Homeಮುಖಪುಟಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

- Advertisement -
- Advertisement -

‘ಹಾಸ್ಯವನ್ನು ಅರ್ಥಮಾಡಿಕೊಳ್ಳದಿದ್ದರೆ, ಮಿಮಿಕ್ರಿಯನ್ನು ಮೆಚ್ಚುವ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ ನಾನು ಅಸಹಾಯಕ ಎಂದು ಸಂಸತ್ತಿನ ಆವರಣದಲ್ಲಿ ತಮ್ಮ ಮಿಮಿಕ್ರಿ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಸೆರಾಂಪೋರ್ನಲ್ಲಿ ಭಾನುವಾರ ನಡೆದ ರಾಜಕೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ‘ಲೋಕಸಭೆಯೊಳಗೆ ಮಿಮಿಕ್ರಿ ಮಾಡಿದ ಮೊದಲ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಅವರು ಹಾಗೆ ಮಾಡಿದಾಗಲೂ ನಾವು ಮುಗುಳ್ನಕ್ಕು ಸುಮ್ಮನಾದೆವು. ನಾವು ವಿರೋಧಿಸುವ ಯಾವುದೇ ವಿನಾಯಿತಿಯನ್ನು ತೆಗೆದುಕೊಳ್ಳಲಿಲ್ಲ’ ಎಂದು ಎಂದು ಹೇಳಿದ ಅವರು, ವೇದಿಕೆ ಮೇಲೆ ಪ್ರಧಾನಿಯನ್ನು ಅನುಕರಿಸಿದರು.

ಮಿಮಿಕ್ರಿ ಒಂದು ಕಲೆ, ಯಾರಿಗಾದರೂ ಕಲೆ ಅರ್ಥವಾಗದಿದ್ದರೆ ನಾನೇನು ಮಾಡಲಿ, ಯಾರಿಗಾದರೂ ಹಾಸ್ಯ ಅರ್ಥವಾಗದಿದ್ದರೆ, ಅವರಿಗೆ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ, ಯಾರೋ ನನ್ನನ್ನು ಗುರಿಯಾಗಿಸಿ ಮಾತನಾಡಿದರೆ ನಾನು ಅಸಹಾಯಕ ಎಂದು ಅವರು ಉಪರಾಷ್ಟ್ರಪತಿ ಹೆಸರನ್ನು ಹೇಳದೆ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು. ‘ಜಗದೀಪ್ ಧನ್ಖರ್ ಅವರು ನನ್ನ ಮಿಮಿಕ್ರಿಯನ್ನು ತೀವ್ರವಾಗಿ ಗಮನಿಸಿದ್ದಾರೆ’ ಎಂದರು.

‘ನಿಮ್ಮ ಬಗ್ಗೆ ನೀವು ಏಕೆ ಯೋಚಿಸುತ್ತೀರಿ ಎಂದು ನನಗೆ ಅರ್ಥವಾಗುತ್ತಿಲ್ಲ, ಅವರು ಹಗಲಿನಿಂದ ರಾತ್ರಿವರೆಗೂ ಅಳುತ್ತಿದ್ದಾರೆ. ಅವರು ಮಗುವಿನಂತೆ ಏಕೆ ಅಳುತ್ತಿದ್ದಾರೆ’ ಎಂದ ಅವರು, ಯಾರೋ ನನ್ನನ್ನು ಕೀಟಲೆ ಮಾಡುತ್ತಿದ್ದಾರೆ ಎಂದು ತನ್ನ ತಾಯಿಗೆ ಮಗು ದೂರು ನೀಡುವ ರೀತಿ ವೇದಿಕೆ ಮೇಲೆ ನಟನೆ ಮಾಡಿದರು.

‘ತೃಣಮೂಲ ಸಂಸದರ ನಾಚಿಕೆಗೇಡಿನ ಮಿಮಿಕ್ರಿ ಕೃತ್ಯವು ನನಗೆ ನೋವು ತಂದಿದೆ ಮತ್ತು ಜಾಟ್ ಸಮುದಾಯದ ರೈತನ ಮಗನೆಂದು ಅವಮಾನಿಸಲಾಗಿದೆ ಎಂದು ಸದನದಲ್ಲಿ ಧನ್ಖರ್ ಹೇಳಿದ್ದಾರೆ. ಬ್ಯಾನರ್ಜಿ ಅವರ ಕೃತ್ಯವನ್ನು ಚಿತ್ರೀಕರಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.

ರೈತನ ಮಗನೆಂದು ಅವಮಾನಿಸಲಾಗಿದೆ ಎಂಬ ಉಪರಾಷ್ಟ್ರಪತಿ ಹೇಳಿಕೆಗೆ ತಿರುಗೇಟು ನೀಡಿದ ತೃಣಮೂಲ ಸಂಸದರು, ‘ತಾವು ಎಷ್ಟು ದಿನ ಹೊಲದಲ್ಲಿ ದುಡಿದಿದ್ದೇನೆ ಎಂಬುದನ್ನು ದೇಶದ ಜನತೆಗೆ ಹೇಳಬೇಕು ಎಂದು ಸವಾಲು ಹಾಕಿದ್ದಾರೆ. ದೇಶದ ಕೋಟ್ಯಂತರ ರೈತರು ಅವರಷ್ಟು ಆಸ್ತಿಯನ್ನು ಸಂಗ್ರಹಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಅವರು ಲೇವಡಿ ಮಾಡಿದ್ದಾರೆ.

‘ನೀವು ರೈತನ ಮಗ ಎಂದು ಹೇಳಿರುವ ನೀವು ₹20 ಲಕ್ಷ ಮೌಲ್ಯದ ಸೂಟ್ ಧರಿಸುತ್ತೀರ. ಈ ಚಳಿಯಲ್ಲಿ ಭಾರತದ ಎಷ್ಟೋ ರೈತರಿಗೆ ಕಂಬಳಿ ಕೂಡ ಕೊಡೋಕಾಗಲ್ಲ.. ಹಾಗಾಗಿ, ಅಂತಹ ಸ್ಥಿತಿಗೆ ಏರಿದ ಮೇಲೆ ಅವರ ಮನೆಗೆ ಎಷ್ಟು ಲಕ್ಷ ಕಂಬಳಿ ಕಳಿಸಿದ್ದೀರಿ. ದಯವಿಟ್ಟು ಜನರಿಗೆ ತಿಳಿಸಿ’ ಎಂದು ಬ್ಯಾನರ್ಜಿ ತರಾಟೆಗೆ ತೆಗೆದುಕೊಂಡರು.

ರೈತನ ಮಗ ಎಂದು ಹೇಳುವ ನೀವು ನಿಮ್ಮ ವಕೀಲ ವೃತ್ತಿಯಲ್ಲಿ ಎಷ್ಟು ಸಲ ರೈತರ ಪರವಾಗಿ ವಕಾಲತ್ತು ವಹಿಸಿದ್ದೀರಿ ಎಂದು ಪ್ರಶ್ನಿಸಿದರು.

ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಅವರನ್ನು ಉಪಾಧ್ಯಕ್ಷರು ಏಕೆ ಬೆಂಬಲಿಸಲಿಲ್ಲ ಎಂದು ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಲಿಕ್ ಮತ್ತು ಇತರ ಕುಸ್ತಿಪಟುಗಳು ಆರೋಪಿಸಿದ್ದಾರೆ. ‘ನೀವು ಒಂದು ಮಾತನ್ನೂ ಮಾತನಾಡಲಿಲ್ಲ, ಏಕೆ? ದಯವಿಟ್ಟು ಉತ್ತರಿಸಿ, ಅಂತಹ ಉನ್ನತ ಹುದ್ದೆಯಲ್ಲಿದ್ದರೂ ನಾನು, ನಾನು, ನಾನು ಮಾತ್ರ’ ಎಂದು ಕಿಡಿಕಾರಿದರು.

‘ಉಪರಾಷ್ಟ್ರಪತಿಯವರು ಪ್ರಧಾನಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ ಬ್ಯಾನರ್ಜಿ, ‘ನೀವು ಪ್ರತಿಪಕ್ಷಗಳ ಧ್ವನಿಯನ್ನು ಉಸಿರುಗಟ್ಟಿಸಿದ್ದೀರಿ. ತದನಂತರ ನೀವು ನರೇಂದ್ರ ಮೋದಿಯನ್ನು ಈ ಶತಮಾನದ ‘ಮಹಾಪುರುಷ’ ಎಂದು ಹೇಳುತ್ತೀರಿ. ನೀವು ಅವರನ್ನು ಎಷ್ಟು ಹೊಗಳುತ್ತೀರಿ ಎಂಬುದು ಸ್ಪಷ್ಟವಾಗಿದೆ’ ಎಂದು ಟೀಕಿಸಿದರು.

ಲೋಕಸಭೆ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಿಂದ ಹೇಳಿಕೆಗೆ ಒತ್ತಾಯಿಸಿದ ನಂತರ ‘ಅಶಿಸ್ತಿನ ವರ್ತನೆ’ಗಾಗಿ ಒಟ್ಟು 146 ಪ್ರತಿಪಕ್ಷಗಳ ಸಂಸದರನ್ನು ಉಭಯ ಸದನಗಳಿಂದ ಅಮಾನತುಗೊಳಿಸಲಾಗಿದೆ. ಸಂಸತ್ತಿನ ಆವರಣದಲ್ಲಿ ವಿರೋಧ ಪಕ್ಷದ ಸಂಸದರು ಅಮಾನತುಗೊಳಿಸಿರುವುದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆಯ ವೇಳೆ ಮಿಮಿಕ್ರಿ ಮಾಡಿದ ಬ್ಯಾನರ್ಜಿ, ಜಗದೀಪ್ ಧನ್ಖರ್ ಅವರನ್ನು ಮಿಮಿಕ್ರಿ ಮಾಡಿದ್ದರು. ಅದನ್ನು ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕರಿಸಿದ್ದರು.

ಇದನ್ನೂ ಓದಿ; ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...