Homeಮುಖಪುಟಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

- Advertisement -
- Advertisement -

‘ಹಾಸ್ಯವನ್ನು ಅರ್ಥಮಾಡಿಕೊಳ್ಳದಿದ್ದರೆ, ಮಿಮಿಕ್ರಿಯನ್ನು ಮೆಚ್ಚುವ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ ನಾನು ಅಸಹಾಯಕ ಎಂದು ಸಂಸತ್ತಿನ ಆವರಣದಲ್ಲಿ ತಮ್ಮ ಮಿಮಿಕ್ರಿ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಸೆರಾಂಪೋರ್ನಲ್ಲಿ ಭಾನುವಾರ ನಡೆದ ರಾಜಕೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ‘ಲೋಕಸಭೆಯೊಳಗೆ ಮಿಮಿಕ್ರಿ ಮಾಡಿದ ಮೊದಲ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಅವರು ಹಾಗೆ ಮಾಡಿದಾಗಲೂ ನಾವು ಮುಗುಳ್ನಕ್ಕು ಸುಮ್ಮನಾದೆವು. ನಾವು ವಿರೋಧಿಸುವ ಯಾವುದೇ ವಿನಾಯಿತಿಯನ್ನು ತೆಗೆದುಕೊಳ್ಳಲಿಲ್ಲ’ ಎಂದು ಎಂದು ಹೇಳಿದ ಅವರು, ವೇದಿಕೆ ಮೇಲೆ ಪ್ರಧಾನಿಯನ್ನು ಅನುಕರಿಸಿದರು.

ಮಿಮಿಕ್ರಿ ಒಂದು ಕಲೆ, ಯಾರಿಗಾದರೂ ಕಲೆ ಅರ್ಥವಾಗದಿದ್ದರೆ ನಾನೇನು ಮಾಡಲಿ, ಯಾರಿಗಾದರೂ ಹಾಸ್ಯ ಅರ್ಥವಾಗದಿದ್ದರೆ, ಅವರಿಗೆ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ, ಯಾರೋ ನನ್ನನ್ನು ಗುರಿಯಾಗಿಸಿ ಮಾತನಾಡಿದರೆ ನಾನು ಅಸಹಾಯಕ ಎಂದು ಅವರು ಉಪರಾಷ್ಟ್ರಪತಿ ಹೆಸರನ್ನು ಹೇಳದೆ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು. ‘ಜಗದೀಪ್ ಧನ್ಖರ್ ಅವರು ನನ್ನ ಮಿಮಿಕ್ರಿಯನ್ನು ತೀವ್ರವಾಗಿ ಗಮನಿಸಿದ್ದಾರೆ’ ಎಂದರು.

‘ನಿಮ್ಮ ಬಗ್ಗೆ ನೀವು ಏಕೆ ಯೋಚಿಸುತ್ತೀರಿ ಎಂದು ನನಗೆ ಅರ್ಥವಾಗುತ್ತಿಲ್ಲ, ಅವರು ಹಗಲಿನಿಂದ ರಾತ್ರಿವರೆಗೂ ಅಳುತ್ತಿದ್ದಾರೆ. ಅವರು ಮಗುವಿನಂತೆ ಏಕೆ ಅಳುತ್ತಿದ್ದಾರೆ’ ಎಂದ ಅವರು, ಯಾರೋ ನನ್ನನ್ನು ಕೀಟಲೆ ಮಾಡುತ್ತಿದ್ದಾರೆ ಎಂದು ತನ್ನ ತಾಯಿಗೆ ಮಗು ದೂರು ನೀಡುವ ರೀತಿ ವೇದಿಕೆ ಮೇಲೆ ನಟನೆ ಮಾಡಿದರು.

‘ತೃಣಮೂಲ ಸಂಸದರ ನಾಚಿಕೆಗೇಡಿನ ಮಿಮಿಕ್ರಿ ಕೃತ್ಯವು ನನಗೆ ನೋವು ತಂದಿದೆ ಮತ್ತು ಜಾಟ್ ಸಮುದಾಯದ ರೈತನ ಮಗನೆಂದು ಅವಮಾನಿಸಲಾಗಿದೆ ಎಂದು ಸದನದಲ್ಲಿ ಧನ್ಖರ್ ಹೇಳಿದ್ದಾರೆ. ಬ್ಯಾನರ್ಜಿ ಅವರ ಕೃತ್ಯವನ್ನು ಚಿತ್ರೀಕರಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.

ರೈತನ ಮಗನೆಂದು ಅವಮಾನಿಸಲಾಗಿದೆ ಎಂಬ ಉಪರಾಷ್ಟ್ರಪತಿ ಹೇಳಿಕೆಗೆ ತಿರುಗೇಟು ನೀಡಿದ ತೃಣಮೂಲ ಸಂಸದರು, ‘ತಾವು ಎಷ್ಟು ದಿನ ಹೊಲದಲ್ಲಿ ದುಡಿದಿದ್ದೇನೆ ಎಂಬುದನ್ನು ದೇಶದ ಜನತೆಗೆ ಹೇಳಬೇಕು ಎಂದು ಸವಾಲು ಹಾಕಿದ್ದಾರೆ. ದೇಶದ ಕೋಟ್ಯಂತರ ರೈತರು ಅವರಷ್ಟು ಆಸ್ತಿಯನ್ನು ಸಂಗ್ರಹಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಅವರು ಲೇವಡಿ ಮಾಡಿದ್ದಾರೆ.

‘ನೀವು ರೈತನ ಮಗ ಎಂದು ಹೇಳಿರುವ ನೀವು ₹20 ಲಕ್ಷ ಮೌಲ್ಯದ ಸೂಟ್ ಧರಿಸುತ್ತೀರ. ಈ ಚಳಿಯಲ್ಲಿ ಭಾರತದ ಎಷ್ಟೋ ರೈತರಿಗೆ ಕಂಬಳಿ ಕೂಡ ಕೊಡೋಕಾಗಲ್ಲ.. ಹಾಗಾಗಿ, ಅಂತಹ ಸ್ಥಿತಿಗೆ ಏರಿದ ಮೇಲೆ ಅವರ ಮನೆಗೆ ಎಷ್ಟು ಲಕ್ಷ ಕಂಬಳಿ ಕಳಿಸಿದ್ದೀರಿ. ದಯವಿಟ್ಟು ಜನರಿಗೆ ತಿಳಿಸಿ’ ಎಂದು ಬ್ಯಾನರ್ಜಿ ತರಾಟೆಗೆ ತೆಗೆದುಕೊಂಡರು.

ರೈತನ ಮಗ ಎಂದು ಹೇಳುವ ನೀವು ನಿಮ್ಮ ವಕೀಲ ವೃತ್ತಿಯಲ್ಲಿ ಎಷ್ಟು ಸಲ ರೈತರ ಪರವಾಗಿ ವಕಾಲತ್ತು ವಹಿಸಿದ್ದೀರಿ ಎಂದು ಪ್ರಶ್ನಿಸಿದರು.

ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಅವರನ್ನು ಉಪಾಧ್ಯಕ್ಷರು ಏಕೆ ಬೆಂಬಲಿಸಲಿಲ್ಲ ಎಂದು ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಲಿಕ್ ಮತ್ತು ಇತರ ಕುಸ್ತಿಪಟುಗಳು ಆರೋಪಿಸಿದ್ದಾರೆ. ‘ನೀವು ಒಂದು ಮಾತನ್ನೂ ಮಾತನಾಡಲಿಲ್ಲ, ಏಕೆ? ದಯವಿಟ್ಟು ಉತ್ತರಿಸಿ, ಅಂತಹ ಉನ್ನತ ಹುದ್ದೆಯಲ್ಲಿದ್ದರೂ ನಾನು, ನಾನು, ನಾನು ಮಾತ್ರ’ ಎಂದು ಕಿಡಿಕಾರಿದರು.

‘ಉಪರಾಷ್ಟ್ರಪತಿಯವರು ಪ್ರಧಾನಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ ಬ್ಯಾನರ್ಜಿ, ‘ನೀವು ಪ್ರತಿಪಕ್ಷಗಳ ಧ್ವನಿಯನ್ನು ಉಸಿರುಗಟ್ಟಿಸಿದ್ದೀರಿ. ತದನಂತರ ನೀವು ನರೇಂದ್ರ ಮೋದಿಯನ್ನು ಈ ಶತಮಾನದ ‘ಮಹಾಪುರುಷ’ ಎಂದು ಹೇಳುತ್ತೀರಿ. ನೀವು ಅವರನ್ನು ಎಷ್ಟು ಹೊಗಳುತ್ತೀರಿ ಎಂಬುದು ಸ್ಪಷ್ಟವಾಗಿದೆ’ ಎಂದು ಟೀಕಿಸಿದರು.

ಲೋಕಸಭೆ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಿಂದ ಹೇಳಿಕೆಗೆ ಒತ್ತಾಯಿಸಿದ ನಂತರ ‘ಅಶಿಸ್ತಿನ ವರ್ತನೆ’ಗಾಗಿ ಒಟ್ಟು 146 ಪ್ರತಿಪಕ್ಷಗಳ ಸಂಸದರನ್ನು ಉಭಯ ಸದನಗಳಿಂದ ಅಮಾನತುಗೊಳಿಸಲಾಗಿದೆ. ಸಂಸತ್ತಿನ ಆವರಣದಲ್ಲಿ ವಿರೋಧ ಪಕ್ಷದ ಸಂಸದರು ಅಮಾನತುಗೊಳಿಸಿರುವುದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆಯ ವೇಳೆ ಮಿಮಿಕ್ರಿ ಮಾಡಿದ ಬ್ಯಾನರ್ಜಿ, ಜಗದೀಪ್ ಧನ್ಖರ್ ಅವರನ್ನು ಮಿಮಿಕ್ರಿ ಮಾಡಿದ್ದರು. ಅದನ್ನು ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕರಿಸಿದ್ದರು.

ಇದನ್ನೂ ಓದಿ; ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...