Homeಮುಖಪುಟಹಾಂಗ್‌ಕಾಂಗ್: 'ದೇಶ ಪ್ರೇಮಿಗಳಿಗೆ' ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

ಹಾಂಗ್‌ಕಾಂಗ್: ‘ದೇಶ ಪ್ರೇಮಿಗಳಿಗೆ’ ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

- Advertisement -
- Advertisement -

ಹಾಂಗ್‌ಕಾಂಗ್‌ನಲ್ಲಿ ಭಾನುವಾರ ಜಿಲ್ಲಾ ಕೌನ್ಸಿಲ್‌ಗೆ ಪ್ರಪ್ರಥಮ ಬಾರಿಗೆ ನಡೆದ “ದೇಶಭಕ್ತರಿಗೆ ಮಾತ್ರ” ಚುನಾವಣೆಯಲ್ಲಿ ಶೇ. 27.5 ಮಾತ್ರ ಮತದಾನವಾಗಿದೆ. ಪ್ರಜಾಪ್ರಭುತ್ವದ ಪರ ಇರುವ ಎಲ್ಲಾ ವಿರೋಧ ಪಕ್ಷಗಳನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಅತ್ಯಂತ ಕಡಿಮೆ ಮತದಾನವಾಗಿದೆ.

2019ರಲ್ಲಿ ಕೆಲ ತಿಂಗಳ ಕಾಲ ಹಾಂಗ್‌ಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಅದು ಹಿಂಸಾತ್ಮಕ ರೂಪ ಪಡೆದಿತ್ತು. ಆ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿತ್ತು. ಪ್ರಜಾಪ್ರಭುತ್ವದ ಪರ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದರು. ಇದರಿಂದ ಪ್ರತಿಪಕ್ಷಗಳು ಭಾರೀ ವಿಜಯ ಸಾಧಿಸಿತ್ತು.

ಹಾಂಗ್‌ಕಾಂಗ್‌ ನಮ್ಮ ದೇಶದ ಭಾಗ ಎಂದು ಹೇಳುವ ಚೀನಾ 2019ರ ನಂತರ ‘ರಾಷ್ಟ್ರೀಯ ಭದ್ರತಾ ಕಾನೂನ’ನ್ನು ಜಾರಿಗೊಳಿಸಿತ್ತು. ಇದರಡಿ ವಿಪಕ್ಷ ನಾಯಕರನ್ನು ಬಂಧಿಸಿತ್ತು. ಪ್ರಜಾಪ್ರಭುತ್ವಕ್ಕಾಗಿ ಹೋರಾಡುವವರ ಧ್ವನಿಯನ್ನು ಅಡಗಿಸಿತ್ತು. ಈ ವರ್ಷದ ಮೇ ತಿಂಗಳಿನಿಂದ ಸಂಪೂರ್ಣವಾಗಿ ಜಾರಿಗೆ ಬಂಧಿರುವ ಈ ದಬ್ಬಾಳಿಕೆಯ ಕಾನೂನು, ಜಿಲ್ಲಾ ಸಮಿತಿಗಳಿಗೆ ನೇರವಾಗಿ ಆಯ್ಕೆಯಾಗುವ ಸ್ಥಾನಗಳನ್ನು 462ರಿಂದ 88ಕ್ಕೆ ಕಡಿತಗೊಳಿಸಿತ್ತು. ಉಳಿದ 382 ಸ್ಥಾನಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ನಗರದ ಮುಖಂಡರು, ಚೀನಾ ಸರ್ಕಾರಕ್ಕೆ ನಿಷ್ಠರಾಗಿರುವವರು ಮತ್ತು ಗ್ರಾಮೀಣ ಪ್ರದೇಶದ ಜಮೀನ್ದಾರರಿಗೆ ಮಾತ್ರ ಮೀಸಲಿಟ್ಟಿತ್ತು.

ಚುನಾವಣೆಗೆ ಸ್ಪರ್ಧಿಸಲು ಮೀಸಲಿಟ್ಟ 88 ಸ್ಥಾನಗಳಿಗೆ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಸರ್ಕಾರ ನೇಮಿಸಿದ ಸಮಿತಿ ಅನುಮೋದಿಸಿದ ಬಳಿಕವಷ್ಟೇ ಅವಕಾಶ ನೀಡಲಾಗಿತ್ತು. ಪ್ರಜಾಪ್ರಭುತ್ವದ ಪರ ಇರುವ ಅಭ್ಯರ್ಥಿಗಳಿಗೆ ಚುನಾವಣೆಗೆ ಸ್ಪರ್ಧಿಸುವ ಮತ್ತು ಮತ ಚಲಾಯಿಸುವ ಅವಕಾಶವನ್ನೇ ಕಿತ್ತುಕೊಳ್ಳಲಾಗಿತ್ತು. ಇವೆಲ್ಲದರ ಪರಿಣಾಮ ಚೀನಾ ಸರ್ಕಾರದ ಅನತಿಯಂತೆ ಕಾಟಾಚಾರದ ಚುನಾವಣೆ ನಡೆದಿದೆ. ಜನರು ಅತ್ಯಂತ ಕಡಿಮೆ ಮತದಾನ ಮಾಡುವ ಮೂಲಕ ದಬ್ಬಾಳಿಕೆಯ ಆಡಳಿತದ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಹಾಂಗ್‌ಕಾಂಗ್‌ನ 4.3 ಮಿಲಿಯನ್ ನೋಂದಾಯಿತ ಮತದಾರರಲ್ಲಿ ಕೇವಲ 1.2 ಮಿಲಿಯನ್‌ಗಿಂತಲೂ ಕಡಿಮೆ ಮತದಾರರು ಮತ ಚಲಾಯಿಸಿದ್ದಾರೆ. “ಚುನಾವಣೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಗೊತ್ತಿದ್ದ ಮೇಲೂ ಜನರು ಯಾಕೆ ಮತ ಚಲಾಯಿಸುತ್ತಾ ಎಂದು ಪ್ರಜಾಪ್ರಭುತ್ವವಾದಿಗಳಲ್ಲಿ ಒಬ್ಬರಾದ ಲೆಮನ್ ವಾಂಗ್ ಪ್ರಶ್ನಿಸಿದ್ದಾರೆ.

ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಹಾಂಗ್ ಕಾಂಗ್ ಅನ್ನು ವಿಶೇಷ ಆಡಳಿತ ಪ್ರದೇಶವನ್ನಾಗಿ ಘೋಷಿಸಿದೆ. 1997 ರಲ್ಲಿ ಇಡೀ ಪ್ರದೇಶವನ್ನು ಯುನೈಟೆಡ್ ಕಿಂಗ್‌ಡಮ್‌ನಿಂದ ಚೀನಾಕ್ಕೆ ವರ್ಗಾಯಿಸಲಾಯಿತು. ಹಾಂಗ್‌ಕಾಂಗ್‌ ‘ಒಂದು ದೇಶ, ಎರಡು ವ್ಯವಸ್ಥೆಗಳು’ ತತ್ವದ ಅಡಿಯಲ್ಲಿ ಚೀನಾದ ಮುಖ್ಯ ಭೂಭಾಗದಿಂದ ಪ್ರತ್ಯೇಕವಾಗಿ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನರು ತಮ್ಮದು ಪ್ರತ್ಯೇಖ ಪ್ರಜಾಪ್ರಭುತ್ವ ದೇಶ ಎಂದು ವಾದಿಸುತ್ತಿದ್ದರೆ, ಚೀನಾ ಸರ್ಕಾರ ಮಾತ್ರ ಇಲ್ಲ ಹಾಂಕ್‌ಕಾಂಗ್ ನಮ್ಮ ದೇಶದ ಭೂಭಾಗ ಎಂದು ದಬ್ಬಾಳಿಕೆಯ ನಿಯಮಗಳನ್ನು ಹೇರುತ್ತಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...