Homeಮುಖಪುಟಹಾಂಗ್‌ಕಾಂಗ್: 'ದೇಶ ಪ್ರೇಮಿಗಳಿಗೆ' ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

ಹಾಂಗ್‌ಕಾಂಗ್: ‘ದೇಶ ಪ್ರೇಮಿಗಳಿಗೆ’ ಸೀಮಿತ ಚುನಾವಣೆಯಲ್ಲಿ ಕನಿಷ್ಠ ಮತದಾನ

- Advertisement -
- Advertisement -

ಹಾಂಗ್‌ಕಾಂಗ್‌ನಲ್ಲಿ ಭಾನುವಾರ ಜಿಲ್ಲಾ ಕೌನ್ಸಿಲ್‌ಗೆ ಪ್ರಪ್ರಥಮ ಬಾರಿಗೆ ನಡೆದ “ದೇಶಭಕ್ತರಿಗೆ ಮಾತ್ರ” ಚುನಾವಣೆಯಲ್ಲಿ ಶೇ. 27.5 ಮಾತ್ರ ಮತದಾನವಾಗಿದೆ. ಪ್ರಜಾಪ್ರಭುತ್ವದ ಪರ ಇರುವ ಎಲ್ಲಾ ವಿರೋಧ ಪಕ್ಷಗಳನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಅತ್ಯಂತ ಕಡಿಮೆ ಮತದಾನವಾಗಿದೆ.

2019ರಲ್ಲಿ ಕೆಲ ತಿಂಗಳ ಕಾಲ ಹಾಂಗ್‌ಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಅದು ಹಿಂಸಾತ್ಮಕ ರೂಪ ಪಡೆದಿತ್ತು. ಆ ಬಳಿಕ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿತ್ತು. ಪ್ರಜಾಪ್ರಭುತ್ವದ ಪರ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದರು. ಇದರಿಂದ ಪ್ರತಿಪಕ್ಷಗಳು ಭಾರೀ ವಿಜಯ ಸಾಧಿಸಿತ್ತು.

ಹಾಂಗ್‌ಕಾಂಗ್‌ ನಮ್ಮ ದೇಶದ ಭಾಗ ಎಂದು ಹೇಳುವ ಚೀನಾ 2019ರ ನಂತರ ‘ರಾಷ್ಟ್ರೀಯ ಭದ್ರತಾ ಕಾನೂನ’ನ್ನು ಜಾರಿಗೊಳಿಸಿತ್ತು. ಇದರಡಿ ವಿಪಕ್ಷ ನಾಯಕರನ್ನು ಬಂಧಿಸಿತ್ತು. ಪ್ರಜಾಪ್ರಭುತ್ವಕ್ಕಾಗಿ ಹೋರಾಡುವವರ ಧ್ವನಿಯನ್ನು ಅಡಗಿಸಿತ್ತು. ಈ ವರ್ಷದ ಮೇ ತಿಂಗಳಿನಿಂದ ಸಂಪೂರ್ಣವಾಗಿ ಜಾರಿಗೆ ಬಂಧಿರುವ ಈ ದಬ್ಬಾಳಿಕೆಯ ಕಾನೂನು, ಜಿಲ್ಲಾ ಸಮಿತಿಗಳಿಗೆ ನೇರವಾಗಿ ಆಯ್ಕೆಯಾಗುವ ಸ್ಥಾನಗಳನ್ನು 462ರಿಂದ 88ಕ್ಕೆ ಕಡಿತಗೊಳಿಸಿತ್ತು. ಉಳಿದ 382 ಸ್ಥಾನಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ನಗರದ ಮುಖಂಡರು, ಚೀನಾ ಸರ್ಕಾರಕ್ಕೆ ನಿಷ್ಠರಾಗಿರುವವರು ಮತ್ತು ಗ್ರಾಮೀಣ ಪ್ರದೇಶದ ಜಮೀನ್ದಾರರಿಗೆ ಮಾತ್ರ ಮೀಸಲಿಟ್ಟಿತ್ತು.

ಚುನಾವಣೆಗೆ ಸ್ಪರ್ಧಿಸಲು ಮೀಸಲಿಟ್ಟ 88 ಸ್ಥಾನಗಳಿಗೆ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಸರ್ಕಾರ ನೇಮಿಸಿದ ಸಮಿತಿ ಅನುಮೋದಿಸಿದ ಬಳಿಕವಷ್ಟೇ ಅವಕಾಶ ನೀಡಲಾಗಿತ್ತು. ಪ್ರಜಾಪ್ರಭುತ್ವದ ಪರ ಇರುವ ಅಭ್ಯರ್ಥಿಗಳಿಗೆ ಚುನಾವಣೆಗೆ ಸ್ಪರ್ಧಿಸುವ ಮತ್ತು ಮತ ಚಲಾಯಿಸುವ ಅವಕಾಶವನ್ನೇ ಕಿತ್ತುಕೊಳ್ಳಲಾಗಿತ್ತು. ಇವೆಲ್ಲದರ ಪರಿಣಾಮ ಚೀನಾ ಸರ್ಕಾರದ ಅನತಿಯಂತೆ ಕಾಟಾಚಾರದ ಚುನಾವಣೆ ನಡೆದಿದೆ. ಜನರು ಅತ್ಯಂತ ಕಡಿಮೆ ಮತದಾನ ಮಾಡುವ ಮೂಲಕ ದಬ್ಬಾಳಿಕೆಯ ಆಡಳಿತದ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಹಾಂಗ್‌ಕಾಂಗ್‌ನ 4.3 ಮಿಲಿಯನ್ ನೋಂದಾಯಿತ ಮತದಾರರಲ್ಲಿ ಕೇವಲ 1.2 ಮಿಲಿಯನ್‌ಗಿಂತಲೂ ಕಡಿಮೆ ಮತದಾರರು ಮತ ಚಲಾಯಿಸಿದ್ದಾರೆ. “ಚುನಾವಣೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಗೊತ್ತಿದ್ದ ಮೇಲೂ ಜನರು ಯಾಕೆ ಮತ ಚಲಾಯಿಸುತ್ತಾ ಎಂದು ಪ್ರಜಾಪ್ರಭುತ್ವವಾದಿಗಳಲ್ಲಿ ಒಬ್ಬರಾದ ಲೆಮನ್ ವಾಂಗ್ ಪ್ರಶ್ನಿಸಿದ್ದಾರೆ.

ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಹಾಂಗ್ ಕಾಂಗ್ ಅನ್ನು ವಿಶೇಷ ಆಡಳಿತ ಪ್ರದೇಶವನ್ನಾಗಿ ಘೋಷಿಸಿದೆ. 1997 ರಲ್ಲಿ ಇಡೀ ಪ್ರದೇಶವನ್ನು ಯುನೈಟೆಡ್ ಕಿಂಗ್‌ಡಮ್‌ನಿಂದ ಚೀನಾಕ್ಕೆ ವರ್ಗಾಯಿಸಲಾಯಿತು. ಹಾಂಗ್‌ಕಾಂಗ್‌ ‘ಒಂದು ದೇಶ, ಎರಡು ವ್ಯವಸ್ಥೆಗಳು’ ತತ್ವದ ಅಡಿಯಲ್ಲಿ ಚೀನಾದ ಮುಖ್ಯ ಭೂಭಾಗದಿಂದ ಪ್ರತ್ಯೇಕವಾಗಿ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನರು ತಮ್ಮದು ಪ್ರತ್ಯೇಖ ಪ್ರಜಾಪ್ರಭುತ್ವ ದೇಶ ಎಂದು ವಾದಿಸುತ್ತಿದ್ದರೆ, ಚೀನಾ ಸರ್ಕಾರ ಮಾತ್ರ ಇಲ್ಲ ಹಾಂಕ್‌ಕಾಂಗ್ ನಮ್ಮ ದೇಶದ ಭೂಭಾಗ ಎಂದು ದಬ್ಬಾಳಿಕೆಯ ನಿಯಮಗಳನ್ನು ಹೇರುತ್ತಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...