Homeಮುಖಪುಟರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

- Advertisement -
- Advertisement -

ಜುಲೈನಲ್ಲಿ ಕ್ಯಾಬಿನೇಟ್‌ ಪುನರ್‌ ರಚನೆಯಾದಾಗ ಕೇಂದ್ರದ ಸಂಪುಟ ಸೇರಿರುವ ಅಜಯ್‌ ಮಿಶ್ರಾ ಅವರು ಉತ್ತರ ಪ್ರದೇಶದಿಂದ ಸಂಪುಟಕ್ಕೆ ಆಯ್ಕೆಯಾದ ಏಳು ಮಂದಿಯಲ್ಲಿದ್ದ ಒಬ್ಬರೇ ಒಬ್ಬರು ಬ್ರಾಹ್ಮಣ ಪ್ರತಿನಿಧಿಯಾಗಿದ್ದಾರೆ.

ರೈತರ ಮೇಲೆ ವಾಹನ ಚಲಾಯಿಸಿ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಕೊಂದಿದ್ದಾರೆ ಎಂಬ ಆರೋಪ ಬಂದಿದ್ದು, ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆಯಬೇಕು ಎಂಬ ಆಗ್ರಹ ಕೇಳಿಬಂದಿದೆ. ಒಂದು ವೇಳೆ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆದರೆ ಎದುರಾಗುವ ಬ್ರಾಹ್ಮಣ ಪ್ರಾತಿನಿಧ್ಯವನ್ನು ಸರಿದೂಗಿಸುವುದು ಹೇಗೆ ಎಂಬ ಬಿಕ್ಕಟ್ಟು ಬಿಜೆಪಿಗೆ ಎದುರಾಗಿದೆ.

ಸಂಪುಟಕ್ಕೆ ಸೇರಿದ ಉತ್ತರ ಪ್ರದೇಶದ ಏಳು ಮಂದಿಯಲ್ಲಿ ಆರು ಮಂದಿ ಓಬಿಸಿ ಹಾಗೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೆಚ್ಚಿನ ಹೊಸ ಮುಖಗಳು ಸಂಸತ್ತಿನಲ್ಲಿ ಯಾವುದೇ ಅಭೂತಪೂರ್ವ ಸಾಧನೆಯನ್ನು ಮಾಡಿದವರಾಗಿರಲಿಲ್ಲ. ಹೇಳಬೇಕೆಂದರೆ ತಮ್ಮ ಕ್ಷೇತ್ರಗಳ ಹೊರಗೆ ಅಷ್ಟೇನೂ ಈ ಹೊಸ ಮುಖಗಳು ತಿಳಿದಿರಲಿಲ್ಲ. ಆದಾಗ್ಯೂ, ಮಿಶ್ರಾ ಅವರ ಸೇರ್ಪಡೆ ಹೆಚ್ಚಿನ ಗಮನ ಸೆಳೆಯಿತು. ಏಕೆಂದರೆ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪನಾಯಕರನ್ನಾಗಿ ನೇಮಿಸಲಾಯಿತು.

ಇದನ್ನೂ ಓದಿರಿ: ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಉತ್ತರ ಪ್ರದೇಶದಲ್ಲಿ ಬಿಜೆಪಿ ಬ್ರಾಹ್ಮಣ ವಿರೋಧಿಯಾಗಿದೆ ಎಂಬ ಆರೋಪವನ್ನು ತೊಳೆದು ಹಾಕಲು ಮಿಶ್ರಾ ಅವರನ್ನು ಕ್ಯಾಬಿನೇಟ್‌ಗೆ ಸೇರಿಸಲಾಯಿತು. ಠಾಕೂರ್‌ ಜಾತಿಗೆ ಸೇರಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬ್ರಾಹ್ಮಣರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬ ಟೀಕೆಗಳು ಈ ಹಿಂದಿನ ವರ್ಷಗಳಲ್ಲಿ ಕೇಳಿಬಂದಿದ್ದವು.

2022ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕೇಸರಿ ಪಕ್ಷವಾದ ಬಿಜೆಪಿ, ಮೇಲ್ಜಾತಿಯನ್ನು, ಯಾದವರಲ್ಲದ ಓಬಿಸಿಗಳನ್ನು ಜಾಠವರಲ್ಲದ ದಲಿತರನ್ನು ತನ್ನ ಹಿಡಿತಕ್ಕೆ ತರಲು ಯತ್ನಿಸಿದೆ. ಆದರೆ ಕೆಲವೇ ತಿಂಗಳಲ್ಲಿ ಮಿಶ್ರಾ ಅವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ ಅವರ ಹಾದಿಗೆ ಮುಳ್ಳಾಗಿ ಪರಿಣಮಿಸಿದ್ದಾರೆ. ಅಜಿತ್‌ ಮಿಶ್ರಾ ಅವರ ಮಗ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು, ರೈತರ ಕೊಲೆಯಲ್ಲಿ ಹೆಸರು ಕೇಳಿಬಂದಿರುವುದು ಬಿಜೆಪಿಗೆ ಅಘಾತ ತಂದಿದೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದೆ. ಸಾವನ್ನಪ್ಪಿದ ರೈತ ಕುಟುಂಬಗಳಿಗೆ 45 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ನಾಗರಿಕ ಸಮಾಜ ಹಾಗೂ ವಿರೋಧ ಪಕ್ಷಗಳ ವಿರೋಧಕ್ಕೆ ಘಟನೆ ಗುರಿಯಾಗಿದ್ದು, ಉತ್ತರ ಪ್ರದೇಶ ಪೊಲೀಸರು, ಆಶೀಶ್‌ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ. ಈ ಘಟನೆ ಬಿಜೆಪಿಯ ಮೇಲೆ ಚುನಾವಣೆಯ ಸಂದರ್ಭದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನಲಾಗಿದೆ.

ರೈತರ ಕುಟುಂಬದಲ್ಲಿ ಜನಿಸಿದ ಮಿಶ್ರಾ ಅವರ ರಾಜಕೀಯ ವೃತ್ತಿಜೀವನ ವಿವಾದಗಳಿಂದ ಕೂಡಿದೆ. ರಾಜಕೀಯಕ್ಕೆ ಧುಮುಕುವ ಮುನ್ನ ಕಾನೂನು ಅಭ್ಯಾಸ ಮಾಡಿದ್ದರು. ಮುಂದೆ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಹಿಂದಿ ದಿನಪತ್ರಿಕೆಯಾದ ನವಭಾರತ್ ಟೈಮ್ಸ್ ಪ್ರಕಾರ 2000ರಲ್ಲಿ ಕೊಲೆ ಪ್ರಕರಣದಲ್ಲಿ ಮಿಶ್ರಾ ಆರೋಪಿಯಾಗಿದ್ದರು. ಆದರೆ 2004ರಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರು. 2012ರಲ್ಲಿ ನಿಗಾಸಸ್‌ನಿಂದ ಶಾಸಕರಾಗಿ ಆಯ್ಕೆಯಾದರು. ನಾಲ್ಕು ವರ್ಷಗಳ ಅವಧಿಯಲ್ಲಿ , ಅವರು 2014ರಲ್ಲಿ ಲಖಿಂಪುರ್ ಖೇರಿಯಿಂದ ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದರು. ಅವರು 2014 ಮತ್ತು 2019ರ ಸಂಸತ್ ಚುನಾವಣೆಗಳಲ್ಲಿ ಭಾರೀ ಅಂತರದಿಂದ ಗೆದ್ದರು, ಯುಪಿಯಲ್ಲಿ ಪ್ರಸ್ತುತ ಬ್ರಾಹ್ಮಣ ಮುಖವನ್ನು ಹುಡುಕುತ್ತಿದ್ದಾಗ ಬಿಜೆಪಿ ನಾಯಕತ್ವದ ವಿಶ್ವಾಸವನ್ನು ಗಳಿಸಿದರು. ಒಂದು ದಶಕದಲ್ಲಿ ಬ್ರಾಹ್ಮಣ ನಾಯಕನಾಗಿ ಬೆಳೆದಿದ್ದಾರೆ. ಆದರೆ ರೈತರ ಹತ್ಯೆಯಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿರುವುದು ಒತ್ತಡಕ್ಕೆ ಸಿಲುಕಿದ್ದಾರೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...