Homeಮುಖಪುಟಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

- Advertisement -
- Advertisement -

ಮೌಢ್ಯಾಚರಣೆಯ ನಡುವೆಯು ಜೂನ್ 21ರಂದು ಸಂಭವಿಸಿದ ಸೂರ್ಯಗ್ರಹಣವನ್ನು ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿ ಆನಂದ ವ್ಯಕ್ತಪಡಿಸಿದರು. ಪ್ರಮುಖ ನಗರಗಳಲ್ಲಿ ಸೂರ್ಯಗ್ರಹಣ ವೀಕ್ಷಿಸಲು ಸೌರಕನ್ನಡಗಳು, ದೂರದರ್ಶಕಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಉತ್ತರ ಭಾರತದ ರಾಜಸ್ಥಾನ್‍ನಿಂದ ಹರಿಯಾಣದ ಶಿರ್ಸಾ, ಕುರುಕ್ಷೇತ್ರ, ಉತ್ತರಖಂಡದ ಡೆಹರಾಡೂನ್ ಹಾಗೂ ಜೋಶಿಮಟ ಮೂಲಕ ಚಂದ್ರನ ನೆರಳು ಭೂಮಿ ಮೇಲೆ ಹಾದುಹೋಯಿತು. ದೇಶದ ಕೆಲವು ಭಾಗಗಳಲ್ಲಿ ಶೇ. 99.7ರಷ್ಟು ಪ್ರಮಾಣದ ಸೂರ್ಯಗ್ರಹಣ ಗೋಚರವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಬೆಂಗಳೂರಿನ ನೆಹರು ತಾರಾಲಯದಲ್ಲಿ ಕಂಕಣ ಸೂರ್ಯಗ್ರಹಣ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿದ್ದರು. ವಿಜ್ಞಾನಿಗಳು, ವಿಜ್ಞಾನ ಚಳವಳಿಯ ಕಾರ್ಯಕರ್ತರು, ಮೌಢ್ಯಾಚರಣೆಯ ವಿರೋಧಿಗಳು, ವಿದ್ಯಾರ್ಥಿಗಳು ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.

ಖಗೋಳದಲ್ಲಿ ನಡೆಯಲಿರುವ ನೆರಳು ಬೆಳಕಿನ ಆಟವನ್ನು ನೋಡಿದ ಲಕ್ಷಾಂತರ ಜನರು ಗ್ರಹಣ ವೀಕ್ಷಣೆಯಿಂದ ಯಾವುದೇ ಜೀವಿಗಳ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಮನೆಯಿಂದ ಹೊರಬಂದದು ಖಗೋಳದಲ್ಲಿ ನಡೆಯುವ ವಿಸ್ಮಯವನ್ನು ನೋಡಬಹುದು ಎಂಬುದನ್ನು ಸಾರಿಹೇಳಿದರು.

ಕೆಲವು ಭಾಗಗಳಲ್ಲಿ ಸೂರ್ಯ ಗ್ರಹಣ ವೀಕ್ಷಣೆಗೆ ಮೋಡಗಳು ಅಡ್ಡಿಯಾದವು. ಉತ್ತರ ಬಾರತದಲ್ಲಿ ಕಂಕಣ ಗ್ರಹಣ ಕಂಡುಬಂದರೆ ದಕ್ಷಿಣ ಭಾರತದ ನಗರಗಳಲ್ಲಿ ಪಾರ್ಶ್ವ ಸೂರ್ಯಗ್ರಹಣ ಕಂಡುಬಂತು ಎಂದು ವರದಿಗಳು ತಿಳಿಸಿವೆ.

ತುಮಕೂರಿನ ವಿಜ್ಞಾನ ಕೇಂದ್ರ ಮತ್ತು ಜನಚಳವಳಿ ಕೇಂದ್ರದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು. ಸೌರಕನ್ನಡಗಳಿಂದ ನೂರಾರು ಮಂದಿ ಗ್ರಹಣ ನೋಡಿ ಆನಂದಪಟ್ಟರು. ಮಕ್ಕಳೂ ಕೂಡ ಪಾರ್ಶ್ವ ಗ್ರಹಣ ವೀಕ್ಷಿಸಿ ಸಂತೋಷಗೊಂಡರು. ತುಮಕೂರು ವಿಜ್ಞಾನ ಕೇಂದ್ರದಲ್ಲಿ ಮೌಢ್ಯಾಚರಣೆ ವಿರೋಧಿಸಿ ಗ್ರಹಣ ಸಮಯದಲ್ಲಿ ಮಂಡಕ್ಕಿ ಪುರಿ ಹಂಚಿಕೊಂಡು ತಿಂದರು.

ಜನಚಳವಳಿ ಕೇಂದ್ರದಲ್ಲಿ ಸೌರಕನ್ನಡಗಳನ್ನು ಬಳಸಿ ವಿವಿಧ ವಿಭಾಗಗಳ ಕಾರ್ಮಿಕರು ಸೂರ್ಯಗ್ರಹಣ ನೋಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗ್ರಹಣ ಕಾಲದಲ್ಲಿ ಏನನ್ನೂ ತಿನ್ನಬಾರದು ಎಂಬ ಮೂಢ ನಂಬಿಕೆ ಮುರಿಯಲು ಕಾರ್ಮಿಕರೆಲ್ಲರೂ ಉಪ್ಪಿಟ್ಟು ಮತ್ತು ಕೇಸರಿ ಬಾತ್ ಸೇವಿಸಿ ಸಂಪ್ರದಾಯ ಮುರಿದರು.

ಟಿವಿ ಮಾಧ್ಯಮಗಳಲ್ಲಿ ಜ್ಯೋತಿಷಿಗಳು ಸೂರ್ಯಗ್ರಹಣದಿಂದ ವಿವಿಧ ರಾಶಿಯ ಜನರಿಗೆ ತೊಂದರೆಗಳಾಗಲಿವೆ ಎಂದು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಬಹುತೇಕರು ಮನೆಯಲ್ಲೇ ಉಳಿದು ಮೌಢ್ಯತೆಯನ್ನು ಆಚರಿಸಿದರು. ಅಲ್ಲದೆ ಖಗೋಳದಲ್ಲಾಗುವ ವಿಸ್ಮಯವನ್ನು ನೋಡಲು ವಂಚಿತರಾದರು.


ಇದನ್ನೂ ಓದಿ: ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...