Homeಮುಖಪುಟಹಾಂಗ್‌ಕಾಂಗ್: 'ದೇಶ ಪ್ರೇಮಿಗಳಿಗೆ' ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

ಹಾಂಗ್‌ಕಾಂಗ್: ‘ದೇಶ ಪ್ರೇಮಿಗಳಿಗೆ’ ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

- Advertisement -
- Advertisement -

ಹಾಂಗ್‌ಕಾಂಗ್‌ನಲ್ಲಿ ಭಾನುವಾರ ಜಿಲ್ಲಾ ಕೌನ್ಸಿಲ್‌ಗೆ ಪ್ರಪ್ರಥಮ ಬಾರಿಗೆ ನಡೆದ “ದೇಶಭಕ್ತರಿಗೆ ಮಾತ್ರ” ಚುನಾವಣೆಯಲ್ಲಿ ಶೇ. 27.5 ಮಾತ್ರ ಮತದಾನವಾಗಿದೆ. ಪ್ರಜಾಪ್ರಭುತ್ವದ ಪರ ಇರುವ ಎಲ್ಲಾ ವಿರೋಧ ಪಕ್ಷಗಳನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಅತ್ಯಂತ ಕಡಿಮೆ ಮತದಾನವಾಗಿದೆ.

2019ರಲ್ಲಿ ಕೆಲ ತಿಂಗಳ ಕಾಲ ಹಾಂಗ್‌ಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಅದು ಹಿಂಸಾತ್ಮಕ ರೂಪ ಪಡೆದಿತ್ತು. ಆ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿತ್ತು. ಪ್ರಜಾಪ್ರಭುತ್ವದ ಪರ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದರು. ಇದರಿಂದ ಪ್ರತಿಪಕ್ಷಗಳು ಭಾರೀ ವಿಜಯ ಸಾಧಿಸಿತ್ತು.

ಹಾಂಗ್‌ಕಾಂಗ್‌ ನಮ್ಮ ದೇಶದ ಭಾಗ ಎಂದು ಹೇಳುವ ಚೀನಾ 2019ರ ನಂತರ ‘ರಾಷ್ಟ್ರೀಯ ಭದ್ರತಾ ಕಾನೂನ’ನ್ನು ಜಾರಿಗೊಳಿಸಿತ್ತು. ಇದರಡಿ ವಿಪಕ್ಷ ನಾಯಕರನ್ನು ಬಂಧಿಸಿತ್ತು. ಪ್ರಜಾಪ್ರಭುತ್ವಕ್ಕಾಗಿ ಹೋರಾಡುವವರ ಧ್ವನಿಯನ್ನು ಅಡಗಿಸಿತ್ತು. ಈ ವರ್ಷದ ಮೇ ತಿಂಗಳಿನಿಂದ ಸಂಪೂರ್ಣವಾಗಿ ಜಾರಿಗೆ ಬಂಧಿರುವ ಈ ದಬ್ಬಾಳಿಕೆಯ ಕಾನೂನು, ಜಿಲ್ಲಾ ಸಮಿತಿಗಳಿಗೆ ನೇರವಾಗಿ ಆಯ್ಕೆಯಾಗುವ ಸ್ಥಾನಗಳನ್ನು 462ರಿಂದ 88ಕ್ಕೆ ಕಡಿತಗೊಳಿಸಿತ್ತು. ಉಳಿದ 382 ಸ್ಥಾನಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ನಗರದ ಮುಖಂಡರು, ಚೀನಾ ಸರ್ಕಾರಕ್ಕೆ ನಿಷ್ಠರಾಗಿರುವವರು ಮತ್ತು ಗ್ರಾಮೀಣ ಪ್ರದೇಶದ ಜಮೀನ್ದಾರರಿಗೆ ಮಾತ್ರ ಮೀಸಲಿಟ್ಟಿತ್ತು.

ಚುನಾವಣೆಗೆ ಸ್ಪರ್ಧಿಸಲು ಮೀಸಲಿಟ್ಟ 88 ಸ್ಥಾನಗಳಿಗೆ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಸರ್ಕಾರ ನೇಮಿಸಿದ ಸಮಿತಿ ಅನುಮೋದಿಸಿದ ಬಳಿಕವಷ್ಟೇ ಅವಕಾಶ ನೀಡಲಾಗಿತ್ತು. ಪ್ರಜಾಪ್ರಭುತ್ವದ ಪರ ಇರುವ ಅಭ್ಯರ್ಥಿಗಳಿಗೆ ಚುನಾವಣೆಗೆ ಸ್ಪರ್ಧಿಸುವ ಮತ್ತು ಮತ ಚಲಾಯಿಸುವ ಅವಕಾಶವನ್ನೇ ಕಿತ್ತುಕೊಳ್ಳಲಾಗಿತ್ತು. ಇವೆಲ್ಲದರ ಪರಿಣಾಮ ಚೀನಾ ಸರ್ಕಾರದ ಅನತಿಯಂತೆ ಕಾಟಾಚಾರದ ಚುನಾವಣೆ ನಡೆದಿದೆ. ಜನರು ಅತ್ಯಂತ ಕಡಿಮೆ ಮತದಾನ ಮಾಡುವ ಮೂಲಕ ದಬ್ಬಾಳಿಕೆಯ ಆಡಳಿತದ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಹಾಂಗ್‌ಕಾಂಗ್‌ನ 4.3 ಮಿಲಿಯನ್ ನೋಂದಾಯಿತ ಮತದಾರರಲ್ಲಿ ಕೇವಲ 1.2 ಮಿಲಿಯನ್‌ಗಿಂತಲೂ ಕಡಿಮೆ ಮತದಾರರು ಮತ ಚಲಾಯಿಸಿದ್ದಾರೆ. “ಚುನಾವಣೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಗೊತ್ತಿದ್ದ ಮೇಲೂ ಜನರು ಯಾಕೆ ಮತ ಚಲಾಯಿಸುತ್ತಾ ಎಂದು ಪ್ರಜಾಪ್ರಭುತ್ವವಾದಿಗಳಲ್ಲಿ ಒಬ್ಬರಾದ ಲೆಮನ್ ವಾಂಗ್ ಪ್ರಶ್ನಿಸಿದ್ದಾರೆ.

ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಹಾಂಗ್ ಕಾಂಗ್ ಅನ್ನು ವಿಶೇಷ ಆಡಳಿತ ಪ್ರದೇಶವನ್ನಾಗಿ ಘೋಷಿಸಿದೆ. 1997 ರಲ್ಲಿ ಇಡೀ ಪ್ರದೇಶವನ್ನು ಯುನೈಟೆಡ್ ಕಿಂಗ್‌ಡಮ್‌ನಿಂದ ಚೀನಾಕ್ಕೆ ವರ್ಗಾಯಿಸಲಾಯಿತು. ಹಾಂಗ್‌ಕಾಂಗ್‌ ‘ಒಂದು ದೇಶ, ಎರಡು ವ್ಯವಸ್ಥೆಗಳು’ ತತ್ವದ ಅಡಿಯಲ್ಲಿ ಚೀನಾದ ಮುಖ್ಯ ಭೂಭಾಗದಿಂದ ಪ್ರತ್ಯೇಕವಾಗಿ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನರು ತಮ್ಮದು ಪ್ರತ್ಯೇಖ ಪ್ರಜಾಪ್ರಭುತ್ವ ದೇಶ ಎಂದು ವಾದಿಸುತ್ತಿದ್ದರೆ, ಚೀನಾ ಸರ್ಕಾರ ಮಾತ್ರ ಇಲ್ಲ ಹಾಂಕ್‌ಕಾಂಗ್ ನಮ್ಮ ದೇಶದ ಭೂಭಾಗ ಎಂದು ದಬ್ಬಾಳಿಕೆಯ ನಿಯಮಗಳನ್ನು ಹೇರುತ್ತಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...