Homeಮುಖಪುಟಹಾಂಗ್‌ಕಾಂಗ್: 'ದೇಶ ಪ್ರೇಮಿಗಳಿಗೆ' ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

ಹಾಂಗ್‌ಕಾಂಗ್: ‘ದೇಶ ಪ್ರೇಮಿಗಳಿಗೆ’ ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

- Advertisement -
- Advertisement -

ಹಾಂಗ್‌ಕಾಂಗ್‌ನಲ್ಲಿ ಭಾನುವಾರ ಜಿಲ್ಲಾ ಕೌನ್ಸಿಲ್‌ಗೆ ಪ್ರಪ್ರಥಮ ಬಾರಿಗೆ ನಡೆದ “ದೇಶಭಕ್ತರಿಗೆ ಮಾತ್ರ” ಚುನಾವಣೆಯಲ್ಲಿ ಶೇ. 27.5 ಮಾತ್ರ ಮತದಾನವಾಗಿದೆ. ಪ್ರಜಾಪ್ರಭುತ್ವದ ಪರ ಇರುವ ಎಲ್ಲಾ ವಿರೋಧ ಪಕ್ಷಗಳನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಅತ್ಯಂತ ಕಡಿಮೆ ಮತದಾನವಾಗಿದೆ.

2019ರಲ್ಲಿ ಕೆಲ ತಿಂಗಳ ಕಾಲ ಹಾಂಗ್‌ಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಅದು ಹಿಂಸಾತ್ಮಕ ರೂಪ ಪಡೆದಿತ್ತು. ಆ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿತ್ತು. ಪ್ರಜಾಪ್ರಭುತ್ವದ ಪರ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದರು. ಇದರಿಂದ ಪ್ರತಿಪಕ್ಷಗಳು ಭಾರೀ ವಿಜಯ ಸಾಧಿಸಿತ್ತು.

ಹಾಂಗ್‌ಕಾಂಗ್‌ ನಮ್ಮ ದೇಶದ ಭಾಗ ಎಂದು ಹೇಳುವ ಚೀನಾ 2019ರ ನಂತರ ‘ರಾಷ್ಟ್ರೀಯ ಭದ್ರತಾ ಕಾನೂನ’ನ್ನು ಜಾರಿಗೊಳಿಸಿತ್ತು. ಇದರಡಿ ವಿಪಕ್ಷ ನಾಯಕರನ್ನು ಬಂಧಿಸಿತ್ತು. ಪ್ರಜಾಪ್ರಭುತ್ವಕ್ಕಾಗಿ ಹೋರಾಡುವವರ ಧ್ವನಿಯನ್ನು ಅಡಗಿಸಿತ್ತು. ಈ ವರ್ಷದ ಮೇ ತಿಂಗಳಿನಿಂದ ಸಂಪೂರ್ಣವಾಗಿ ಜಾರಿಗೆ ಬಂಧಿರುವ ಈ ದಬ್ಬಾಳಿಕೆಯ ಕಾನೂನು, ಜಿಲ್ಲಾ ಸಮಿತಿಗಳಿಗೆ ನೇರವಾಗಿ ಆಯ್ಕೆಯಾಗುವ ಸ್ಥಾನಗಳನ್ನು 462ರಿಂದ 88ಕ್ಕೆ ಕಡಿತಗೊಳಿಸಿತ್ತು. ಉಳಿದ 382 ಸ್ಥಾನಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ನಗರದ ಮುಖಂಡರು, ಚೀನಾ ಸರ್ಕಾರಕ್ಕೆ ನಿಷ್ಠರಾಗಿರುವವರು ಮತ್ತು ಗ್ರಾಮೀಣ ಪ್ರದೇಶದ ಜಮೀನ್ದಾರರಿಗೆ ಮಾತ್ರ ಮೀಸಲಿಟ್ಟಿತ್ತು.

ಚುನಾವಣೆಗೆ ಸ್ಪರ್ಧಿಸಲು ಮೀಸಲಿಟ್ಟ 88 ಸ್ಥಾನಗಳಿಗೆ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಸರ್ಕಾರ ನೇಮಿಸಿದ ಸಮಿತಿ ಅನುಮೋದಿಸಿದ ಬಳಿಕವಷ್ಟೇ ಅವಕಾಶ ನೀಡಲಾಗಿತ್ತು. ಪ್ರಜಾಪ್ರಭುತ್ವದ ಪರ ಇರುವ ಅಭ್ಯರ್ಥಿಗಳಿಗೆ ಚುನಾವಣೆಗೆ ಸ್ಪರ್ಧಿಸುವ ಮತ್ತು ಮತ ಚಲಾಯಿಸುವ ಅವಕಾಶವನ್ನೇ ಕಿತ್ತುಕೊಳ್ಳಲಾಗಿತ್ತು. ಇವೆಲ್ಲದರ ಪರಿಣಾಮ ಚೀನಾ ಸರ್ಕಾರದ ಅನತಿಯಂತೆ ಕಾಟಾಚಾರದ ಚುನಾವಣೆ ನಡೆದಿದೆ. ಜನರು ಅತ್ಯಂತ ಕಡಿಮೆ ಮತದಾನ ಮಾಡುವ ಮೂಲಕ ದಬ್ಬಾಳಿಕೆಯ ಆಡಳಿತದ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಹಾಂಗ್‌ಕಾಂಗ್‌ನ 4.3 ಮಿಲಿಯನ್ ನೋಂದಾಯಿತ ಮತದಾರರಲ್ಲಿ ಕೇವಲ 1.2 ಮಿಲಿಯನ್‌ಗಿಂತಲೂ ಕಡಿಮೆ ಮತದಾರರು ಮತ ಚಲಾಯಿಸಿದ್ದಾರೆ. “ಚುನಾವಣೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಗೊತ್ತಿದ್ದ ಮೇಲೂ ಜನರು ಯಾಕೆ ಮತ ಚಲಾಯಿಸುತ್ತಾ ಎಂದು ಪ್ರಜಾಪ್ರಭುತ್ವವಾದಿಗಳಲ್ಲಿ ಒಬ್ಬರಾದ ಲೆಮನ್ ವಾಂಗ್ ಪ್ರಶ್ನಿಸಿದ್ದಾರೆ.

ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಹಾಂಗ್ ಕಾಂಗ್ ಅನ್ನು ವಿಶೇಷ ಆಡಳಿತ ಪ್ರದೇಶವನ್ನಾಗಿ ಘೋಷಿಸಿದೆ. 1997 ರಲ್ಲಿ ಇಡೀ ಪ್ರದೇಶವನ್ನು ಯುನೈಟೆಡ್ ಕಿಂಗ್‌ಡಮ್‌ನಿಂದ ಚೀನಾಕ್ಕೆ ವರ್ಗಾಯಿಸಲಾಯಿತು. ಹಾಂಗ್‌ಕಾಂಗ್‌ ‘ಒಂದು ದೇಶ, ಎರಡು ವ್ಯವಸ್ಥೆಗಳು’ ತತ್ವದ ಅಡಿಯಲ್ಲಿ ಚೀನಾದ ಮುಖ್ಯ ಭೂಭಾಗದಿಂದ ಪ್ರತ್ಯೇಕವಾಗಿ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನರು ತಮ್ಮದು ಪ್ರತ್ಯೇಖ ಪ್ರಜಾಪ್ರಭುತ್ವ ದೇಶ ಎಂದು ವಾದಿಸುತ್ತಿದ್ದರೆ, ಚೀನಾ ಸರ್ಕಾರ ಮಾತ್ರ ಇಲ್ಲ ಹಾಂಕ್‌ಕಾಂಗ್ ನಮ್ಮ ದೇಶದ ಭೂಭಾಗ ಎಂದು ದಬ್ಬಾಳಿಕೆಯ ನಿಯಮಗಳನ್ನು ಹೇರುತ್ತಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...