Homeಮುಖಪುಟರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

- Advertisement -
- Advertisement -

ಜುಲೈನಲ್ಲಿ ಕ್ಯಾಬಿನೇಟ್‌ ಪುನರ್‌ ರಚನೆಯಾದಾಗ ಕೇಂದ್ರದ ಸಂಪುಟ ಸೇರಿರುವ ಅಜಯ್‌ ಮಿಶ್ರಾ ಅವರು ಉತ್ತರ ಪ್ರದೇಶದಿಂದ ಸಂಪುಟಕ್ಕೆ ಆಯ್ಕೆಯಾದ ಏಳು ಮಂದಿಯಲ್ಲಿದ್ದ ಒಬ್ಬರೇ ಒಬ್ಬರು ಬ್ರಾಹ್ಮಣ ಪ್ರತಿನಿಧಿಯಾಗಿದ್ದಾರೆ.

ರೈತರ ಮೇಲೆ ವಾಹನ ಚಲಾಯಿಸಿ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಕೊಂದಿದ್ದಾರೆ ಎಂಬ ಆರೋಪ ಬಂದಿದ್ದು, ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆಯಬೇಕು ಎಂಬ ಆಗ್ರಹ ಕೇಳಿಬಂದಿದೆ. ಒಂದು ವೇಳೆ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆದರೆ ಎದುರಾಗುವ ಬ್ರಾಹ್ಮಣ ಪ್ರಾತಿನಿಧ್ಯವನ್ನು ಸರಿದೂಗಿಸುವುದು ಹೇಗೆ ಎಂಬ ಬಿಕ್ಕಟ್ಟು ಬಿಜೆಪಿಗೆ ಎದುರಾಗಿದೆ.

ಸಂಪುಟಕ್ಕೆ ಸೇರಿದ ಉತ್ತರ ಪ್ರದೇಶದ ಏಳು ಮಂದಿಯಲ್ಲಿ ಆರು ಮಂದಿ ಓಬಿಸಿ ಹಾಗೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೆಚ್ಚಿನ ಹೊಸ ಮುಖಗಳು ಸಂಸತ್ತಿನಲ್ಲಿ ಯಾವುದೇ ಅಭೂತಪೂರ್ವ ಸಾಧನೆಯನ್ನು ಮಾಡಿದವರಾಗಿರಲಿಲ್ಲ. ಹೇಳಬೇಕೆಂದರೆ ತಮ್ಮ ಕ್ಷೇತ್ರಗಳ ಹೊರಗೆ ಅಷ್ಟೇನೂ ಈ ಹೊಸ ಮುಖಗಳು ತಿಳಿದಿರಲಿಲ್ಲ. ಆದಾಗ್ಯೂ, ಮಿಶ್ರಾ ಅವರ ಸೇರ್ಪಡೆ ಹೆಚ್ಚಿನ ಗಮನ ಸೆಳೆಯಿತು. ಏಕೆಂದರೆ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪನಾಯಕರನ್ನಾಗಿ ನೇಮಿಸಲಾಯಿತು.

ಇದನ್ನೂ ಓದಿರಿ: ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಉತ್ತರ ಪ್ರದೇಶದಲ್ಲಿ ಬಿಜೆಪಿ ಬ್ರಾಹ್ಮಣ ವಿರೋಧಿಯಾಗಿದೆ ಎಂಬ ಆರೋಪವನ್ನು ತೊಳೆದು ಹಾಕಲು ಮಿಶ್ರಾ ಅವರನ್ನು ಕ್ಯಾಬಿನೇಟ್‌ಗೆ ಸೇರಿಸಲಾಯಿತು. ಠಾಕೂರ್‌ ಜಾತಿಗೆ ಸೇರಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬ್ರಾಹ್ಮಣರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬ ಟೀಕೆಗಳು ಈ ಹಿಂದಿನ ವರ್ಷಗಳಲ್ಲಿ ಕೇಳಿಬಂದಿದ್ದವು.

2022ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕೇಸರಿ ಪಕ್ಷವಾದ ಬಿಜೆಪಿ, ಮೇಲ್ಜಾತಿಯನ್ನು, ಯಾದವರಲ್ಲದ ಓಬಿಸಿಗಳನ್ನು ಜಾಠವರಲ್ಲದ ದಲಿತರನ್ನು ತನ್ನ ಹಿಡಿತಕ್ಕೆ ತರಲು ಯತ್ನಿಸಿದೆ. ಆದರೆ ಕೆಲವೇ ತಿಂಗಳಲ್ಲಿ ಮಿಶ್ರಾ ಅವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ ಅವರ ಹಾದಿಗೆ ಮುಳ್ಳಾಗಿ ಪರಿಣಮಿಸಿದ್ದಾರೆ. ಅಜಿತ್‌ ಮಿಶ್ರಾ ಅವರ ಮಗ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು, ರೈತರ ಕೊಲೆಯಲ್ಲಿ ಹೆಸರು ಕೇಳಿಬಂದಿರುವುದು ಬಿಜೆಪಿಗೆ ಅಘಾತ ತಂದಿದೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದೆ. ಸಾವನ್ನಪ್ಪಿದ ರೈತ ಕುಟುಂಬಗಳಿಗೆ 45 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ನಾಗರಿಕ ಸಮಾಜ ಹಾಗೂ ವಿರೋಧ ಪಕ್ಷಗಳ ವಿರೋಧಕ್ಕೆ ಘಟನೆ ಗುರಿಯಾಗಿದ್ದು, ಉತ್ತರ ಪ್ರದೇಶ ಪೊಲೀಸರು, ಆಶೀಶ್‌ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ. ಈ ಘಟನೆ ಬಿಜೆಪಿಯ ಮೇಲೆ ಚುನಾವಣೆಯ ಸಂದರ್ಭದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನಲಾಗಿದೆ.

ರೈತರ ಕುಟುಂಬದಲ್ಲಿ ಜನಿಸಿದ ಮಿಶ್ರಾ ಅವರ ರಾಜಕೀಯ ವೃತ್ತಿಜೀವನ ವಿವಾದಗಳಿಂದ ಕೂಡಿದೆ. ರಾಜಕೀಯಕ್ಕೆ ಧುಮುಕುವ ಮುನ್ನ ಕಾನೂನು ಅಭ್ಯಾಸ ಮಾಡಿದ್ದರು. ಮುಂದೆ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಹಿಂದಿ ದಿನಪತ್ರಿಕೆಯಾದ ನವಭಾರತ್ ಟೈಮ್ಸ್ ಪ್ರಕಾರ 2000ರಲ್ಲಿ ಕೊಲೆ ಪ್ರಕರಣದಲ್ಲಿ ಮಿಶ್ರಾ ಆರೋಪಿಯಾಗಿದ್ದರು. ಆದರೆ 2004ರಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರು. 2012ರಲ್ಲಿ ನಿಗಾಸಸ್‌ನಿಂದ ಶಾಸಕರಾಗಿ ಆಯ್ಕೆಯಾದರು. ನಾಲ್ಕು ವರ್ಷಗಳ ಅವಧಿಯಲ್ಲಿ , ಅವರು 2014ರಲ್ಲಿ ಲಖಿಂಪುರ್ ಖೇರಿಯಿಂದ ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದರು. ಅವರು 2014 ಮತ್ತು 2019ರ ಸಂಸತ್ ಚುನಾವಣೆಗಳಲ್ಲಿ ಭಾರೀ ಅಂತರದಿಂದ ಗೆದ್ದರು, ಯುಪಿಯಲ್ಲಿ ಪ್ರಸ್ತುತ ಬ್ರಾಹ್ಮಣ ಮುಖವನ್ನು ಹುಡುಕುತ್ತಿದ್ದಾಗ ಬಿಜೆಪಿ ನಾಯಕತ್ವದ ವಿಶ್ವಾಸವನ್ನು ಗಳಿಸಿದರು. ಒಂದು ದಶಕದಲ್ಲಿ ಬ್ರಾಹ್ಮಣ ನಾಯಕನಾಗಿ ಬೆಳೆದಿದ್ದಾರೆ. ಆದರೆ ರೈತರ ಹತ್ಯೆಯಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿರುವುದು ಒತ್ತಡಕ್ಕೆ ಸಿಲುಕಿದ್ದಾರೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...