Homeಮುಖಪುಟಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

- Advertisement -
- Advertisement -

ಮೌಢ್ಯಾಚರಣೆಯ ನಡುವೆಯು ಜೂನ್ 21ರಂದು ಸಂಭವಿಸಿದ ಸೂರ್ಯಗ್ರಹಣವನ್ನು ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿ ಆನಂದ ವ್ಯಕ್ತಪಡಿಸಿದರು. ಪ್ರಮುಖ ನಗರಗಳಲ್ಲಿ ಸೂರ್ಯಗ್ರಹಣ ವೀಕ್ಷಿಸಲು ಸೌರಕನ್ನಡಗಳು, ದೂರದರ್ಶಕಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಉತ್ತರ ಭಾರತದ ರಾಜಸ್ಥಾನ್‍ನಿಂದ ಹರಿಯಾಣದ ಶಿರ್ಸಾ, ಕುರುಕ್ಷೇತ್ರ, ಉತ್ತರಖಂಡದ ಡೆಹರಾಡೂನ್ ಹಾಗೂ ಜೋಶಿಮಟ ಮೂಲಕ ಚಂದ್ರನ ನೆರಳು ಭೂಮಿ ಮೇಲೆ ಹಾದುಹೋಯಿತು. ದೇಶದ ಕೆಲವು ಭಾಗಗಳಲ್ಲಿ ಶೇ. 99.7ರಷ್ಟು ಪ್ರಮಾಣದ ಸೂರ್ಯಗ್ರಹಣ ಗೋಚರವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಬೆಂಗಳೂರಿನ ನೆಹರು ತಾರಾಲಯದಲ್ಲಿ ಕಂಕಣ ಸೂರ್ಯಗ್ರಹಣ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿದ್ದರು. ವಿಜ್ಞಾನಿಗಳು, ವಿಜ್ಞಾನ ಚಳವಳಿಯ ಕಾರ್ಯಕರ್ತರು, ಮೌಢ್ಯಾಚರಣೆಯ ವಿರೋಧಿಗಳು, ವಿದ್ಯಾರ್ಥಿಗಳು ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.

ಖಗೋಳದಲ್ಲಿ ನಡೆಯಲಿರುವ ನೆರಳು ಬೆಳಕಿನ ಆಟವನ್ನು ನೋಡಿದ ಲಕ್ಷಾಂತರ ಜನರು ಗ್ರಹಣ ವೀಕ್ಷಣೆಯಿಂದ ಯಾವುದೇ ಜೀವಿಗಳ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಮನೆಯಿಂದ ಹೊರಬಂದದು ಖಗೋಳದಲ್ಲಿ ನಡೆಯುವ ವಿಸ್ಮಯವನ್ನು ನೋಡಬಹುದು ಎಂಬುದನ್ನು ಸಾರಿಹೇಳಿದರು.

ಕೆಲವು ಭಾಗಗಳಲ್ಲಿ ಸೂರ್ಯ ಗ್ರಹಣ ವೀಕ್ಷಣೆಗೆ ಮೋಡಗಳು ಅಡ್ಡಿಯಾದವು. ಉತ್ತರ ಬಾರತದಲ್ಲಿ ಕಂಕಣ ಗ್ರಹಣ ಕಂಡುಬಂದರೆ ದಕ್ಷಿಣ ಭಾರತದ ನಗರಗಳಲ್ಲಿ ಪಾರ್ಶ್ವ ಸೂರ್ಯಗ್ರಹಣ ಕಂಡುಬಂತು ಎಂದು ವರದಿಗಳು ತಿಳಿಸಿವೆ.

ತುಮಕೂರಿನ ವಿಜ್ಞಾನ ಕೇಂದ್ರ ಮತ್ತು ಜನಚಳವಳಿ ಕೇಂದ್ರದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು. ಸೌರಕನ್ನಡಗಳಿಂದ ನೂರಾರು ಮಂದಿ ಗ್ರಹಣ ನೋಡಿ ಆನಂದಪಟ್ಟರು. ಮಕ್ಕಳೂ ಕೂಡ ಪಾರ್ಶ್ವ ಗ್ರಹಣ ವೀಕ್ಷಿಸಿ ಸಂತೋಷಗೊಂಡರು. ತುಮಕೂರು ವಿಜ್ಞಾನ ಕೇಂದ್ರದಲ್ಲಿ ಮೌಢ್ಯಾಚರಣೆ ವಿರೋಧಿಸಿ ಗ್ರಹಣ ಸಮಯದಲ್ಲಿ ಮಂಡಕ್ಕಿ ಪುರಿ ಹಂಚಿಕೊಂಡು ತಿಂದರು.

ಜನಚಳವಳಿ ಕೇಂದ್ರದಲ್ಲಿ ಸೌರಕನ್ನಡಗಳನ್ನು ಬಳಸಿ ವಿವಿಧ ವಿಭಾಗಗಳ ಕಾರ್ಮಿಕರು ಸೂರ್ಯಗ್ರಹಣ ನೋಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗ್ರಹಣ ಕಾಲದಲ್ಲಿ ಏನನ್ನೂ ತಿನ್ನಬಾರದು ಎಂಬ ಮೂಢ ನಂಬಿಕೆ ಮುರಿಯಲು ಕಾರ್ಮಿಕರೆಲ್ಲರೂ ಉಪ್ಪಿಟ್ಟು ಮತ್ತು ಕೇಸರಿ ಬಾತ್ ಸೇವಿಸಿ ಸಂಪ್ರದಾಯ ಮುರಿದರು.

ಟಿವಿ ಮಾಧ್ಯಮಗಳಲ್ಲಿ ಜ್ಯೋತಿಷಿಗಳು ಸೂರ್ಯಗ್ರಹಣದಿಂದ ವಿವಿಧ ರಾಶಿಯ ಜನರಿಗೆ ತೊಂದರೆಗಳಾಗಲಿವೆ ಎಂದು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಬಹುತೇಕರು ಮನೆಯಲ್ಲೇ ಉಳಿದು ಮೌಢ್ಯತೆಯನ್ನು ಆಚರಿಸಿದರು. ಅಲ್ಲದೆ ಖಗೋಳದಲ್ಲಾಗುವ ವಿಸ್ಮಯವನ್ನು ನೋಡಲು ವಂಚಿತರಾದರು.


ಇದನ್ನೂ ಓದಿ: ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...