Homeಕರ್ನಾಟಕಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಲು ಮನಸ್ಸು ಒಪ್ಪುತ್ತಿಲ್ಲ: ಕಸಾಪ ಎಡವಟ್ಟಿಗೆ ಕವಯತ್ರಿ ಸುಜಾತ ಪ್ರತಿರೋಧ

ಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಲು ಮನಸ್ಸು ಒಪ್ಪುತ್ತಿಲ್ಲ: ಕಸಾಪ ಎಡವಟ್ಟಿಗೆ ಕವಯತ್ರಿ ಸುಜಾತ ಪ್ರತಿರೋಧ

- Advertisement -
- Advertisement -

ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಸಮ್ಮೇಳನದಿಂದ ಹೊರಗಿಟ್ಟು, ಕನ್ನಡತನವನ್ನು ಮರೆತಿರುವ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರ ಎಡವಟ್ಟಿಗೆ ಸಾಹಿತಿಗಳು ಸಾಂಸ್ಕೃತಿಕ ಪ್ರತಿರೋಧ ತೋರುತ್ತಿದ್ದು, ಕವಯತ್ರಿ ಎಚ್.ಆರ್‌.ಸುಜಾತ ಅವರು ಕವಿಗೋಷ್ಠಿಯೊಂದರ ಅಧ್ಯಕ್ಷತೆಯಿಂದ ಹಿಂದೆ ಸರಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿಯವರಿಗೆ ಪತ್ರ ಬರೆದಿರುವ ಸುಜಾತ ಅವರು, “ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ವಿಷಯವನ್ನು ವಿನಮ್ರತೆಯಿಂದ ನಿಮ್ಮಲ್ಲಿ ನಿವೇದಿಸಿ ಕೊಳ್ಳುತ್ತಿದ್ದೇನೆ” ಎಂದು ಕೋರಿದ್ದಾರೆ.

ಕಸಾಪ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲೇನಿದೆ?

ಮಾನ್ಯರೆ,

ಹಾವೇರಿಯಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಿನಾಂಕ 7.12. 2022ರಂದು ನಡೆಯಲಿರುವ ಕವಿಗೋಷ್ಠಿಗೆ ತಾವು ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುತ್ತೀರಿ. ಅದಕ್ಕಾಗಿ ನಾನು ತಮಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಈ ಸಂಬಂಧ ನನಗೆ ಡಿಜಿಟಲ್ ಮಾಧ್ಯಮದ ಮೂಲಕ ಆಹ್ವಾನ ಪತ್ರಿಕೆಯೂ ತಲುಪಿದೆ. ಆಹ್ವಾನ ಪತ್ರಿಕೆಯನ್ನು ಗಮನಿಸಿದಾಗ ಅದರಲ್ಲಿನ ವಿವಿಧ ಗೋಷ್ಠಿಗಳಲ್ಲಿ, ವೇದಿಕೆಗಳಲ್ಲಿ ಕನ್ನಡದ ಸಮಕಾಲೀನ ಮಹತ್ವದ ಲೇಖಕ ಲೇಖಕಿಯರ ಹೆಸರುಗಳೇ ಕಂಡು ಬರುತ್ತಿಲ್ಲ. ಅಲ್ಲದೇ ಕನ್ನಡಿಗರೇ ಆಗಿರುವ ಮುಸ್ಲಿಂ ಸಮುದಾಯದ ಲೇಖಕರ ಪ್ರಾತಿನಿಧ್ಯವೇ ಇರುವುದಿಲ್ಲ. ನೂರಾರು ಸಂಖ್ಯೆಯಲ್ಲಿರುವ ಬ್ಯಾರಿ ಸಮುದಾಯದ ಮಹತ್ವದ ಲೇಖಕರನ್ನು ಸಮ್ಮೇಳನದಲ್ಲಿ ಸಂಯೋಜಿಸಿ ಕೊಂಡಿರುವುದಿಲ್ಲ. ಈ ಬಗ್ಗೆ ಕನ್ನಡದ ಹಲವಾರು ಲೇಖಕರು ಮಾಧ್ಯಮದಲ್ಲಿ ತಮ್ಮ ಪ್ರತಿಕ್ರಿಯೆಯನ್ನೂ ವ್ಯಕ್ತಪಡಿಸಿರುತ್ತಾರೆ. ಇದಕ್ಕೆ ಪರಿಷತ್ತಿನ ವತಿಯಿಂದ ಯಾವುದೇ ರೀತಿಯ ಸಮಜಾಯಿಷಿ ಹೇಳಿಕೆಗಳೂ ಕೂಡಾ ಬಂದಿರುವುದಿಲ್ಲ. ಈ ಎಲ್ಲ ಘಟನೆಗಳನ್ನು ನೋಡಿದರೆ ಬ್ಯಾರಿ ಸಮುದಾಯದ ಲೇಖಕರನ್ನು ಸಮ್ಮೇಳನದಿಂದ ಬೇಕೆಂದೇ ದೂರವಿಟ್ಟಿರುವಂತೆ ಮೇಲು ನೋಟಕ್ಕೆ ಕಂಡು ಬರುತ್ತಿದೆ.

ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ರೀತಿಯ ತಾರತಮ್ಯ ಇರಬಾರದು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿರುತ್ತದೆ. ಇಂಥ ತಾರತಮ್ಯದಿಂದ ಕೂಡಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ವಿಷಯವನ್ನು ವಿನಮ್ರತೆಯಿಂದ ನಿಮ್ಮಲ್ಲಿ ನಿವೇದಿಸಿ ಕೊಳ್ಳುತ್ತಿದ್ದೇನೆ.

ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಅಧ್ಯಕ್ಷತೆ ವಹಿಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ನನ್ನ ಸಮ್ಮತಿಯನ್ನು ನೀಡಿದ್ದಾಗ ಮುಂದೆ ಈ ರೀತಿಯ ಪರಿಸ್ಥಿತಿ ಉದ್ಭವಿಸಬಹುದು ಎನ್ನುವ ಕಲ್ಪನೆ ನನಗೆ ಇರಲಿಲ್ಲ. ಆದರೆ ದುರದೃಷ್ಟವಶಾತ್ ಈ ರೀತಿಯ ಬೆಳವಣಿಗೆಗಳು ಘಟಿಸಿ ನನ್ನ ಮನಸ್ಸಿಗೆ ಕಸಿವಿಸಿ ಉಂಟಾಗಿದೆ. ಕವಿಗೋಷ್ಠಿಯ ಅಧ್ಯಕ್ಷತೆಗೆ ಒಪ್ಪಿಗೆ ನೀಡಿ ಈಗ ಅಸಮ್ಮತಿ ಸೂಚಿಸುತ್ತಿರುವುದರಿಂದ ನಿಮಗೆ ಆಗಬಹುದಾದ ಮುಜುಗುರಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಇನ್ನು ಮುಂದೆ ಇಂಥ ಘಟನೆಗಳು ಪುನರಾವರ್ತನೆ ಆಗದಂತೆ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ತಾವು ಗಮನ ಹರಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ.

ಇನ್ನು ಮುಂದೆ ಇಂಥ ಮುಜುಗುರದ ಸನ್ನಿವೇಶಗಳು ಸಮ್ಮೇಳನದಲ್ಲಿ ಉಂಟಾಗದಿರಲಿ ಎನ್ನುವ ಆಶಯದೊಂದಿಗೆ ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಶ ಕೋರುತ್ತೇನೆ.

  • ಎಚ್ ಆರ್ ಸುಜಾತ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಭಾಗವಹಿಸಿ ನಿಮ್ಮ ಪ್ರತಿರೋಧವನ್ನು ವೇದಿಕೆಯಲ್ಲಿ ಬಹಿರಂಗಪಡಿಸಿ. ಇಲ್ಲದಿದ್ದಲ್ಲಿ ಬಾಯಿಬಡುಕರಿಗೆ ಪುಕ್ಕಟೆ ಅವಕಾಶ ಸಿಗುತ್ತದೆ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...