Homeಮುಖಪುಟರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

- Advertisement -
- Advertisement -

ಜುಲೈನಲ್ಲಿ ಕ್ಯಾಬಿನೇಟ್‌ ಪುನರ್‌ ರಚನೆಯಾದಾಗ ಕೇಂದ್ರದ ಸಂಪುಟ ಸೇರಿರುವ ಅಜಯ್‌ ಮಿಶ್ರಾ ಅವರು ಉತ್ತರ ಪ್ರದೇಶದಿಂದ ಸಂಪುಟಕ್ಕೆ ಆಯ್ಕೆಯಾದ ಏಳು ಮಂದಿಯಲ್ಲಿದ್ದ ಒಬ್ಬರೇ ಒಬ್ಬರು ಬ್ರಾಹ್ಮಣ ಪ್ರತಿನಿಧಿಯಾಗಿದ್ದಾರೆ.

ರೈತರ ಮೇಲೆ ವಾಹನ ಚಲಾಯಿಸಿ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಕೊಂದಿದ್ದಾರೆ ಎಂಬ ಆರೋಪ ಬಂದಿದ್ದು, ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆಯಬೇಕು ಎಂಬ ಆಗ್ರಹ ಕೇಳಿಬಂದಿದೆ. ಒಂದು ವೇಳೆ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆದರೆ ಎದುರಾಗುವ ಬ್ರಾಹ್ಮಣ ಪ್ರಾತಿನಿಧ್ಯವನ್ನು ಸರಿದೂಗಿಸುವುದು ಹೇಗೆ ಎಂಬ ಬಿಕ್ಕಟ್ಟು ಬಿಜೆಪಿಗೆ ಎದುರಾಗಿದೆ.

ಸಂಪುಟಕ್ಕೆ ಸೇರಿದ ಉತ್ತರ ಪ್ರದೇಶದ ಏಳು ಮಂದಿಯಲ್ಲಿ ಆರು ಮಂದಿ ಓಬಿಸಿ ಹಾಗೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೆಚ್ಚಿನ ಹೊಸ ಮುಖಗಳು ಸಂಸತ್ತಿನಲ್ಲಿ ಯಾವುದೇ ಅಭೂತಪೂರ್ವ ಸಾಧನೆಯನ್ನು ಮಾಡಿದವರಾಗಿರಲಿಲ್ಲ. ಹೇಳಬೇಕೆಂದರೆ ತಮ್ಮ ಕ್ಷೇತ್ರಗಳ ಹೊರಗೆ ಅಷ್ಟೇನೂ ಈ ಹೊಸ ಮುಖಗಳು ತಿಳಿದಿರಲಿಲ್ಲ. ಆದಾಗ್ಯೂ, ಮಿಶ್ರಾ ಅವರ ಸೇರ್ಪಡೆ ಹೆಚ್ಚಿನ ಗಮನ ಸೆಳೆಯಿತು. ಏಕೆಂದರೆ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪನಾಯಕರನ್ನಾಗಿ ನೇಮಿಸಲಾಯಿತು.

ಇದನ್ನೂ ಓದಿರಿ: ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಉತ್ತರ ಪ್ರದೇಶದಲ್ಲಿ ಬಿಜೆಪಿ ಬ್ರಾಹ್ಮಣ ವಿರೋಧಿಯಾಗಿದೆ ಎಂಬ ಆರೋಪವನ್ನು ತೊಳೆದು ಹಾಕಲು ಮಿಶ್ರಾ ಅವರನ್ನು ಕ್ಯಾಬಿನೇಟ್‌ಗೆ ಸೇರಿಸಲಾಯಿತು. ಠಾಕೂರ್‌ ಜಾತಿಗೆ ಸೇರಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬ್ರಾಹ್ಮಣರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬ ಟೀಕೆಗಳು ಈ ಹಿಂದಿನ ವರ್ಷಗಳಲ್ಲಿ ಕೇಳಿಬಂದಿದ್ದವು.

2022ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕೇಸರಿ ಪಕ್ಷವಾದ ಬಿಜೆಪಿ, ಮೇಲ್ಜಾತಿಯನ್ನು, ಯಾದವರಲ್ಲದ ಓಬಿಸಿಗಳನ್ನು ಜಾಠವರಲ್ಲದ ದಲಿತರನ್ನು ತನ್ನ ಹಿಡಿತಕ್ಕೆ ತರಲು ಯತ್ನಿಸಿದೆ. ಆದರೆ ಕೆಲವೇ ತಿಂಗಳಲ್ಲಿ ಮಿಶ್ರಾ ಅವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ ಅವರ ಹಾದಿಗೆ ಮುಳ್ಳಾಗಿ ಪರಿಣಮಿಸಿದ್ದಾರೆ. ಅಜಿತ್‌ ಮಿಶ್ರಾ ಅವರ ಮಗ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು, ರೈತರ ಕೊಲೆಯಲ್ಲಿ ಹೆಸರು ಕೇಳಿಬಂದಿರುವುದು ಬಿಜೆಪಿಗೆ ಅಘಾತ ತಂದಿದೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದೆ. ಸಾವನ್ನಪ್ಪಿದ ರೈತ ಕುಟುಂಬಗಳಿಗೆ 45 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ನಾಗರಿಕ ಸಮಾಜ ಹಾಗೂ ವಿರೋಧ ಪಕ್ಷಗಳ ವಿರೋಧಕ್ಕೆ ಘಟನೆ ಗುರಿಯಾಗಿದ್ದು, ಉತ್ತರ ಪ್ರದೇಶ ಪೊಲೀಸರು, ಆಶೀಶ್‌ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ. ಈ ಘಟನೆ ಬಿಜೆಪಿಯ ಮೇಲೆ ಚುನಾವಣೆಯ ಸಂದರ್ಭದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನಲಾಗಿದೆ.

ರೈತರ ಕುಟುಂಬದಲ್ಲಿ ಜನಿಸಿದ ಮಿಶ್ರಾ ಅವರ ರಾಜಕೀಯ ವೃತ್ತಿಜೀವನ ವಿವಾದಗಳಿಂದ ಕೂಡಿದೆ. ರಾಜಕೀಯಕ್ಕೆ ಧುಮುಕುವ ಮುನ್ನ ಕಾನೂನು ಅಭ್ಯಾಸ ಮಾಡಿದ್ದರು. ಮುಂದೆ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಹಿಂದಿ ದಿನಪತ್ರಿಕೆಯಾದ ನವಭಾರತ್ ಟೈಮ್ಸ್ ಪ್ರಕಾರ 2000ರಲ್ಲಿ ಕೊಲೆ ಪ್ರಕರಣದಲ್ಲಿ ಮಿಶ್ರಾ ಆರೋಪಿಯಾಗಿದ್ದರು. ಆದರೆ 2004ರಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರು. 2012ರಲ್ಲಿ ನಿಗಾಸಸ್‌ನಿಂದ ಶಾಸಕರಾಗಿ ಆಯ್ಕೆಯಾದರು. ನಾಲ್ಕು ವರ್ಷಗಳ ಅವಧಿಯಲ್ಲಿ , ಅವರು 2014ರಲ್ಲಿ ಲಖಿಂಪುರ್ ಖೇರಿಯಿಂದ ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದರು. ಅವರು 2014 ಮತ್ತು 2019ರ ಸಂಸತ್ ಚುನಾವಣೆಗಳಲ್ಲಿ ಭಾರೀ ಅಂತರದಿಂದ ಗೆದ್ದರು, ಯುಪಿಯಲ್ಲಿ ಪ್ರಸ್ತುತ ಬ್ರಾಹ್ಮಣ ಮುಖವನ್ನು ಹುಡುಕುತ್ತಿದ್ದಾಗ ಬಿಜೆಪಿ ನಾಯಕತ್ವದ ವಿಶ್ವಾಸವನ್ನು ಗಳಿಸಿದರು. ಒಂದು ದಶಕದಲ್ಲಿ ಬ್ರಾಹ್ಮಣ ನಾಯಕನಾಗಿ ಬೆಳೆದಿದ್ದಾರೆ. ಆದರೆ ರೈತರ ಹತ್ಯೆಯಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿರುವುದು ಒತ್ತಡಕ್ಕೆ ಸಿಲುಕಿದ್ದಾರೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...