Homeಕರ್ನಾಟಕಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಲು ಮನಸ್ಸು ಒಪ್ಪುತ್ತಿಲ್ಲ: ಕಸಾಪ ಎಡವಟ್ಟಿಗೆ ಕವಯತ್ರಿ ಸುಜಾತ ಪ್ರತಿರೋಧ

ಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಲು ಮನಸ್ಸು ಒಪ್ಪುತ್ತಿಲ್ಲ: ಕಸಾಪ ಎಡವಟ್ಟಿಗೆ ಕವಯತ್ರಿ ಸುಜಾತ ಪ್ರತಿರೋಧ

- Advertisement -
- Advertisement -

ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಸಮ್ಮೇಳನದಿಂದ ಹೊರಗಿಟ್ಟು, ಕನ್ನಡತನವನ್ನು ಮರೆತಿರುವ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರ ಎಡವಟ್ಟಿಗೆ ಸಾಹಿತಿಗಳು ಸಾಂಸ್ಕೃತಿಕ ಪ್ರತಿರೋಧ ತೋರುತ್ತಿದ್ದು, ಕವಯತ್ರಿ ಎಚ್.ಆರ್‌.ಸುಜಾತ ಅವರು ಕವಿಗೋಷ್ಠಿಯೊಂದರ ಅಧ್ಯಕ್ಷತೆಯಿಂದ ಹಿಂದೆ ಸರಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿಯವರಿಗೆ ಪತ್ರ ಬರೆದಿರುವ ಸುಜಾತ ಅವರು, “ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ವಿಷಯವನ್ನು ವಿನಮ್ರತೆಯಿಂದ ನಿಮ್ಮಲ್ಲಿ ನಿವೇದಿಸಿ ಕೊಳ್ಳುತ್ತಿದ್ದೇನೆ” ಎಂದು ಕೋರಿದ್ದಾರೆ.

ಕಸಾಪ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲೇನಿದೆ?

ಮಾನ್ಯರೆ,

ಹಾವೇರಿಯಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಿನಾಂಕ 7.12. 2022ರಂದು ನಡೆಯಲಿರುವ ಕವಿಗೋಷ್ಠಿಗೆ ತಾವು ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುತ್ತೀರಿ. ಅದಕ್ಕಾಗಿ ನಾನು ತಮಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಈ ಸಂಬಂಧ ನನಗೆ ಡಿಜಿಟಲ್ ಮಾಧ್ಯಮದ ಮೂಲಕ ಆಹ್ವಾನ ಪತ್ರಿಕೆಯೂ ತಲುಪಿದೆ. ಆಹ್ವಾನ ಪತ್ರಿಕೆಯನ್ನು ಗಮನಿಸಿದಾಗ ಅದರಲ್ಲಿನ ವಿವಿಧ ಗೋಷ್ಠಿಗಳಲ್ಲಿ, ವೇದಿಕೆಗಳಲ್ಲಿ ಕನ್ನಡದ ಸಮಕಾಲೀನ ಮಹತ್ವದ ಲೇಖಕ ಲೇಖಕಿಯರ ಹೆಸರುಗಳೇ ಕಂಡು ಬರುತ್ತಿಲ್ಲ. ಅಲ್ಲದೇ ಕನ್ನಡಿಗರೇ ಆಗಿರುವ ಮುಸ್ಲಿಂ ಸಮುದಾಯದ ಲೇಖಕರ ಪ್ರಾತಿನಿಧ್ಯವೇ ಇರುವುದಿಲ್ಲ. ನೂರಾರು ಸಂಖ್ಯೆಯಲ್ಲಿರುವ ಬ್ಯಾರಿ ಸಮುದಾಯದ ಮಹತ್ವದ ಲೇಖಕರನ್ನು ಸಮ್ಮೇಳನದಲ್ಲಿ ಸಂಯೋಜಿಸಿ ಕೊಂಡಿರುವುದಿಲ್ಲ. ಈ ಬಗ್ಗೆ ಕನ್ನಡದ ಹಲವಾರು ಲೇಖಕರು ಮಾಧ್ಯಮದಲ್ಲಿ ತಮ್ಮ ಪ್ರತಿಕ್ರಿಯೆಯನ್ನೂ ವ್ಯಕ್ತಪಡಿಸಿರುತ್ತಾರೆ. ಇದಕ್ಕೆ ಪರಿಷತ್ತಿನ ವತಿಯಿಂದ ಯಾವುದೇ ರೀತಿಯ ಸಮಜಾಯಿಷಿ ಹೇಳಿಕೆಗಳೂ ಕೂಡಾ ಬಂದಿರುವುದಿಲ್ಲ. ಈ ಎಲ್ಲ ಘಟನೆಗಳನ್ನು ನೋಡಿದರೆ ಬ್ಯಾರಿ ಸಮುದಾಯದ ಲೇಖಕರನ್ನು ಸಮ್ಮೇಳನದಿಂದ ಬೇಕೆಂದೇ ದೂರವಿಟ್ಟಿರುವಂತೆ ಮೇಲು ನೋಟಕ್ಕೆ ಕಂಡು ಬರುತ್ತಿದೆ.

ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ರೀತಿಯ ತಾರತಮ್ಯ ಇರಬಾರದು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿರುತ್ತದೆ. ಇಂಥ ತಾರತಮ್ಯದಿಂದ ಕೂಡಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ವಿಷಯವನ್ನು ವಿನಮ್ರತೆಯಿಂದ ನಿಮ್ಮಲ್ಲಿ ನಿವೇದಿಸಿ ಕೊಳ್ಳುತ್ತಿದ್ದೇನೆ.

ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಅಧ್ಯಕ್ಷತೆ ವಹಿಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ನನ್ನ ಸಮ್ಮತಿಯನ್ನು ನೀಡಿದ್ದಾಗ ಮುಂದೆ ಈ ರೀತಿಯ ಪರಿಸ್ಥಿತಿ ಉದ್ಭವಿಸಬಹುದು ಎನ್ನುವ ಕಲ್ಪನೆ ನನಗೆ ಇರಲಿಲ್ಲ. ಆದರೆ ದುರದೃಷ್ಟವಶಾತ್ ಈ ರೀತಿಯ ಬೆಳವಣಿಗೆಗಳು ಘಟಿಸಿ ನನ್ನ ಮನಸ್ಸಿಗೆ ಕಸಿವಿಸಿ ಉಂಟಾಗಿದೆ. ಕವಿಗೋಷ್ಠಿಯ ಅಧ್ಯಕ್ಷತೆಗೆ ಒಪ್ಪಿಗೆ ನೀಡಿ ಈಗ ಅಸಮ್ಮತಿ ಸೂಚಿಸುತ್ತಿರುವುದರಿಂದ ನಿಮಗೆ ಆಗಬಹುದಾದ ಮುಜುಗುರಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಇನ್ನು ಮುಂದೆ ಇಂಥ ಘಟನೆಗಳು ಪುನರಾವರ್ತನೆ ಆಗದಂತೆ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ತಾವು ಗಮನ ಹರಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ.

ಇನ್ನು ಮುಂದೆ ಇಂಥ ಮುಜುಗುರದ ಸನ್ನಿವೇಶಗಳು ಸಮ್ಮೇಳನದಲ್ಲಿ ಉಂಟಾಗದಿರಲಿ ಎನ್ನುವ ಆಶಯದೊಂದಿಗೆ ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಶ ಕೋರುತ್ತೇನೆ.

  • ಎಚ್ ಆರ್ ಸುಜಾತ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಭಾಗವಹಿಸಿ ನಿಮ್ಮ ಪ್ರತಿರೋಧವನ್ನು ವೇದಿಕೆಯಲ್ಲಿ ಬಹಿರಂಗಪಡಿಸಿ. ಇಲ್ಲದಿದ್ದಲ್ಲಿ ಬಾಯಿಬಡುಕರಿಗೆ ಪುಕ್ಕಟೆ ಅವಕಾಶ ಸಿಗುತ್ತದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...