Homeಕರ್ನಾಟಕಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಲು ಮನಸ್ಸು ಒಪ್ಪುತ್ತಿಲ್ಲ: ಕಸಾಪ ಎಡವಟ್ಟಿಗೆ ಕವಯತ್ರಿ ಸುಜಾತ ಪ್ರತಿರೋಧ

ಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಲು ಮನಸ್ಸು ಒಪ್ಪುತ್ತಿಲ್ಲ: ಕಸಾಪ ಎಡವಟ್ಟಿಗೆ ಕವಯತ್ರಿ ಸುಜಾತ ಪ್ರತಿರೋಧ

- Advertisement -
- Advertisement -

ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಸಮ್ಮೇಳನದಿಂದ ಹೊರಗಿಟ್ಟು, ಕನ್ನಡತನವನ್ನು ಮರೆತಿರುವ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರ ಎಡವಟ್ಟಿಗೆ ಸಾಹಿತಿಗಳು ಸಾಂಸ್ಕೃತಿಕ ಪ್ರತಿರೋಧ ತೋರುತ್ತಿದ್ದು, ಕವಯತ್ರಿ ಎಚ್.ಆರ್‌.ಸುಜಾತ ಅವರು ಕವಿಗೋಷ್ಠಿಯೊಂದರ ಅಧ್ಯಕ್ಷತೆಯಿಂದ ಹಿಂದೆ ಸರಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿಯವರಿಗೆ ಪತ್ರ ಬರೆದಿರುವ ಸುಜಾತ ಅವರು, “ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ವಿಷಯವನ್ನು ವಿನಮ್ರತೆಯಿಂದ ನಿಮ್ಮಲ್ಲಿ ನಿವೇದಿಸಿ ಕೊಳ್ಳುತ್ತಿದ್ದೇನೆ” ಎಂದು ಕೋರಿದ್ದಾರೆ.

ಕಸಾಪ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲೇನಿದೆ?

ಮಾನ್ಯರೆ,

ಹಾವೇರಿಯಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಿನಾಂಕ 7.12. 2022ರಂದು ನಡೆಯಲಿರುವ ಕವಿಗೋಷ್ಠಿಗೆ ತಾವು ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುತ್ತೀರಿ. ಅದಕ್ಕಾಗಿ ನಾನು ತಮಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಈ ಸಂಬಂಧ ನನಗೆ ಡಿಜಿಟಲ್ ಮಾಧ್ಯಮದ ಮೂಲಕ ಆಹ್ವಾನ ಪತ್ರಿಕೆಯೂ ತಲುಪಿದೆ. ಆಹ್ವಾನ ಪತ್ರಿಕೆಯನ್ನು ಗಮನಿಸಿದಾಗ ಅದರಲ್ಲಿನ ವಿವಿಧ ಗೋಷ್ಠಿಗಳಲ್ಲಿ, ವೇದಿಕೆಗಳಲ್ಲಿ ಕನ್ನಡದ ಸಮಕಾಲೀನ ಮಹತ್ವದ ಲೇಖಕ ಲೇಖಕಿಯರ ಹೆಸರುಗಳೇ ಕಂಡು ಬರುತ್ತಿಲ್ಲ. ಅಲ್ಲದೇ ಕನ್ನಡಿಗರೇ ಆಗಿರುವ ಮುಸ್ಲಿಂ ಸಮುದಾಯದ ಲೇಖಕರ ಪ್ರಾತಿನಿಧ್ಯವೇ ಇರುವುದಿಲ್ಲ. ನೂರಾರು ಸಂಖ್ಯೆಯಲ್ಲಿರುವ ಬ್ಯಾರಿ ಸಮುದಾಯದ ಮಹತ್ವದ ಲೇಖಕರನ್ನು ಸಮ್ಮೇಳನದಲ್ಲಿ ಸಂಯೋಜಿಸಿ ಕೊಂಡಿರುವುದಿಲ್ಲ. ಈ ಬಗ್ಗೆ ಕನ್ನಡದ ಹಲವಾರು ಲೇಖಕರು ಮಾಧ್ಯಮದಲ್ಲಿ ತಮ್ಮ ಪ್ರತಿಕ್ರಿಯೆಯನ್ನೂ ವ್ಯಕ್ತಪಡಿಸಿರುತ್ತಾರೆ. ಇದಕ್ಕೆ ಪರಿಷತ್ತಿನ ವತಿಯಿಂದ ಯಾವುದೇ ರೀತಿಯ ಸಮಜಾಯಿಷಿ ಹೇಳಿಕೆಗಳೂ ಕೂಡಾ ಬಂದಿರುವುದಿಲ್ಲ. ಈ ಎಲ್ಲ ಘಟನೆಗಳನ್ನು ನೋಡಿದರೆ ಬ್ಯಾರಿ ಸಮುದಾಯದ ಲೇಖಕರನ್ನು ಸಮ್ಮೇಳನದಿಂದ ಬೇಕೆಂದೇ ದೂರವಿಟ್ಟಿರುವಂತೆ ಮೇಲು ನೋಟಕ್ಕೆ ಕಂಡು ಬರುತ್ತಿದೆ.

ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ರೀತಿಯ ತಾರತಮ್ಯ ಇರಬಾರದು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿರುತ್ತದೆ. ಇಂಥ ತಾರತಮ್ಯದಿಂದ ಕೂಡಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ವಿಷಯವನ್ನು ವಿನಮ್ರತೆಯಿಂದ ನಿಮ್ಮಲ್ಲಿ ನಿವೇದಿಸಿ ಕೊಳ್ಳುತ್ತಿದ್ದೇನೆ.

ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಅಧ್ಯಕ್ಷತೆ ವಹಿಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ನನ್ನ ಸಮ್ಮತಿಯನ್ನು ನೀಡಿದ್ದಾಗ ಮುಂದೆ ಈ ರೀತಿಯ ಪರಿಸ್ಥಿತಿ ಉದ್ಭವಿಸಬಹುದು ಎನ್ನುವ ಕಲ್ಪನೆ ನನಗೆ ಇರಲಿಲ್ಲ. ಆದರೆ ದುರದೃಷ್ಟವಶಾತ್ ಈ ರೀತಿಯ ಬೆಳವಣಿಗೆಗಳು ಘಟಿಸಿ ನನ್ನ ಮನಸ್ಸಿಗೆ ಕಸಿವಿಸಿ ಉಂಟಾಗಿದೆ. ಕವಿಗೋಷ್ಠಿಯ ಅಧ್ಯಕ್ಷತೆಗೆ ಒಪ್ಪಿಗೆ ನೀಡಿ ಈಗ ಅಸಮ್ಮತಿ ಸೂಚಿಸುತ್ತಿರುವುದರಿಂದ ನಿಮಗೆ ಆಗಬಹುದಾದ ಮುಜುಗುರಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಇನ್ನು ಮುಂದೆ ಇಂಥ ಘಟನೆಗಳು ಪುನರಾವರ್ತನೆ ಆಗದಂತೆ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ತಾವು ಗಮನ ಹರಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ.

ಇನ್ನು ಮುಂದೆ ಇಂಥ ಮುಜುಗುರದ ಸನ್ನಿವೇಶಗಳು ಸಮ್ಮೇಳನದಲ್ಲಿ ಉಂಟಾಗದಿರಲಿ ಎನ್ನುವ ಆಶಯದೊಂದಿಗೆ ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಶ ಕೋರುತ್ತೇನೆ.

  • ಎಚ್ ಆರ್ ಸುಜಾತ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಭಾಗವಹಿಸಿ ನಿಮ್ಮ ಪ್ರತಿರೋಧವನ್ನು ವೇದಿಕೆಯಲ್ಲಿ ಬಹಿರಂಗಪಡಿಸಿ. ಇಲ್ಲದಿದ್ದಲ್ಲಿ ಬಾಯಿಬಡುಕರಿಗೆ ಪುಕ್ಕಟೆ ಅವಕಾಶ ಸಿಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...