Homeಮುಖಪುಟಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

- Advertisement -
- Advertisement -

ಮೌಢ್ಯಾಚರಣೆಯ ನಡುವೆಯು ಜೂನ್ 21ರಂದು ಸಂಭವಿಸಿದ ಸೂರ್ಯಗ್ರಹಣವನ್ನು ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿ ಆನಂದ ವ್ಯಕ್ತಪಡಿಸಿದರು. ಪ್ರಮುಖ ನಗರಗಳಲ್ಲಿ ಸೂರ್ಯಗ್ರಹಣ ವೀಕ್ಷಿಸಲು ಸೌರಕನ್ನಡಗಳು, ದೂರದರ್ಶಕಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಉತ್ತರ ಭಾರತದ ರಾಜಸ್ಥಾನ್‍ನಿಂದ ಹರಿಯಾಣದ ಶಿರ್ಸಾ, ಕುರುಕ್ಷೇತ್ರ, ಉತ್ತರಖಂಡದ ಡೆಹರಾಡೂನ್ ಹಾಗೂ ಜೋಶಿಮಟ ಮೂಲಕ ಚಂದ್ರನ ನೆರಳು ಭೂಮಿ ಮೇಲೆ ಹಾದುಹೋಯಿತು. ದೇಶದ ಕೆಲವು ಭಾಗಗಳಲ್ಲಿ ಶೇ. 99.7ರಷ್ಟು ಪ್ರಮಾಣದ ಸೂರ್ಯಗ್ರಹಣ ಗೋಚರವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಬೆಂಗಳೂರಿನ ನೆಹರು ತಾರಾಲಯದಲ್ಲಿ ಕಂಕಣ ಸೂರ್ಯಗ್ರಹಣ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿದ್ದರು. ವಿಜ್ಞಾನಿಗಳು, ವಿಜ್ಞಾನ ಚಳವಳಿಯ ಕಾರ್ಯಕರ್ತರು, ಮೌಢ್ಯಾಚರಣೆಯ ವಿರೋಧಿಗಳು, ವಿದ್ಯಾರ್ಥಿಗಳು ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.

ಖಗೋಳದಲ್ಲಿ ನಡೆಯಲಿರುವ ನೆರಳು ಬೆಳಕಿನ ಆಟವನ್ನು ನೋಡಿದ ಲಕ್ಷಾಂತರ ಜನರು ಗ್ರಹಣ ವೀಕ್ಷಣೆಯಿಂದ ಯಾವುದೇ ಜೀವಿಗಳ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಮನೆಯಿಂದ ಹೊರಬಂದದು ಖಗೋಳದಲ್ಲಿ ನಡೆಯುವ ವಿಸ್ಮಯವನ್ನು ನೋಡಬಹುದು ಎಂಬುದನ್ನು ಸಾರಿಹೇಳಿದರು.

ಕೆಲವು ಭಾಗಗಳಲ್ಲಿ ಸೂರ್ಯ ಗ್ರಹಣ ವೀಕ್ಷಣೆಗೆ ಮೋಡಗಳು ಅಡ್ಡಿಯಾದವು. ಉತ್ತರ ಬಾರತದಲ್ಲಿ ಕಂಕಣ ಗ್ರಹಣ ಕಂಡುಬಂದರೆ ದಕ್ಷಿಣ ಭಾರತದ ನಗರಗಳಲ್ಲಿ ಪಾರ್ಶ್ವ ಸೂರ್ಯಗ್ರಹಣ ಕಂಡುಬಂತು ಎಂದು ವರದಿಗಳು ತಿಳಿಸಿವೆ.

ತುಮಕೂರಿನ ವಿಜ್ಞಾನ ಕೇಂದ್ರ ಮತ್ತು ಜನಚಳವಳಿ ಕೇಂದ್ರದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು. ಸೌರಕನ್ನಡಗಳಿಂದ ನೂರಾರು ಮಂದಿ ಗ್ರಹಣ ನೋಡಿ ಆನಂದಪಟ್ಟರು. ಮಕ್ಕಳೂ ಕೂಡ ಪಾರ್ಶ್ವ ಗ್ರಹಣ ವೀಕ್ಷಿಸಿ ಸಂತೋಷಗೊಂಡರು. ತುಮಕೂರು ವಿಜ್ಞಾನ ಕೇಂದ್ರದಲ್ಲಿ ಮೌಢ್ಯಾಚರಣೆ ವಿರೋಧಿಸಿ ಗ್ರಹಣ ಸಮಯದಲ್ಲಿ ಮಂಡಕ್ಕಿ ಪುರಿ ಹಂಚಿಕೊಂಡು ತಿಂದರು.

ಜನಚಳವಳಿ ಕೇಂದ್ರದಲ್ಲಿ ಸೌರಕನ್ನಡಗಳನ್ನು ಬಳಸಿ ವಿವಿಧ ವಿಭಾಗಗಳ ಕಾರ್ಮಿಕರು ಸೂರ್ಯಗ್ರಹಣ ನೋಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗ್ರಹಣ ಕಾಲದಲ್ಲಿ ಏನನ್ನೂ ತಿನ್ನಬಾರದು ಎಂಬ ಮೂಢ ನಂಬಿಕೆ ಮುರಿಯಲು ಕಾರ್ಮಿಕರೆಲ್ಲರೂ ಉಪ್ಪಿಟ್ಟು ಮತ್ತು ಕೇಸರಿ ಬಾತ್ ಸೇವಿಸಿ ಸಂಪ್ರದಾಯ ಮುರಿದರು.

ಟಿವಿ ಮಾಧ್ಯಮಗಳಲ್ಲಿ ಜ್ಯೋತಿಷಿಗಳು ಸೂರ್ಯಗ್ರಹಣದಿಂದ ವಿವಿಧ ರಾಶಿಯ ಜನರಿಗೆ ತೊಂದರೆಗಳಾಗಲಿವೆ ಎಂದು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಬಹುತೇಕರು ಮನೆಯಲ್ಲೇ ಉಳಿದು ಮೌಢ್ಯತೆಯನ್ನು ಆಚರಿಸಿದರು. ಅಲ್ಲದೆ ಖಗೋಳದಲ್ಲಾಗುವ ವಿಸ್ಮಯವನ್ನು ನೋಡಲು ವಂಚಿತರಾದರು.


ಇದನ್ನೂ ಓದಿ: ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...