ ಆರಂಭವಾದ ಚಳವಳಿ ದಿನೇ ದಿನೇ ವ್ಯಾಪಕ ಪ್ರಚಾರ ಪಡೆದುಕೊಂಡಿದೆ. ಕೆಲವೇ ದಿನಗಳಲ್ಲಿ ಇತರ ವಿದ್ಯಾರ್ಥಿಗಳು ತಮ್ಮದೇ ಸಮುದಾಯಗಳಲ್ಲಿ ಇದೇ ರೀತಿಯ ಪ್ರತಿಭಟನೆಯಲ್ಲಿ ತೊಡಗಿದರು.

ಥನ್ಬರ್ಗ್ 2018 ರ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನಂತರ, ಪ್ರತಿ ವಾರ ವಿಶ್ವದ ಎಲ್ಲಾ ಕಡೆ ವಿದ್ಯಾರ್ಥಿಗಳು ಮುಷ್ಕರಗಳನ್ನು ಆರಂಭಿಸಿದರು. 2019 ರಲ್ಲಿ, ಹಲವು ನಗರಗಳಲ್ಲಿ ತಲಾ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ ಎರಡು ಸಂಘಟಿತ ಪ್ರತಿಭಟನೆಗಳು ನಡೆದವು.

ಪಳೆಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನ ಮೂಲಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಹವಾಮಾನ ಬದಲಾವಣೆ ತಗ್ಗಿಸುವಿಕೆಯ ಕಾರ್ಯತಂತ್ರಗಳನ್ನು ಚರ್ಚಿಸಲು ವಿಶ್ವಸಂಸ್ಥೆಯ ತುರ್ತು ಹವಾಮಾನ ಶೃಂಗಸಭೆಗಾಗಿ ವಿಶ್ವ ನಾಯಕರು ನ್ಯೂಯಾರ್ಕ್‌ನಲ್ಲಿ ಭೇಟಿಯಾಗುವ ಮೂರು ದಿನಗಳ ಮೊದಲು ಈ ಮುಷ್ಕರ ನಡೆದಿದೆ.

350.org, ಅಮ್ನೆಸ್ಟಿ ಇಂಟರ್ನ್ಯಾಷನಲ್, ಅಳಿವಿನ ದಂಗೆ, ಗ್ರೀನ್‌ಪೀಸ್ ಇಂಟರ್ನ್ಯಾಷನಲ್, ಆಕ್ಸ್‌ಫ್ಯಾಮ್, ಡಬ್ಲ್ಯುಡಬ್ಲ್ಯುಎಫ್, ಪ್ಯಾಟಗೋನಿಯಾ, ಬೆನ್ & ಜೆರ್ರಿ, ಲಷ್, ಅಟ್ಲಾಸಿಯನ್ ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಅನೇಕ ಎನ್‌ಜಿಒಗಳು, ಒಕ್ಕೂಟಗಳು, ಸಾಮಾಜಿಕ ಚಳುವಳಿಗಳು ಮತ್ತು ಕಂಪನಿಗಳು ಸಹ ಮುಷ್ಕರದಲ್ಲಿ ಪಾಲ್ಗೊಂಡಿವೆ.

ನ್ಯೂಯಾರ್ಕ್ ನಗರದ ಸಾರ್ವಜನಿಕ ಶಾಲೆಗಳು ಪೋಷಕರ ಅನುಮತಿಯೊಂದಿಗೆ “ಹವಾಮಾನ ಮುಷ್ಕರಗಳಲ್ಲಿ” ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದಾರೆ. ಕೆಲವು ಆಸ್ಟ್ರೇಲಿಯಾದ ಕಂಪನಿಗಳು ವಹಿವಾಟು ನಡೆಸದೆ ತಮ್ಮ ಕಾರ್ಮಿಕರನ್ನು ಆಯಾ ನಗರಗಳಲ್ಲಿ ಮುಷ್ಕರಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿವೆ. ಎಲ್ಲಾ ಆಸ್ಟ್ರೇಲಿಯಾದ ಕಂಪೆನಿಗಳು ಹವಾಮಾನ ಕ್ರಮ ತೆಗೆದುಕೊಳ್ಳುವುದನ್ನು ಬೆಂಬಲಿಸುವಂತೆ ಸಲಹೆ ನೀಡಿವೆ.

ನಿನ್ನೆ ಒಂದೇ ದಿನ 150 ದೇಶಗಳಲ್ಲಿ 4,500 ಸ್ಥಳಗಳಲ್ಲಿ ಪ್ರತಿಭಟನೆ ನಡೆದಿದೆ. ಸೆಪ್ಟೆಂಬರ್ 20 ರಂದು ಜರ್ಮನ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ 14 ಲಕ್ಷ ಜನರು ಭಾಗವಹಿಸಿದ್ದರು ಎಂದು ಸಂಘಟಕರು ವರದಿ ಮಾಡಿದ್ದಾರೆ. ಮತ್ತು ಅಂದಾಜು 3,00,000 ಪ್ರತಿಭಟನಾಕಾರರು ಆಸ್ಟ್ರೇಲಿಯಾದ ಮುಷ್ಕರಗಳಲ್ಲಿ ಭಾಗವಹಿಸಿದ್ದು, ಲಂಡನ್‌ನಲ್ಲಿ ನಡೆದ ರ್ಯಾಲಿಯಲ್ಲಿ 1,00,000 ಮಂದಿ ಭಾಗವಹಿಸಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.

ನಿನ್ನೆ ಮಾತ್ರವಲ್ಲದೇ ಸೆಪ್ಟೆಂಬರ್ 20 ರಿಂದ 27 ರವರೆಗೆ ಪೂರ್ಣ ವಾರವನ್ನು ಮುಷ್ಕರ ಮಾಡಲು ಸಂಘಟಕರು ಯೋಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...