Homeಮುಖಪುಟಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

- Advertisement -
- Advertisement -

ಮೌಢ್ಯಾಚರಣೆಯ ನಡುವೆಯು ಜೂನ್ 21ರಂದು ಸಂಭವಿಸಿದ ಸೂರ್ಯಗ್ರಹಣವನ್ನು ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿ ಆನಂದ ವ್ಯಕ್ತಪಡಿಸಿದರು. ಪ್ರಮುಖ ನಗರಗಳಲ್ಲಿ ಸೂರ್ಯಗ್ರಹಣ ವೀಕ್ಷಿಸಲು ಸೌರಕನ್ನಡಗಳು, ದೂರದರ್ಶಕಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಉತ್ತರ ಭಾರತದ ರಾಜಸ್ಥಾನ್‍ನಿಂದ ಹರಿಯಾಣದ ಶಿರ್ಸಾ, ಕುರುಕ್ಷೇತ್ರ, ಉತ್ತರಖಂಡದ ಡೆಹರಾಡೂನ್ ಹಾಗೂ ಜೋಶಿಮಟ ಮೂಲಕ ಚಂದ್ರನ ನೆರಳು ಭೂಮಿ ಮೇಲೆ ಹಾದುಹೋಯಿತು. ದೇಶದ ಕೆಲವು ಭಾಗಗಳಲ್ಲಿ ಶೇ. 99.7ರಷ್ಟು ಪ್ರಮಾಣದ ಸೂರ್ಯಗ್ರಹಣ ಗೋಚರವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಬೆಂಗಳೂರಿನ ನೆಹರು ತಾರಾಲಯದಲ್ಲಿ ಕಂಕಣ ಸೂರ್ಯಗ್ರಹಣ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿದ್ದರು. ವಿಜ್ಞಾನಿಗಳು, ವಿಜ್ಞಾನ ಚಳವಳಿಯ ಕಾರ್ಯಕರ್ತರು, ಮೌಢ್ಯಾಚರಣೆಯ ವಿರೋಧಿಗಳು, ವಿದ್ಯಾರ್ಥಿಗಳು ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.

ಖಗೋಳದಲ್ಲಿ ನಡೆಯಲಿರುವ ನೆರಳು ಬೆಳಕಿನ ಆಟವನ್ನು ನೋಡಿದ ಲಕ್ಷಾಂತರ ಜನರು ಗ್ರಹಣ ವೀಕ್ಷಣೆಯಿಂದ ಯಾವುದೇ ಜೀವಿಗಳ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಮನೆಯಿಂದ ಹೊರಬಂದದು ಖಗೋಳದಲ್ಲಿ ನಡೆಯುವ ವಿಸ್ಮಯವನ್ನು ನೋಡಬಹುದು ಎಂಬುದನ್ನು ಸಾರಿಹೇಳಿದರು.

ಕೆಲವು ಭಾಗಗಳಲ್ಲಿ ಸೂರ್ಯ ಗ್ರಹಣ ವೀಕ್ಷಣೆಗೆ ಮೋಡಗಳು ಅಡ್ಡಿಯಾದವು. ಉತ್ತರ ಬಾರತದಲ್ಲಿ ಕಂಕಣ ಗ್ರಹಣ ಕಂಡುಬಂದರೆ ದಕ್ಷಿಣ ಭಾರತದ ನಗರಗಳಲ್ಲಿ ಪಾರ್ಶ್ವ ಸೂರ್ಯಗ್ರಹಣ ಕಂಡುಬಂತು ಎಂದು ವರದಿಗಳು ತಿಳಿಸಿವೆ.

ತುಮಕೂರಿನ ವಿಜ್ಞಾನ ಕೇಂದ್ರ ಮತ್ತು ಜನಚಳವಳಿ ಕೇಂದ್ರದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು. ಸೌರಕನ್ನಡಗಳಿಂದ ನೂರಾರು ಮಂದಿ ಗ್ರಹಣ ನೋಡಿ ಆನಂದಪಟ್ಟರು. ಮಕ್ಕಳೂ ಕೂಡ ಪಾರ್ಶ್ವ ಗ್ರಹಣ ವೀಕ್ಷಿಸಿ ಸಂತೋಷಗೊಂಡರು. ತುಮಕೂರು ವಿಜ್ಞಾನ ಕೇಂದ್ರದಲ್ಲಿ ಮೌಢ್ಯಾಚರಣೆ ವಿರೋಧಿಸಿ ಗ್ರಹಣ ಸಮಯದಲ್ಲಿ ಮಂಡಕ್ಕಿ ಪುರಿ ಹಂಚಿಕೊಂಡು ತಿಂದರು.

ಜನಚಳವಳಿ ಕೇಂದ್ರದಲ್ಲಿ ಸೌರಕನ್ನಡಗಳನ್ನು ಬಳಸಿ ವಿವಿಧ ವಿಭಾಗಗಳ ಕಾರ್ಮಿಕರು ಸೂರ್ಯಗ್ರಹಣ ನೋಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗ್ರಹಣ ಕಾಲದಲ್ಲಿ ಏನನ್ನೂ ತಿನ್ನಬಾರದು ಎಂಬ ಮೂಢ ನಂಬಿಕೆ ಮುರಿಯಲು ಕಾರ್ಮಿಕರೆಲ್ಲರೂ ಉಪ್ಪಿಟ್ಟು ಮತ್ತು ಕೇಸರಿ ಬಾತ್ ಸೇವಿಸಿ ಸಂಪ್ರದಾಯ ಮುರಿದರು.

ಟಿವಿ ಮಾಧ್ಯಮಗಳಲ್ಲಿ ಜ್ಯೋತಿಷಿಗಳು ಸೂರ್ಯಗ್ರಹಣದಿಂದ ವಿವಿಧ ರಾಶಿಯ ಜನರಿಗೆ ತೊಂದರೆಗಳಾಗಲಿವೆ ಎಂದು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಬಹುತೇಕರು ಮನೆಯಲ್ಲೇ ಉಳಿದು ಮೌಢ್ಯತೆಯನ್ನು ಆಚರಿಸಿದರು. ಅಲ್ಲದೆ ಖಗೋಳದಲ್ಲಾಗುವ ವಿಸ್ಮಯವನ್ನು ನೋಡಲು ವಂಚಿತರಾದರು.


ಇದನ್ನೂ ಓದಿ: ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...