Homeಮುಖಪುಟಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

- Advertisement -
- Advertisement -

‘ಹಾಸ್ಯವನ್ನು ಅರ್ಥಮಾಡಿಕೊಳ್ಳದಿದ್ದರೆ, ಮಿಮಿಕ್ರಿಯನ್ನು ಮೆಚ್ಚುವ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ ನಾನು ಅಸಹಾಯಕ ಎಂದು ಸಂಸತ್ತಿನ ಆವರಣದಲ್ಲಿ ತಮ್ಮ ಮಿಮಿಕ್ರಿ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಸೆರಾಂಪೋರ್ನಲ್ಲಿ ಭಾನುವಾರ ನಡೆದ ರಾಜಕೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ‘ಲೋಕಸಭೆಯೊಳಗೆ ಮಿಮಿಕ್ರಿ ಮಾಡಿದ ಮೊದಲ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಅವರು ಹಾಗೆ ಮಾಡಿದಾಗಲೂ ನಾವು ಮುಗುಳ್ನಕ್ಕು ಸುಮ್ಮನಾದೆವು. ನಾವು ವಿರೋಧಿಸುವ ಯಾವುದೇ ವಿನಾಯಿತಿಯನ್ನು ತೆಗೆದುಕೊಳ್ಳಲಿಲ್ಲ’ ಎಂದು ಎಂದು ಹೇಳಿದ ಅವರು, ವೇದಿಕೆ ಮೇಲೆ ಪ್ರಧಾನಿಯನ್ನು ಅನುಕರಿಸಿದರು.

ಮಿಮಿಕ್ರಿ ಒಂದು ಕಲೆ, ಯಾರಿಗಾದರೂ ಕಲೆ ಅರ್ಥವಾಗದಿದ್ದರೆ ನಾನೇನು ಮಾಡಲಿ, ಯಾರಿಗಾದರೂ ಹಾಸ್ಯ ಅರ್ಥವಾಗದಿದ್ದರೆ, ಅವರಿಗೆ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ, ಯಾರೋ ನನ್ನನ್ನು ಗುರಿಯಾಗಿಸಿ ಮಾತನಾಡಿದರೆ ನಾನು ಅಸಹಾಯಕ ಎಂದು ಅವರು ಉಪರಾಷ್ಟ್ರಪತಿ ಹೆಸರನ್ನು ಹೇಳದೆ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು. ‘ಜಗದೀಪ್ ಧನ್ಖರ್ ಅವರು ನನ್ನ ಮಿಮಿಕ್ರಿಯನ್ನು ತೀವ್ರವಾಗಿ ಗಮನಿಸಿದ್ದಾರೆ’ ಎಂದರು.

‘ನಿಮ್ಮ ಬಗ್ಗೆ ನೀವು ಏಕೆ ಯೋಚಿಸುತ್ತೀರಿ ಎಂದು ನನಗೆ ಅರ್ಥವಾಗುತ್ತಿಲ್ಲ, ಅವರು ಹಗಲಿನಿಂದ ರಾತ್ರಿವರೆಗೂ ಅಳುತ್ತಿದ್ದಾರೆ. ಅವರು ಮಗುವಿನಂತೆ ಏಕೆ ಅಳುತ್ತಿದ್ದಾರೆ’ ಎಂದ ಅವರು, ಯಾರೋ ನನ್ನನ್ನು ಕೀಟಲೆ ಮಾಡುತ್ತಿದ್ದಾರೆ ಎಂದು ತನ್ನ ತಾಯಿಗೆ ಮಗು ದೂರು ನೀಡುವ ರೀತಿ ವೇದಿಕೆ ಮೇಲೆ ನಟನೆ ಮಾಡಿದರು.

‘ತೃಣಮೂಲ ಸಂಸದರ ನಾಚಿಕೆಗೇಡಿನ ಮಿಮಿಕ್ರಿ ಕೃತ್ಯವು ನನಗೆ ನೋವು ತಂದಿದೆ ಮತ್ತು ಜಾಟ್ ಸಮುದಾಯದ ರೈತನ ಮಗನೆಂದು ಅವಮಾನಿಸಲಾಗಿದೆ ಎಂದು ಸದನದಲ್ಲಿ ಧನ್ಖರ್ ಹೇಳಿದ್ದಾರೆ. ಬ್ಯಾನರ್ಜಿ ಅವರ ಕೃತ್ಯವನ್ನು ಚಿತ್ರೀಕರಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.

ರೈತನ ಮಗನೆಂದು ಅವಮಾನಿಸಲಾಗಿದೆ ಎಂಬ ಉಪರಾಷ್ಟ್ರಪತಿ ಹೇಳಿಕೆಗೆ ತಿರುಗೇಟು ನೀಡಿದ ತೃಣಮೂಲ ಸಂಸದರು, ‘ತಾವು ಎಷ್ಟು ದಿನ ಹೊಲದಲ್ಲಿ ದುಡಿದಿದ್ದೇನೆ ಎಂಬುದನ್ನು ದೇಶದ ಜನತೆಗೆ ಹೇಳಬೇಕು ಎಂದು ಸವಾಲು ಹಾಕಿದ್ದಾರೆ. ದೇಶದ ಕೋಟ್ಯಂತರ ರೈತರು ಅವರಷ್ಟು ಆಸ್ತಿಯನ್ನು ಸಂಗ್ರಹಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಅವರು ಲೇವಡಿ ಮಾಡಿದ್ದಾರೆ.

‘ನೀವು ರೈತನ ಮಗ ಎಂದು ಹೇಳಿರುವ ನೀವು ₹20 ಲಕ್ಷ ಮೌಲ್ಯದ ಸೂಟ್ ಧರಿಸುತ್ತೀರ. ಈ ಚಳಿಯಲ್ಲಿ ಭಾರತದ ಎಷ್ಟೋ ರೈತರಿಗೆ ಕಂಬಳಿ ಕೂಡ ಕೊಡೋಕಾಗಲ್ಲ.. ಹಾಗಾಗಿ, ಅಂತಹ ಸ್ಥಿತಿಗೆ ಏರಿದ ಮೇಲೆ ಅವರ ಮನೆಗೆ ಎಷ್ಟು ಲಕ್ಷ ಕಂಬಳಿ ಕಳಿಸಿದ್ದೀರಿ. ದಯವಿಟ್ಟು ಜನರಿಗೆ ತಿಳಿಸಿ’ ಎಂದು ಬ್ಯಾನರ್ಜಿ ತರಾಟೆಗೆ ತೆಗೆದುಕೊಂಡರು.

ರೈತನ ಮಗ ಎಂದು ಹೇಳುವ ನೀವು ನಿಮ್ಮ ವಕೀಲ ವೃತ್ತಿಯಲ್ಲಿ ಎಷ್ಟು ಸಲ ರೈತರ ಪರವಾಗಿ ವಕಾಲತ್ತು ವಹಿಸಿದ್ದೀರಿ ಎಂದು ಪ್ರಶ್ನಿಸಿದರು.

ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಅವರನ್ನು ಉಪಾಧ್ಯಕ್ಷರು ಏಕೆ ಬೆಂಬಲಿಸಲಿಲ್ಲ ಎಂದು ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಲಿಕ್ ಮತ್ತು ಇತರ ಕುಸ್ತಿಪಟುಗಳು ಆರೋಪಿಸಿದ್ದಾರೆ. ‘ನೀವು ಒಂದು ಮಾತನ್ನೂ ಮಾತನಾಡಲಿಲ್ಲ, ಏಕೆ? ದಯವಿಟ್ಟು ಉತ್ತರಿಸಿ, ಅಂತಹ ಉನ್ನತ ಹುದ್ದೆಯಲ್ಲಿದ್ದರೂ ನಾನು, ನಾನು, ನಾನು ಮಾತ್ರ’ ಎಂದು ಕಿಡಿಕಾರಿದರು.

‘ಉಪರಾಷ್ಟ್ರಪತಿಯವರು ಪ್ರಧಾನಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ ಬ್ಯಾನರ್ಜಿ, ‘ನೀವು ಪ್ರತಿಪಕ್ಷಗಳ ಧ್ವನಿಯನ್ನು ಉಸಿರುಗಟ್ಟಿಸಿದ್ದೀರಿ. ತದನಂತರ ನೀವು ನರೇಂದ್ರ ಮೋದಿಯನ್ನು ಈ ಶತಮಾನದ ‘ಮಹಾಪುರುಷ’ ಎಂದು ಹೇಳುತ್ತೀರಿ. ನೀವು ಅವರನ್ನು ಎಷ್ಟು ಹೊಗಳುತ್ತೀರಿ ಎಂಬುದು ಸ್ಪಷ್ಟವಾಗಿದೆ’ ಎಂದು ಟೀಕಿಸಿದರು.

ಲೋಕಸಭೆ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಿಂದ ಹೇಳಿಕೆಗೆ ಒತ್ತಾಯಿಸಿದ ನಂತರ ‘ಅಶಿಸ್ತಿನ ವರ್ತನೆ’ಗಾಗಿ ಒಟ್ಟು 146 ಪ್ರತಿಪಕ್ಷಗಳ ಸಂಸದರನ್ನು ಉಭಯ ಸದನಗಳಿಂದ ಅಮಾನತುಗೊಳಿಸಲಾಗಿದೆ. ಸಂಸತ್ತಿನ ಆವರಣದಲ್ಲಿ ವಿರೋಧ ಪಕ್ಷದ ಸಂಸದರು ಅಮಾನತುಗೊಳಿಸಿರುವುದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆಯ ವೇಳೆ ಮಿಮಿಕ್ರಿ ಮಾಡಿದ ಬ್ಯಾನರ್ಜಿ, ಜಗದೀಪ್ ಧನ್ಖರ್ ಅವರನ್ನು ಮಿಮಿಕ್ರಿ ಮಾಡಿದ್ದರು. ಅದನ್ನು ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕರಿಸಿದ್ದರು.

ಇದನ್ನೂ ಓದಿ; ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...