Homeಮುಖಪುಟಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

- Advertisement -
- Advertisement -

ಮೌಢ್ಯಾಚರಣೆಯ ನಡುವೆಯು ಜೂನ್ 21ರಂದು ಸಂಭವಿಸಿದ ಸೂರ್ಯಗ್ರಹಣವನ್ನು ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿ ಆನಂದ ವ್ಯಕ್ತಪಡಿಸಿದರು. ಪ್ರಮುಖ ನಗರಗಳಲ್ಲಿ ಸೂರ್ಯಗ್ರಹಣ ವೀಕ್ಷಿಸಲು ಸೌರಕನ್ನಡಗಳು, ದೂರದರ್ಶಕಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಉತ್ತರ ಭಾರತದ ರಾಜಸ್ಥಾನ್‍ನಿಂದ ಹರಿಯಾಣದ ಶಿರ್ಸಾ, ಕುರುಕ್ಷೇತ್ರ, ಉತ್ತರಖಂಡದ ಡೆಹರಾಡೂನ್ ಹಾಗೂ ಜೋಶಿಮಟ ಮೂಲಕ ಚಂದ್ರನ ನೆರಳು ಭೂಮಿ ಮೇಲೆ ಹಾದುಹೋಯಿತು. ದೇಶದ ಕೆಲವು ಭಾಗಗಳಲ್ಲಿ ಶೇ. 99.7ರಷ್ಟು ಪ್ರಮಾಣದ ಸೂರ್ಯಗ್ರಹಣ ಗೋಚರವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಬೆಂಗಳೂರಿನ ನೆಹರು ತಾರಾಲಯದಲ್ಲಿ ಕಂಕಣ ಸೂರ್ಯಗ್ರಹಣ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿದ್ದರು. ವಿಜ್ಞಾನಿಗಳು, ವಿಜ್ಞಾನ ಚಳವಳಿಯ ಕಾರ್ಯಕರ್ತರು, ಮೌಢ್ಯಾಚರಣೆಯ ವಿರೋಧಿಗಳು, ವಿದ್ಯಾರ್ಥಿಗಳು ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.

ಖಗೋಳದಲ್ಲಿ ನಡೆಯಲಿರುವ ನೆರಳು ಬೆಳಕಿನ ಆಟವನ್ನು ನೋಡಿದ ಲಕ್ಷಾಂತರ ಜನರು ಗ್ರಹಣ ವೀಕ್ಷಣೆಯಿಂದ ಯಾವುದೇ ಜೀವಿಗಳ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಮನೆಯಿಂದ ಹೊರಬಂದದು ಖಗೋಳದಲ್ಲಿ ನಡೆಯುವ ವಿಸ್ಮಯವನ್ನು ನೋಡಬಹುದು ಎಂಬುದನ್ನು ಸಾರಿಹೇಳಿದರು.

ಕೆಲವು ಭಾಗಗಳಲ್ಲಿ ಸೂರ್ಯ ಗ್ರಹಣ ವೀಕ್ಷಣೆಗೆ ಮೋಡಗಳು ಅಡ್ಡಿಯಾದವು. ಉತ್ತರ ಬಾರತದಲ್ಲಿ ಕಂಕಣ ಗ್ರಹಣ ಕಂಡುಬಂದರೆ ದಕ್ಷಿಣ ಭಾರತದ ನಗರಗಳಲ್ಲಿ ಪಾರ್ಶ್ವ ಸೂರ್ಯಗ್ರಹಣ ಕಂಡುಬಂತು ಎಂದು ವರದಿಗಳು ತಿಳಿಸಿವೆ.

ತುಮಕೂರಿನ ವಿಜ್ಞಾನ ಕೇಂದ್ರ ಮತ್ತು ಜನಚಳವಳಿ ಕೇಂದ್ರದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು. ಸೌರಕನ್ನಡಗಳಿಂದ ನೂರಾರು ಮಂದಿ ಗ್ರಹಣ ನೋಡಿ ಆನಂದಪಟ್ಟರು. ಮಕ್ಕಳೂ ಕೂಡ ಪಾರ್ಶ್ವ ಗ್ರಹಣ ವೀಕ್ಷಿಸಿ ಸಂತೋಷಗೊಂಡರು. ತುಮಕೂರು ವಿಜ್ಞಾನ ಕೇಂದ್ರದಲ್ಲಿ ಮೌಢ್ಯಾಚರಣೆ ವಿರೋಧಿಸಿ ಗ್ರಹಣ ಸಮಯದಲ್ಲಿ ಮಂಡಕ್ಕಿ ಪುರಿ ಹಂಚಿಕೊಂಡು ತಿಂದರು.

ಜನಚಳವಳಿ ಕೇಂದ್ರದಲ್ಲಿ ಸೌರಕನ್ನಡಗಳನ್ನು ಬಳಸಿ ವಿವಿಧ ವಿಭಾಗಗಳ ಕಾರ್ಮಿಕರು ಸೂರ್ಯಗ್ರಹಣ ನೋಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗ್ರಹಣ ಕಾಲದಲ್ಲಿ ಏನನ್ನೂ ತಿನ್ನಬಾರದು ಎಂಬ ಮೂಢ ನಂಬಿಕೆ ಮುರಿಯಲು ಕಾರ್ಮಿಕರೆಲ್ಲರೂ ಉಪ್ಪಿಟ್ಟು ಮತ್ತು ಕೇಸರಿ ಬಾತ್ ಸೇವಿಸಿ ಸಂಪ್ರದಾಯ ಮುರಿದರು.

ಟಿವಿ ಮಾಧ್ಯಮಗಳಲ್ಲಿ ಜ್ಯೋತಿಷಿಗಳು ಸೂರ್ಯಗ್ರಹಣದಿಂದ ವಿವಿಧ ರಾಶಿಯ ಜನರಿಗೆ ತೊಂದರೆಗಳಾಗಲಿವೆ ಎಂದು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಬಹುತೇಕರು ಮನೆಯಲ್ಲೇ ಉಳಿದು ಮೌಢ್ಯತೆಯನ್ನು ಆಚರಿಸಿದರು. ಅಲ್ಲದೆ ಖಗೋಳದಲ್ಲಾಗುವ ವಿಸ್ಮಯವನ್ನು ನೋಡಲು ವಂಚಿತರಾದರು.


ಇದನ್ನೂ ಓದಿ: ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...