Homeಅಂತರಾಷ್ಟ್ರೀಯ40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ ಹವಾಮಾನ ಪ್ರತಿಭಟನೆಗೆ ಕರೆಕೊಟ್ಟಿದ್ದು 16ರ ಬಾಲಕಿ!!

- Advertisement -
- Advertisement -

150 ರಾಷ್ಟ್ರಗಳಲ್ಲಿ ಜಾಗತಿಕ ಹವಾಮಾನ ಮುಷ್ಕರದಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದಾಗ ನಿನ್ನೆ ವಿಶ್ವವು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ವರ್ಷದ ಹಿಂದೆಯಷ್ಟೇ ಸ್ವೀಡನ್ ನಲ್ಲಿ ಏಕಾಂಗಿಯಾಗಿ ಹವಾಮಾನ ವೈಪರಿತ್ಯದ ವಿರುದ್ಧ ಹೋರಾಟ ಆರಂಭಿಸಿದ್ದ 16 ವರ್ಷದ ಗ್ರೆಟಾ ಥನ್ಬರ್ಗ್ ನೀಡಿದ ಕರೆಗೆ ವಿಶ್ವಾದಾದ್ಯಂತ ಸಹಮತದ ದನಿಗಳು ಅಪ್ಪಳಿಸಿವೆ.

ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರಾಗಿದ್ದು ಶಾಲೆ ಮತ್ತು ಕೆಲಸ ಬಿಟ್ಟು ಪ್ರತಿಭಟನಾ ಪ್ರದರ್ಶನಗಳಿಗೆ ಸೇರಿದ್ದರು. ಈ ಚಳುವಳಿ ಮೂರು ಬೇಡಿಕೆಗಳ ಮೇಲೆ ಕೇಂದ್ರೀಕರಿಸಿದೆ: 100% ಶುದ್ಧ ಶಕ್ತಿ; ಮರುಬಳಕೆ ಮಾಡಲಾಗದ ಇಂಧನಗಳನ್ನು ಕಾಪಾಡುವುದು, ಮತ್ತು ಹವಾಮಾನ ನಿರಾಶ್ರಿತರಿಗೆ ಸಹಾಯ ಮಾಡುವುದು.

ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಮಧ್ಯಪ್ರಾಚ್ಯ, ಪೆಸಿಫಿಕ್ ದ್ವೀಪಗಳಲ್ಲಿ ಮತ್ತು ಉತ್ತರ ಮತ್ತು ದಕ್ಷಿಣ ಅಮೆರಿಕಾದಾದ್ಯಂತ ಪ್ರತಿಭಟನಾ ಪ್ರದರ್ಶನಗಳು ನಡೆದು ಜಗತ್ತಿನಾದ್ಯಂತ ಸದ್ದು ಮಾಡಿವೆ.

ಭಾರತದಲ್ಲಿ, ಜಾಗತಿಕ ಮುಷ್ಕರಗಳ ಭಾಗವಾಗಿ ದೇಶಾದ್ಯಂತ 26 ಕಾರ್ಯಕ್ರಮಗಳಿಗೆ 14,000 ಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಭಾರತದಲ್ಲಿ ತಕ್ಷಣದ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸುವಂತೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳು ದೆಹಲಿಯಲ್ಲಿ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದರು.

ನ್ಯೂಯಾರ್ಕ್  ನಿಂದ ಗ್ವಾಟೆಮಾಲಾ ನಗರ, ಸಿಡ್ನಿಯಿಂದ ಕಾಬೂಲ್ ಮತ್ತು ಕೇಪ್ ಟೌನ್ ಲಂಡನ್ ವರೆಗೆ, ವಿಶ್ವದಾದ್ಯಂತ ನೂರಾರು ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಪರಿಸರ ದುರಂತವನ್ನು ತಡೆಗಟ್ಟಲು ತಮ್ಮ ಸರ್ಕಾರಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಈ ಆಂದೋಲನವು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರಿಂದ ಸ್ಫೂರ್ತಿ ಪಡೆದಿದೆ. ಗ್ರೆಟಾ ಥನ್‌ಬರ್ಗ್, 16 ವರ್ಷದ ಸ್ವೀಡಿಷ್ ಯುವತಿಯು ಪ್ರತಿ ಶುಕ್ರವಾರ ಶಾಲೆಗೆ ಹೋಗದೆ  ಸ್ವೀಡಿಷ್ ಸಂಸತ್ತಿನ ಹೊರಗೆ ನಿಂತು ಬಲವಾದ ಹವಾಮಾನ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದಳು.

ಹೀಗೆ ಆರಂಭವಾದ ಚಳವಳಿ ದಿನೇ ದಿನೇ ವ್ಯಾಪಕ ಪ್ರಚಾರ ಪಡೆದುಕೊಂಡಿದೆ. ಕೆಲವೇ ದಿನಗಳಲ್ಲಿ ಇತರ ವಿದ್ಯಾರ್ಥಿಗಳು ತಮ್ಮದೇ ಸಮುದಾಯಗಳಲ್ಲಿ ಇದೇ ರೀತಿಯ ಪ್ರತಿಭಟನೆಯಲ್ಲಿ ತೊಡಗಿದರು.

ಥನ್ಬರ್ಗ್ 2018 ರ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನಂತರ, ಪ್ರತಿ ವಾರ ವಿಶ್ವದ ಎಲ್ಲಾ ಕಡೆ ವಿದ್ಯಾರ್ಥಿಗಳು ಮುಷ್ಕರಗಳನ್ನು ಆರಂಭಿಸಿದರು. 2019 ರಲ್ಲಿ, ಹಲವು ನಗರಗಳಲ್ಲಿ ತಲಾ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ ಎರಡು ಸಂಘಟಿತ ಪ್ರತಿಭಟನೆಗಳು ನಡೆದವು.

ಪಳೆಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನ ಮೂಲಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಹವಾಮಾನ ಬದಲಾವಣೆ ತಗ್ಗಿಸುವಿಕೆಯ ಕಾರ್ಯತಂತ್ರಗಳನ್ನು ಚರ್ಚಿಸಲು ವಿಶ್ವಸಂಸ್ಥೆಯ ತುರ್ತು ಹವಾಮಾನ ಶೃಂಗಸಭೆಗಾಗಿ ವಿಶ್ವ ನಾಯಕರು ನ್ಯೂಯಾರ್ಕ್‌ನಲ್ಲಿ ಭೇಟಿಯಾಗುವ ಮೂರು ದಿನಗಳ ಮೊದಲು ಈ ಮುಷ್ಕರ ನಡೆದಿದೆ.

350.org, ಅಮ್ನೆಸ್ಟಿ ಇಂಟರ್ನ್ಯಾಷನಲ್, ಅಳಿವಿನ ದಂಗೆ, ಗ್ರೀನ್‌ಪೀಸ್ ಇಂಟರ್ನ್ಯಾಷನಲ್, ಆಕ್ಸ್‌ಫ್ಯಾಮ್, ಡಬ್ಲ್ಯುಡಬ್ಲ್ಯುಎಫ್, ಪ್ಯಾಟಗೋನಿಯಾ, ಬೆನ್ & ಜೆರ್ರಿ, ಲಷ್, ಅಟ್ಲಾಸಿಯನ್ ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಅನೇಕ ಎನ್‌ಜಿಒಗಳು, ಒಕ್ಕೂಟಗಳು, ಸಾಮಾಜಿಕ ಚಳುವಳಿಗಳು ಮತ್ತು ಕಂಪನಿಗಳು ಸಹ ಮುಷ್ಕರದಲ್ಲಿ ಪಾಲ್ಗೊಂಡಿವೆ.

ನ್ಯೂಯಾರ್ಕ್ ನಗರದ ಸಾರ್ವಜನಿಕ ಶಾಲೆಗಳು ಪೋಷಕರ ಅನುಮತಿಯೊಂದಿಗೆ “ಹವಾಮಾನ ಮುಷ್ಕರಗಳಲ್ಲಿ” ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದಾರೆ. ಕೆಲವು ಆಸ್ಟ್ರೇಲಿಯಾದ ಕಂಪನಿಗಳು ವಹಿವಾಟು ನಡೆಸದೆ ತಮ್ಮ ಕಾರ್ಮಿಕರನ್ನು ಆಯಾ ನಗರಗಳಲ್ಲಿ ಮುಷ್ಕರಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿವೆ. ಎಲ್ಲಾ ಆಸ್ಟ್ರೇಲಿಯಾದ ಕಂಪೆನಿಗಳು ಹವಾಮಾನ ಕ್ರಮ ತೆಗೆದುಕೊಳ್ಳುವುದನ್ನು ಬೆಂಬಲಿಸುವಂತೆ ಸಲಹೆ ನೀಡಿವೆ.

ನಿನ್ನೆ ಒಂದೇ ದಿನ 150 ದೇಶಗಳಲ್ಲಿ 4,500 ಸ್ಥಳಗಳಲ್ಲಿ ಪ್ರತಿಭಟನೆ ನಡೆದಿದೆ. ಸೆಪ್ಟೆಂಬರ್ 20 ರಂದು ಜರ್ಮನ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ 14 ಲಕ್ಷ ಜನರು ಭಾಗವಹಿಸಿದ್ದರು ಎಂದು ಸಂಘಟಕರು ವರದಿ ಮಾಡಿದ್ದಾರೆ. ಮತ್ತು ಅಂದಾಜು 3,00,000 ಪ್ರತಿಭಟನಾಕಾರರು ಆಸ್ಟ್ರೇಲಿಯಾದ ಮುಷ್ಕರಗಳಲ್ಲಿ ಭಾಗವಹಿಸಿದ್ದು, ಲಂಡನ್‌ನಲ್ಲಿ ನಡೆದ ರ್ಯಾಲಿಯಲ್ಲಿ 1,00,000 ಮಂದಿ ಭಾಗವಹಿಸಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.

ನಿನ್ನೆ ಮಾತ್ರವಲ್ಲದೇ ಸೆಪ್ಟೆಂಬರ್ 20 ರಿಂದ 27 ರವರೆಗೆ ಪೂರ್ಣ ವಾರವನ್ನು ಮುಷ್ಕರ ಮಾಡಲು ಸಂಘಟಕರು ಯೋಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...