Homeಮುಖಪುಟರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

- Advertisement -
- Advertisement -

ಜುಲೈನಲ್ಲಿ ಕ್ಯಾಬಿನೇಟ್‌ ಪುನರ್‌ ರಚನೆಯಾದಾಗ ಕೇಂದ್ರದ ಸಂಪುಟ ಸೇರಿರುವ ಅಜಯ್‌ ಮಿಶ್ರಾ ಅವರು ಉತ್ತರ ಪ್ರದೇಶದಿಂದ ಸಂಪುಟಕ್ಕೆ ಆಯ್ಕೆಯಾದ ಏಳು ಮಂದಿಯಲ್ಲಿದ್ದ ಒಬ್ಬರೇ ಒಬ್ಬರು ಬ್ರಾಹ್ಮಣ ಪ್ರತಿನಿಧಿಯಾಗಿದ್ದಾರೆ.

ರೈತರ ಮೇಲೆ ವಾಹನ ಚಲಾಯಿಸಿ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಕೊಂದಿದ್ದಾರೆ ಎಂಬ ಆರೋಪ ಬಂದಿದ್ದು, ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆಯಬೇಕು ಎಂಬ ಆಗ್ರಹ ಕೇಳಿಬಂದಿದೆ. ಒಂದು ವೇಳೆ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆದರೆ ಎದುರಾಗುವ ಬ್ರಾಹ್ಮಣ ಪ್ರಾತಿನಿಧ್ಯವನ್ನು ಸರಿದೂಗಿಸುವುದು ಹೇಗೆ ಎಂಬ ಬಿಕ್ಕಟ್ಟು ಬಿಜೆಪಿಗೆ ಎದುರಾಗಿದೆ.

ಸಂಪುಟಕ್ಕೆ ಸೇರಿದ ಉತ್ತರ ಪ್ರದೇಶದ ಏಳು ಮಂದಿಯಲ್ಲಿ ಆರು ಮಂದಿ ಓಬಿಸಿ ಹಾಗೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೆಚ್ಚಿನ ಹೊಸ ಮುಖಗಳು ಸಂಸತ್ತಿನಲ್ಲಿ ಯಾವುದೇ ಅಭೂತಪೂರ್ವ ಸಾಧನೆಯನ್ನು ಮಾಡಿದವರಾಗಿರಲಿಲ್ಲ. ಹೇಳಬೇಕೆಂದರೆ ತಮ್ಮ ಕ್ಷೇತ್ರಗಳ ಹೊರಗೆ ಅಷ್ಟೇನೂ ಈ ಹೊಸ ಮುಖಗಳು ತಿಳಿದಿರಲಿಲ್ಲ. ಆದಾಗ್ಯೂ, ಮಿಶ್ರಾ ಅವರ ಸೇರ್ಪಡೆ ಹೆಚ್ಚಿನ ಗಮನ ಸೆಳೆಯಿತು. ಏಕೆಂದರೆ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪನಾಯಕರನ್ನಾಗಿ ನೇಮಿಸಲಾಯಿತು.

ಇದನ್ನೂ ಓದಿರಿ: ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಉತ್ತರ ಪ್ರದೇಶದಲ್ಲಿ ಬಿಜೆಪಿ ಬ್ರಾಹ್ಮಣ ವಿರೋಧಿಯಾಗಿದೆ ಎಂಬ ಆರೋಪವನ್ನು ತೊಳೆದು ಹಾಕಲು ಮಿಶ್ರಾ ಅವರನ್ನು ಕ್ಯಾಬಿನೇಟ್‌ಗೆ ಸೇರಿಸಲಾಯಿತು. ಠಾಕೂರ್‌ ಜಾತಿಗೆ ಸೇರಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬ್ರಾಹ್ಮಣರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬ ಟೀಕೆಗಳು ಈ ಹಿಂದಿನ ವರ್ಷಗಳಲ್ಲಿ ಕೇಳಿಬಂದಿದ್ದವು.

2022ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕೇಸರಿ ಪಕ್ಷವಾದ ಬಿಜೆಪಿ, ಮೇಲ್ಜಾತಿಯನ್ನು, ಯಾದವರಲ್ಲದ ಓಬಿಸಿಗಳನ್ನು ಜಾಠವರಲ್ಲದ ದಲಿತರನ್ನು ತನ್ನ ಹಿಡಿತಕ್ಕೆ ತರಲು ಯತ್ನಿಸಿದೆ. ಆದರೆ ಕೆಲವೇ ತಿಂಗಳಲ್ಲಿ ಮಿಶ್ರಾ ಅವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ ಅವರ ಹಾದಿಗೆ ಮುಳ್ಳಾಗಿ ಪರಿಣಮಿಸಿದ್ದಾರೆ. ಅಜಿತ್‌ ಮಿಶ್ರಾ ಅವರ ಮಗ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು, ರೈತರ ಕೊಲೆಯಲ್ಲಿ ಹೆಸರು ಕೇಳಿಬಂದಿರುವುದು ಬಿಜೆಪಿಗೆ ಅಘಾತ ತಂದಿದೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದೆ. ಸಾವನ್ನಪ್ಪಿದ ರೈತ ಕುಟುಂಬಗಳಿಗೆ 45 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ನಾಗರಿಕ ಸಮಾಜ ಹಾಗೂ ವಿರೋಧ ಪಕ್ಷಗಳ ವಿರೋಧಕ್ಕೆ ಘಟನೆ ಗುರಿಯಾಗಿದ್ದು, ಉತ್ತರ ಪ್ರದೇಶ ಪೊಲೀಸರು, ಆಶೀಶ್‌ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ. ಈ ಘಟನೆ ಬಿಜೆಪಿಯ ಮೇಲೆ ಚುನಾವಣೆಯ ಸಂದರ್ಭದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನಲಾಗಿದೆ.

ರೈತರ ಕುಟುಂಬದಲ್ಲಿ ಜನಿಸಿದ ಮಿಶ್ರಾ ಅವರ ರಾಜಕೀಯ ವೃತ್ತಿಜೀವನ ವಿವಾದಗಳಿಂದ ಕೂಡಿದೆ. ರಾಜಕೀಯಕ್ಕೆ ಧುಮುಕುವ ಮುನ್ನ ಕಾನೂನು ಅಭ್ಯಾಸ ಮಾಡಿದ್ದರು. ಮುಂದೆ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಹಿಂದಿ ದಿನಪತ್ರಿಕೆಯಾದ ನವಭಾರತ್ ಟೈಮ್ಸ್ ಪ್ರಕಾರ 2000ರಲ್ಲಿ ಕೊಲೆ ಪ್ರಕರಣದಲ್ಲಿ ಮಿಶ್ರಾ ಆರೋಪಿಯಾಗಿದ್ದರು. ಆದರೆ 2004ರಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರು. 2012ರಲ್ಲಿ ನಿಗಾಸಸ್‌ನಿಂದ ಶಾಸಕರಾಗಿ ಆಯ್ಕೆಯಾದರು. ನಾಲ್ಕು ವರ್ಷಗಳ ಅವಧಿಯಲ್ಲಿ , ಅವರು 2014ರಲ್ಲಿ ಲಖಿಂಪುರ್ ಖೇರಿಯಿಂದ ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದರು. ಅವರು 2014 ಮತ್ತು 2019ರ ಸಂಸತ್ ಚುನಾವಣೆಗಳಲ್ಲಿ ಭಾರೀ ಅಂತರದಿಂದ ಗೆದ್ದರು, ಯುಪಿಯಲ್ಲಿ ಪ್ರಸ್ತುತ ಬ್ರಾಹ್ಮಣ ಮುಖವನ್ನು ಹುಡುಕುತ್ತಿದ್ದಾಗ ಬಿಜೆಪಿ ನಾಯಕತ್ವದ ವಿಶ್ವಾಸವನ್ನು ಗಳಿಸಿದರು. ಒಂದು ದಶಕದಲ್ಲಿ ಬ್ರಾಹ್ಮಣ ನಾಯಕನಾಗಿ ಬೆಳೆದಿದ್ದಾರೆ. ಆದರೆ ರೈತರ ಹತ್ಯೆಯಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿರುವುದು ಒತ್ತಡಕ್ಕೆ ಸಿಲುಕಿದ್ದಾರೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...