Homeಮುಖಪುಟಹಾಂಗ್‌ಕಾಂಗ್: 'ದೇಶ ಪ್ರೇಮಿಗಳಿಗೆ' ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

ಹಾಂಗ್‌ಕಾಂಗ್: ‘ದೇಶ ಪ್ರೇಮಿಗಳಿಗೆ’ ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

- Advertisement -
- Advertisement -

ಹಾಂಗ್‌ಕಾಂಗ್‌ನಲ್ಲಿ ಭಾನುವಾರ ಜಿಲ್ಲಾ ಕೌನ್ಸಿಲ್‌ಗೆ ಪ್ರಪ್ರಥಮ ಬಾರಿಗೆ ನಡೆದ “ದೇಶಭಕ್ತರಿಗೆ ಮಾತ್ರ” ಚುನಾವಣೆಯಲ್ಲಿ ಶೇ. 27.5 ಮಾತ್ರ ಮತದಾನವಾಗಿದೆ. ಪ್ರಜಾಪ್ರಭುತ್ವದ ಪರ ಇರುವ ಎಲ್ಲಾ ವಿರೋಧ ಪಕ್ಷಗಳನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಅತ್ಯಂತ ಕಡಿಮೆ ಮತದಾನವಾಗಿದೆ.

2019ರಲ್ಲಿ ಕೆಲ ತಿಂಗಳ ಕಾಲ ಹಾಂಗ್‌ಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಅದು ಹಿಂಸಾತ್ಮಕ ರೂಪ ಪಡೆದಿತ್ತು. ಆ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿತ್ತು. ಪ್ರಜಾಪ್ರಭುತ್ವದ ಪರ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದರು. ಇದರಿಂದ ಪ್ರತಿಪಕ್ಷಗಳು ಭಾರೀ ವಿಜಯ ಸಾಧಿಸಿತ್ತು.

ಹಾಂಗ್‌ಕಾಂಗ್‌ ನಮ್ಮ ದೇಶದ ಭಾಗ ಎಂದು ಹೇಳುವ ಚೀನಾ 2019ರ ನಂತರ ‘ರಾಷ್ಟ್ರೀಯ ಭದ್ರತಾ ಕಾನೂನ’ನ್ನು ಜಾರಿಗೊಳಿಸಿತ್ತು. ಇದರಡಿ ವಿಪಕ್ಷ ನಾಯಕರನ್ನು ಬಂಧಿಸಿತ್ತು. ಪ್ರಜಾಪ್ರಭುತ್ವಕ್ಕಾಗಿ ಹೋರಾಡುವವರ ಧ್ವನಿಯನ್ನು ಅಡಗಿಸಿತ್ತು. ಈ ವರ್ಷದ ಮೇ ತಿಂಗಳಿನಿಂದ ಸಂಪೂರ್ಣವಾಗಿ ಜಾರಿಗೆ ಬಂಧಿರುವ ಈ ದಬ್ಬಾಳಿಕೆಯ ಕಾನೂನು, ಜಿಲ್ಲಾ ಸಮಿತಿಗಳಿಗೆ ನೇರವಾಗಿ ಆಯ್ಕೆಯಾಗುವ ಸ್ಥಾನಗಳನ್ನು 462ರಿಂದ 88ಕ್ಕೆ ಕಡಿತಗೊಳಿಸಿತ್ತು. ಉಳಿದ 382 ಸ್ಥಾನಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ನಗರದ ಮುಖಂಡರು, ಚೀನಾ ಸರ್ಕಾರಕ್ಕೆ ನಿಷ್ಠರಾಗಿರುವವರು ಮತ್ತು ಗ್ರಾಮೀಣ ಪ್ರದೇಶದ ಜಮೀನ್ದಾರರಿಗೆ ಮಾತ್ರ ಮೀಸಲಿಟ್ಟಿತ್ತು.

ಚುನಾವಣೆಗೆ ಸ್ಪರ್ಧಿಸಲು ಮೀಸಲಿಟ್ಟ 88 ಸ್ಥಾನಗಳಿಗೆ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಸರ್ಕಾರ ನೇಮಿಸಿದ ಸಮಿತಿ ಅನುಮೋದಿಸಿದ ಬಳಿಕವಷ್ಟೇ ಅವಕಾಶ ನೀಡಲಾಗಿತ್ತು. ಪ್ರಜಾಪ್ರಭುತ್ವದ ಪರ ಇರುವ ಅಭ್ಯರ್ಥಿಗಳಿಗೆ ಚುನಾವಣೆಗೆ ಸ್ಪರ್ಧಿಸುವ ಮತ್ತು ಮತ ಚಲಾಯಿಸುವ ಅವಕಾಶವನ್ನೇ ಕಿತ್ತುಕೊಳ್ಳಲಾಗಿತ್ತು. ಇವೆಲ್ಲದರ ಪರಿಣಾಮ ಚೀನಾ ಸರ್ಕಾರದ ಅನತಿಯಂತೆ ಕಾಟಾಚಾರದ ಚುನಾವಣೆ ನಡೆದಿದೆ. ಜನರು ಅತ್ಯಂತ ಕಡಿಮೆ ಮತದಾನ ಮಾಡುವ ಮೂಲಕ ದಬ್ಬಾಳಿಕೆಯ ಆಡಳಿತದ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಹಾಂಗ್‌ಕಾಂಗ್‌ನ 4.3 ಮಿಲಿಯನ್ ನೋಂದಾಯಿತ ಮತದಾರರಲ್ಲಿ ಕೇವಲ 1.2 ಮಿಲಿಯನ್‌ಗಿಂತಲೂ ಕಡಿಮೆ ಮತದಾರರು ಮತ ಚಲಾಯಿಸಿದ್ದಾರೆ. “ಚುನಾವಣೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಗೊತ್ತಿದ್ದ ಮೇಲೂ ಜನರು ಯಾಕೆ ಮತ ಚಲಾಯಿಸುತ್ತಾ ಎಂದು ಪ್ರಜಾಪ್ರಭುತ್ವವಾದಿಗಳಲ್ಲಿ ಒಬ್ಬರಾದ ಲೆಮನ್ ವಾಂಗ್ ಪ್ರಶ್ನಿಸಿದ್ದಾರೆ.

ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಹಾಂಗ್ ಕಾಂಗ್ ಅನ್ನು ವಿಶೇಷ ಆಡಳಿತ ಪ್ರದೇಶವನ್ನಾಗಿ ಘೋಷಿಸಿದೆ. 1997 ರಲ್ಲಿ ಇಡೀ ಪ್ರದೇಶವನ್ನು ಯುನೈಟೆಡ್ ಕಿಂಗ್‌ಡಮ್‌ನಿಂದ ಚೀನಾಕ್ಕೆ ವರ್ಗಾಯಿಸಲಾಯಿತು. ಹಾಂಗ್‌ಕಾಂಗ್‌ ‘ಒಂದು ದೇಶ, ಎರಡು ವ್ಯವಸ್ಥೆಗಳು’ ತತ್ವದ ಅಡಿಯಲ್ಲಿ ಚೀನಾದ ಮುಖ್ಯ ಭೂಭಾಗದಿಂದ ಪ್ರತ್ಯೇಕವಾಗಿ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನರು ತಮ್ಮದು ಪ್ರತ್ಯೇಖ ಪ್ರಜಾಪ್ರಭುತ್ವ ದೇಶ ಎಂದು ವಾದಿಸುತ್ತಿದ್ದರೆ, ಚೀನಾ ಸರ್ಕಾರ ಮಾತ್ರ ಇಲ್ಲ ಹಾಂಕ್‌ಕಾಂಗ್ ನಮ್ಮ ದೇಶದ ಭೂಭಾಗ ಎಂದು ದಬ್ಬಾಳಿಕೆಯ ನಿಯಮಗಳನ್ನು ಹೇರುತ್ತಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...