Homeಮುಖಪುಟಹಾಂಗ್‌ಕಾಂಗ್: 'ದೇಶ ಪ್ರೇಮಿಗಳಿಗೆ' ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

ಹಾಂಗ್‌ಕಾಂಗ್: ‘ದೇಶ ಪ್ರೇಮಿಗಳಿಗೆ’ ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

- Advertisement -
- Advertisement -

ಹಾಂಗ್‌ಕಾಂಗ್‌ನಲ್ಲಿ ಭಾನುವಾರ ಜಿಲ್ಲಾ ಕೌನ್ಸಿಲ್‌ಗೆ ಪ್ರಪ್ರಥಮ ಬಾರಿಗೆ ನಡೆದ “ದೇಶಭಕ್ತರಿಗೆ ಮಾತ್ರ” ಚುನಾವಣೆಯಲ್ಲಿ ಶೇ. 27.5 ಮಾತ್ರ ಮತದಾನವಾಗಿದೆ. ಪ್ರಜಾಪ್ರಭುತ್ವದ ಪರ ಇರುವ ಎಲ್ಲಾ ವಿರೋಧ ಪಕ್ಷಗಳನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಅತ್ಯಂತ ಕಡಿಮೆ ಮತದಾನವಾಗಿದೆ.

2019ರಲ್ಲಿ ಕೆಲ ತಿಂಗಳ ಕಾಲ ಹಾಂಗ್‌ಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಅದು ಹಿಂಸಾತ್ಮಕ ರೂಪ ಪಡೆದಿತ್ತು. ಆ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿತ್ತು. ಪ್ರಜಾಪ್ರಭುತ್ವದ ಪರ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದರು. ಇದರಿಂದ ಪ್ರತಿಪಕ್ಷಗಳು ಭಾರೀ ವಿಜಯ ಸಾಧಿಸಿತ್ತು.

ಹಾಂಗ್‌ಕಾಂಗ್‌ ನಮ್ಮ ದೇಶದ ಭಾಗ ಎಂದು ಹೇಳುವ ಚೀನಾ 2019ರ ನಂತರ ‘ರಾಷ್ಟ್ರೀಯ ಭದ್ರತಾ ಕಾನೂನ’ನ್ನು ಜಾರಿಗೊಳಿಸಿತ್ತು. ಇದರಡಿ ವಿಪಕ್ಷ ನಾಯಕರನ್ನು ಬಂಧಿಸಿತ್ತು. ಪ್ರಜಾಪ್ರಭುತ್ವಕ್ಕಾಗಿ ಹೋರಾಡುವವರ ಧ್ವನಿಯನ್ನು ಅಡಗಿಸಿತ್ತು. ಈ ವರ್ಷದ ಮೇ ತಿಂಗಳಿನಿಂದ ಸಂಪೂರ್ಣವಾಗಿ ಜಾರಿಗೆ ಬಂಧಿರುವ ಈ ದಬ್ಬಾಳಿಕೆಯ ಕಾನೂನು, ಜಿಲ್ಲಾ ಸಮಿತಿಗಳಿಗೆ ನೇರವಾಗಿ ಆಯ್ಕೆಯಾಗುವ ಸ್ಥಾನಗಳನ್ನು 462ರಿಂದ 88ಕ್ಕೆ ಕಡಿತಗೊಳಿಸಿತ್ತು. ಉಳಿದ 382 ಸ್ಥಾನಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ನಗರದ ಮುಖಂಡರು, ಚೀನಾ ಸರ್ಕಾರಕ್ಕೆ ನಿಷ್ಠರಾಗಿರುವವರು ಮತ್ತು ಗ್ರಾಮೀಣ ಪ್ರದೇಶದ ಜಮೀನ್ದಾರರಿಗೆ ಮಾತ್ರ ಮೀಸಲಿಟ್ಟಿತ್ತು.

ಚುನಾವಣೆಗೆ ಸ್ಪರ್ಧಿಸಲು ಮೀಸಲಿಟ್ಟ 88 ಸ್ಥಾನಗಳಿಗೆ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಸರ್ಕಾರ ನೇಮಿಸಿದ ಸಮಿತಿ ಅನುಮೋದಿಸಿದ ಬಳಿಕವಷ್ಟೇ ಅವಕಾಶ ನೀಡಲಾಗಿತ್ತು. ಪ್ರಜಾಪ್ರಭುತ್ವದ ಪರ ಇರುವ ಅಭ್ಯರ್ಥಿಗಳಿಗೆ ಚುನಾವಣೆಗೆ ಸ್ಪರ್ಧಿಸುವ ಮತ್ತು ಮತ ಚಲಾಯಿಸುವ ಅವಕಾಶವನ್ನೇ ಕಿತ್ತುಕೊಳ್ಳಲಾಗಿತ್ತು. ಇವೆಲ್ಲದರ ಪರಿಣಾಮ ಚೀನಾ ಸರ್ಕಾರದ ಅನತಿಯಂತೆ ಕಾಟಾಚಾರದ ಚುನಾವಣೆ ನಡೆದಿದೆ. ಜನರು ಅತ್ಯಂತ ಕಡಿಮೆ ಮತದಾನ ಮಾಡುವ ಮೂಲಕ ದಬ್ಬಾಳಿಕೆಯ ಆಡಳಿತದ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಹಾಂಗ್‌ಕಾಂಗ್‌ನ 4.3 ಮಿಲಿಯನ್ ನೋಂದಾಯಿತ ಮತದಾರರಲ್ಲಿ ಕೇವಲ 1.2 ಮಿಲಿಯನ್‌ಗಿಂತಲೂ ಕಡಿಮೆ ಮತದಾರರು ಮತ ಚಲಾಯಿಸಿದ್ದಾರೆ. “ಚುನಾವಣೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಗೊತ್ತಿದ್ದ ಮೇಲೂ ಜನರು ಯಾಕೆ ಮತ ಚಲಾಯಿಸುತ್ತಾ ಎಂದು ಪ್ರಜಾಪ್ರಭುತ್ವವಾದಿಗಳಲ್ಲಿ ಒಬ್ಬರಾದ ಲೆಮನ್ ವಾಂಗ್ ಪ್ರಶ್ನಿಸಿದ್ದಾರೆ.

ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಹಾಂಗ್ ಕಾಂಗ್ ಅನ್ನು ವಿಶೇಷ ಆಡಳಿತ ಪ್ರದೇಶವನ್ನಾಗಿ ಘೋಷಿಸಿದೆ. 1997 ರಲ್ಲಿ ಇಡೀ ಪ್ರದೇಶವನ್ನು ಯುನೈಟೆಡ್ ಕಿಂಗ್‌ಡಮ್‌ನಿಂದ ಚೀನಾಕ್ಕೆ ವರ್ಗಾಯಿಸಲಾಯಿತು. ಹಾಂಗ್‌ಕಾಂಗ್‌ ‘ಒಂದು ದೇಶ, ಎರಡು ವ್ಯವಸ್ಥೆಗಳು’ ತತ್ವದ ಅಡಿಯಲ್ಲಿ ಚೀನಾದ ಮುಖ್ಯ ಭೂಭಾಗದಿಂದ ಪ್ರತ್ಯೇಕವಾಗಿ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನರು ತಮ್ಮದು ಪ್ರತ್ಯೇಖ ಪ್ರಜಾಪ್ರಭುತ್ವ ದೇಶ ಎಂದು ವಾದಿಸುತ್ತಿದ್ದರೆ, ಚೀನಾ ಸರ್ಕಾರ ಮಾತ್ರ ಇಲ್ಲ ಹಾಂಕ್‌ಕಾಂಗ್ ನಮ್ಮ ದೇಶದ ಭೂಭಾಗ ಎಂದು ದಬ್ಬಾಳಿಕೆಯ ನಿಯಮಗಳನ್ನು ಹೇರುತ್ತಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...