Homeಮುಖಪುಟಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

- Advertisement -
- Advertisement -

ಮೌಢ್ಯಾಚರಣೆಯ ನಡುವೆಯು ಜೂನ್ 21ರಂದು ಸಂಭವಿಸಿದ ಸೂರ್ಯಗ್ರಹಣವನ್ನು ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿ ಆನಂದ ವ್ಯಕ್ತಪಡಿಸಿದರು. ಪ್ರಮುಖ ನಗರಗಳಲ್ಲಿ ಸೂರ್ಯಗ್ರಹಣ ವೀಕ್ಷಿಸಲು ಸೌರಕನ್ನಡಗಳು, ದೂರದರ್ಶಕಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಉತ್ತರ ಭಾರತದ ರಾಜಸ್ಥಾನ್‍ನಿಂದ ಹರಿಯಾಣದ ಶಿರ್ಸಾ, ಕುರುಕ್ಷೇತ್ರ, ಉತ್ತರಖಂಡದ ಡೆಹರಾಡೂನ್ ಹಾಗೂ ಜೋಶಿಮಟ ಮೂಲಕ ಚಂದ್ರನ ನೆರಳು ಭೂಮಿ ಮೇಲೆ ಹಾದುಹೋಯಿತು. ದೇಶದ ಕೆಲವು ಭಾಗಗಳಲ್ಲಿ ಶೇ. 99.7ರಷ್ಟು ಪ್ರಮಾಣದ ಸೂರ್ಯಗ್ರಹಣ ಗೋಚರವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಬೆಂಗಳೂರಿನ ನೆಹರು ತಾರಾಲಯದಲ್ಲಿ ಕಂಕಣ ಸೂರ್ಯಗ್ರಹಣ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿದ್ದರು. ವಿಜ್ಞಾನಿಗಳು, ವಿಜ್ಞಾನ ಚಳವಳಿಯ ಕಾರ್ಯಕರ್ತರು, ಮೌಢ್ಯಾಚರಣೆಯ ವಿರೋಧಿಗಳು, ವಿದ್ಯಾರ್ಥಿಗಳು ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.

ಖಗೋಳದಲ್ಲಿ ನಡೆಯಲಿರುವ ನೆರಳು ಬೆಳಕಿನ ಆಟವನ್ನು ನೋಡಿದ ಲಕ್ಷಾಂತರ ಜನರು ಗ್ರಹಣ ವೀಕ್ಷಣೆಯಿಂದ ಯಾವುದೇ ಜೀವಿಗಳ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಮನೆಯಿಂದ ಹೊರಬಂದದು ಖಗೋಳದಲ್ಲಿ ನಡೆಯುವ ವಿಸ್ಮಯವನ್ನು ನೋಡಬಹುದು ಎಂಬುದನ್ನು ಸಾರಿಹೇಳಿದರು.

ಕೆಲವು ಭಾಗಗಳಲ್ಲಿ ಸೂರ್ಯ ಗ್ರಹಣ ವೀಕ್ಷಣೆಗೆ ಮೋಡಗಳು ಅಡ್ಡಿಯಾದವು. ಉತ್ತರ ಬಾರತದಲ್ಲಿ ಕಂಕಣ ಗ್ರಹಣ ಕಂಡುಬಂದರೆ ದಕ್ಷಿಣ ಭಾರತದ ನಗರಗಳಲ್ಲಿ ಪಾರ್ಶ್ವ ಸೂರ್ಯಗ್ರಹಣ ಕಂಡುಬಂತು ಎಂದು ವರದಿಗಳು ತಿಳಿಸಿವೆ.

ತುಮಕೂರಿನ ವಿಜ್ಞಾನ ಕೇಂದ್ರ ಮತ್ತು ಜನಚಳವಳಿ ಕೇಂದ್ರದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು. ಸೌರಕನ್ನಡಗಳಿಂದ ನೂರಾರು ಮಂದಿ ಗ್ರಹಣ ನೋಡಿ ಆನಂದಪಟ್ಟರು. ಮಕ್ಕಳೂ ಕೂಡ ಪಾರ್ಶ್ವ ಗ್ರಹಣ ವೀಕ್ಷಿಸಿ ಸಂತೋಷಗೊಂಡರು. ತುಮಕೂರು ವಿಜ್ಞಾನ ಕೇಂದ್ರದಲ್ಲಿ ಮೌಢ್ಯಾಚರಣೆ ವಿರೋಧಿಸಿ ಗ್ರಹಣ ಸಮಯದಲ್ಲಿ ಮಂಡಕ್ಕಿ ಪುರಿ ಹಂಚಿಕೊಂಡು ತಿಂದರು.

ಜನಚಳವಳಿ ಕೇಂದ್ರದಲ್ಲಿ ಸೌರಕನ್ನಡಗಳನ್ನು ಬಳಸಿ ವಿವಿಧ ವಿಭಾಗಗಳ ಕಾರ್ಮಿಕರು ಸೂರ್ಯಗ್ರಹಣ ನೋಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗ್ರಹಣ ಕಾಲದಲ್ಲಿ ಏನನ್ನೂ ತಿನ್ನಬಾರದು ಎಂಬ ಮೂಢ ನಂಬಿಕೆ ಮುರಿಯಲು ಕಾರ್ಮಿಕರೆಲ್ಲರೂ ಉಪ್ಪಿಟ್ಟು ಮತ್ತು ಕೇಸರಿ ಬಾತ್ ಸೇವಿಸಿ ಸಂಪ್ರದಾಯ ಮುರಿದರು.

ಟಿವಿ ಮಾಧ್ಯಮಗಳಲ್ಲಿ ಜ್ಯೋತಿಷಿಗಳು ಸೂರ್ಯಗ್ರಹಣದಿಂದ ವಿವಿಧ ರಾಶಿಯ ಜನರಿಗೆ ತೊಂದರೆಗಳಾಗಲಿವೆ ಎಂದು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಬಹುತೇಕರು ಮನೆಯಲ್ಲೇ ಉಳಿದು ಮೌಢ್ಯತೆಯನ್ನು ಆಚರಿಸಿದರು. ಅಲ್ಲದೆ ಖಗೋಳದಲ್ಲಾಗುವ ವಿಸ್ಮಯವನ್ನು ನೋಡಲು ವಂಚಿತರಾದರು.


ಇದನ್ನೂ ಓದಿ: ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...