Homeಮುಖಪುಟಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

- Advertisement -
- Advertisement -

‘ಹಾಸ್ಯವನ್ನು ಅರ್ಥಮಾಡಿಕೊಳ್ಳದಿದ್ದರೆ, ಮಿಮಿಕ್ರಿಯನ್ನು ಮೆಚ್ಚುವ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ ನಾನು ಅಸಹಾಯಕ ಎಂದು ಸಂಸತ್ತಿನ ಆವರಣದಲ್ಲಿ ತಮ್ಮ ಮಿಮಿಕ್ರಿ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಸೆರಾಂಪೋರ್ನಲ್ಲಿ ಭಾನುವಾರ ನಡೆದ ರಾಜಕೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ‘ಲೋಕಸಭೆಯೊಳಗೆ ಮಿಮಿಕ್ರಿ ಮಾಡಿದ ಮೊದಲ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಅವರು ಹಾಗೆ ಮಾಡಿದಾಗಲೂ ನಾವು ಮುಗುಳ್ನಕ್ಕು ಸುಮ್ಮನಾದೆವು. ನಾವು ವಿರೋಧಿಸುವ ಯಾವುದೇ ವಿನಾಯಿತಿಯನ್ನು ತೆಗೆದುಕೊಳ್ಳಲಿಲ್ಲ’ ಎಂದು ಎಂದು ಹೇಳಿದ ಅವರು, ವೇದಿಕೆ ಮೇಲೆ ಪ್ರಧಾನಿಯನ್ನು ಅನುಕರಿಸಿದರು.

ಮಿಮಿಕ್ರಿ ಒಂದು ಕಲೆ, ಯಾರಿಗಾದರೂ ಕಲೆ ಅರ್ಥವಾಗದಿದ್ದರೆ ನಾನೇನು ಮಾಡಲಿ, ಯಾರಿಗಾದರೂ ಹಾಸ್ಯ ಅರ್ಥವಾಗದಿದ್ದರೆ, ಅವರಿಗೆ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ, ಯಾರೋ ನನ್ನನ್ನು ಗುರಿಯಾಗಿಸಿ ಮಾತನಾಡಿದರೆ ನಾನು ಅಸಹಾಯಕ ಎಂದು ಅವರು ಉಪರಾಷ್ಟ್ರಪತಿ ಹೆಸರನ್ನು ಹೇಳದೆ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು. ‘ಜಗದೀಪ್ ಧನ್ಖರ್ ಅವರು ನನ್ನ ಮಿಮಿಕ್ರಿಯನ್ನು ತೀವ್ರವಾಗಿ ಗಮನಿಸಿದ್ದಾರೆ’ ಎಂದರು.

‘ನಿಮ್ಮ ಬಗ್ಗೆ ನೀವು ಏಕೆ ಯೋಚಿಸುತ್ತೀರಿ ಎಂದು ನನಗೆ ಅರ್ಥವಾಗುತ್ತಿಲ್ಲ, ಅವರು ಹಗಲಿನಿಂದ ರಾತ್ರಿವರೆಗೂ ಅಳುತ್ತಿದ್ದಾರೆ. ಅವರು ಮಗುವಿನಂತೆ ಏಕೆ ಅಳುತ್ತಿದ್ದಾರೆ’ ಎಂದ ಅವರು, ಯಾರೋ ನನ್ನನ್ನು ಕೀಟಲೆ ಮಾಡುತ್ತಿದ್ದಾರೆ ಎಂದು ತನ್ನ ತಾಯಿಗೆ ಮಗು ದೂರು ನೀಡುವ ರೀತಿ ವೇದಿಕೆ ಮೇಲೆ ನಟನೆ ಮಾಡಿದರು.

‘ತೃಣಮೂಲ ಸಂಸದರ ನಾಚಿಕೆಗೇಡಿನ ಮಿಮಿಕ್ರಿ ಕೃತ್ಯವು ನನಗೆ ನೋವು ತಂದಿದೆ ಮತ್ತು ಜಾಟ್ ಸಮುದಾಯದ ರೈತನ ಮಗನೆಂದು ಅವಮಾನಿಸಲಾಗಿದೆ ಎಂದು ಸದನದಲ್ಲಿ ಧನ್ಖರ್ ಹೇಳಿದ್ದಾರೆ. ಬ್ಯಾನರ್ಜಿ ಅವರ ಕೃತ್ಯವನ್ನು ಚಿತ್ರೀಕರಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.

ರೈತನ ಮಗನೆಂದು ಅವಮಾನಿಸಲಾಗಿದೆ ಎಂಬ ಉಪರಾಷ್ಟ್ರಪತಿ ಹೇಳಿಕೆಗೆ ತಿರುಗೇಟು ನೀಡಿದ ತೃಣಮೂಲ ಸಂಸದರು, ‘ತಾವು ಎಷ್ಟು ದಿನ ಹೊಲದಲ್ಲಿ ದುಡಿದಿದ್ದೇನೆ ಎಂಬುದನ್ನು ದೇಶದ ಜನತೆಗೆ ಹೇಳಬೇಕು ಎಂದು ಸವಾಲು ಹಾಕಿದ್ದಾರೆ. ದೇಶದ ಕೋಟ್ಯಂತರ ರೈತರು ಅವರಷ್ಟು ಆಸ್ತಿಯನ್ನು ಸಂಗ್ರಹಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಅವರು ಲೇವಡಿ ಮಾಡಿದ್ದಾರೆ.

‘ನೀವು ರೈತನ ಮಗ ಎಂದು ಹೇಳಿರುವ ನೀವು ₹20 ಲಕ್ಷ ಮೌಲ್ಯದ ಸೂಟ್ ಧರಿಸುತ್ತೀರ. ಈ ಚಳಿಯಲ್ಲಿ ಭಾರತದ ಎಷ್ಟೋ ರೈತರಿಗೆ ಕಂಬಳಿ ಕೂಡ ಕೊಡೋಕಾಗಲ್ಲ.. ಹಾಗಾಗಿ, ಅಂತಹ ಸ್ಥಿತಿಗೆ ಏರಿದ ಮೇಲೆ ಅವರ ಮನೆಗೆ ಎಷ್ಟು ಲಕ್ಷ ಕಂಬಳಿ ಕಳಿಸಿದ್ದೀರಿ. ದಯವಿಟ್ಟು ಜನರಿಗೆ ತಿಳಿಸಿ’ ಎಂದು ಬ್ಯಾನರ್ಜಿ ತರಾಟೆಗೆ ತೆಗೆದುಕೊಂಡರು.

ರೈತನ ಮಗ ಎಂದು ಹೇಳುವ ನೀವು ನಿಮ್ಮ ವಕೀಲ ವೃತ್ತಿಯಲ್ಲಿ ಎಷ್ಟು ಸಲ ರೈತರ ಪರವಾಗಿ ವಕಾಲತ್ತು ವಹಿಸಿದ್ದೀರಿ ಎಂದು ಪ್ರಶ್ನಿಸಿದರು.

ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಅವರನ್ನು ಉಪಾಧ್ಯಕ್ಷರು ಏಕೆ ಬೆಂಬಲಿಸಲಿಲ್ಲ ಎಂದು ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಲಿಕ್ ಮತ್ತು ಇತರ ಕುಸ್ತಿಪಟುಗಳು ಆರೋಪಿಸಿದ್ದಾರೆ. ‘ನೀವು ಒಂದು ಮಾತನ್ನೂ ಮಾತನಾಡಲಿಲ್ಲ, ಏಕೆ? ದಯವಿಟ್ಟು ಉತ್ತರಿಸಿ, ಅಂತಹ ಉನ್ನತ ಹುದ್ದೆಯಲ್ಲಿದ್ದರೂ ನಾನು, ನಾನು, ನಾನು ಮಾತ್ರ’ ಎಂದು ಕಿಡಿಕಾರಿದರು.

‘ಉಪರಾಷ್ಟ್ರಪತಿಯವರು ಪ್ರಧಾನಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ ಬ್ಯಾನರ್ಜಿ, ‘ನೀವು ಪ್ರತಿಪಕ್ಷಗಳ ಧ್ವನಿಯನ್ನು ಉಸಿರುಗಟ್ಟಿಸಿದ್ದೀರಿ. ತದನಂತರ ನೀವು ನರೇಂದ್ರ ಮೋದಿಯನ್ನು ಈ ಶತಮಾನದ ‘ಮಹಾಪುರುಷ’ ಎಂದು ಹೇಳುತ್ತೀರಿ. ನೀವು ಅವರನ್ನು ಎಷ್ಟು ಹೊಗಳುತ್ತೀರಿ ಎಂಬುದು ಸ್ಪಷ್ಟವಾಗಿದೆ’ ಎಂದು ಟೀಕಿಸಿದರು.

ಲೋಕಸಭೆ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಿಂದ ಹೇಳಿಕೆಗೆ ಒತ್ತಾಯಿಸಿದ ನಂತರ ‘ಅಶಿಸ್ತಿನ ವರ್ತನೆ’ಗಾಗಿ ಒಟ್ಟು 146 ಪ್ರತಿಪಕ್ಷಗಳ ಸಂಸದರನ್ನು ಉಭಯ ಸದನಗಳಿಂದ ಅಮಾನತುಗೊಳಿಸಲಾಗಿದೆ. ಸಂಸತ್ತಿನ ಆವರಣದಲ್ಲಿ ವಿರೋಧ ಪಕ್ಷದ ಸಂಸದರು ಅಮಾನತುಗೊಳಿಸಿರುವುದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆಯ ವೇಳೆ ಮಿಮಿಕ್ರಿ ಮಾಡಿದ ಬ್ಯಾನರ್ಜಿ, ಜಗದೀಪ್ ಧನ್ಖರ್ ಅವರನ್ನು ಮಿಮಿಕ್ರಿ ಮಾಡಿದ್ದರು. ಅದನ್ನು ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕರಿಸಿದ್ದರು.

ಇದನ್ನೂ ಓದಿ; ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...