Homeಮುಖಪುಟರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

- Advertisement -
- Advertisement -

ಜುಲೈನಲ್ಲಿ ಕ್ಯಾಬಿನೇಟ್‌ ಪುನರ್‌ ರಚನೆಯಾದಾಗ ಕೇಂದ್ರದ ಸಂಪುಟ ಸೇರಿರುವ ಅಜಯ್‌ ಮಿಶ್ರಾ ಅವರು ಉತ್ತರ ಪ್ರದೇಶದಿಂದ ಸಂಪುಟಕ್ಕೆ ಆಯ್ಕೆಯಾದ ಏಳು ಮಂದಿಯಲ್ಲಿದ್ದ ಒಬ್ಬರೇ ಒಬ್ಬರು ಬ್ರಾಹ್ಮಣ ಪ್ರತಿನಿಧಿಯಾಗಿದ್ದಾರೆ.

ರೈತರ ಮೇಲೆ ವಾಹನ ಚಲಾಯಿಸಿ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಕೊಂದಿದ್ದಾರೆ ಎಂಬ ಆರೋಪ ಬಂದಿದ್ದು, ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆಯಬೇಕು ಎಂಬ ಆಗ್ರಹ ಕೇಳಿಬಂದಿದೆ. ಒಂದು ವೇಳೆ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆದರೆ ಎದುರಾಗುವ ಬ್ರಾಹ್ಮಣ ಪ್ರಾತಿನಿಧ್ಯವನ್ನು ಸರಿದೂಗಿಸುವುದು ಹೇಗೆ ಎಂಬ ಬಿಕ್ಕಟ್ಟು ಬಿಜೆಪಿಗೆ ಎದುರಾಗಿದೆ.

ಸಂಪುಟಕ್ಕೆ ಸೇರಿದ ಉತ್ತರ ಪ್ರದೇಶದ ಏಳು ಮಂದಿಯಲ್ಲಿ ಆರು ಮಂದಿ ಓಬಿಸಿ ಹಾಗೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೆಚ್ಚಿನ ಹೊಸ ಮುಖಗಳು ಸಂಸತ್ತಿನಲ್ಲಿ ಯಾವುದೇ ಅಭೂತಪೂರ್ವ ಸಾಧನೆಯನ್ನು ಮಾಡಿದವರಾಗಿರಲಿಲ್ಲ. ಹೇಳಬೇಕೆಂದರೆ ತಮ್ಮ ಕ್ಷೇತ್ರಗಳ ಹೊರಗೆ ಅಷ್ಟೇನೂ ಈ ಹೊಸ ಮುಖಗಳು ತಿಳಿದಿರಲಿಲ್ಲ. ಆದಾಗ್ಯೂ, ಮಿಶ್ರಾ ಅವರ ಸೇರ್ಪಡೆ ಹೆಚ್ಚಿನ ಗಮನ ಸೆಳೆಯಿತು. ಏಕೆಂದರೆ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪನಾಯಕರನ್ನಾಗಿ ನೇಮಿಸಲಾಯಿತು.

ಇದನ್ನೂ ಓದಿರಿ: ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಉತ್ತರ ಪ್ರದೇಶದಲ್ಲಿ ಬಿಜೆಪಿ ಬ್ರಾಹ್ಮಣ ವಿರೋಧಿಯಾಗಿದೆ ಎಂಬ ಆರೋಪವನ್ನು ತೊಳೆದು ಹಾಕಲು ಮಿಶ್ರಾ ಅವರನ್ನು ಕ್ಯಾಬಿನೇಟ್‌ಗೆ ಸೇರಿಸಲಾಯಿತು. ಠಾಕೂರ್‌ ಜಾತಿಗೆ ಸೇರಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬ್ರಾಹ್ಮಣರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬ ಟೀಕೆಗಳು ಈ ಹಿಂದಿನ ವರ್ಷಗಳಲ್ಲಿ ಕೇಳಿಬಂದಿದ್ದವು.

2022ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕೇಸರಿ ಪಕ್ಷವಾದ ಬಿಜೆಪಿ, ಮೇಲ್ಜಾತಿಯನ್ನು, ಯಾದವರಲ್ಲದ ಓಬಿಸಿಗಳನ್ನು ಜಾಠವರಲ್ಲದ ದಲಿತರನ್ನು ತನ್ನ ಹಿಡಿತಕ್ಕೆ ತರಲು ಯತ್ನಿಸಿದೆ. ಆದರೆ ಕೆಲವೇ ತಿಂಗಳಲ್ಲಿ ಮಿಶ್ರಾ ಅವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ ಅವರ ಹಾದಿಗೆ ಮುಳ್ಳಾಗಿ ಪರಿಣಮಿಸಿದ್ದಾರೆ. ಅಜಿತ್‌ ಮಿಶ್ರಾ ಅವರ ಮಗ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು, ರೈತರ ಕೊಲೆಯಲ್ಲಿ ಹೆಸರು ಕೇಳಿಬಂದಿರುವುದು ಬಿಜೆಪಿಗೆ ಅಘಾತ ತಂದಿದೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದೆ. ಸಾವನ್ನಪ್ಪಿದ ರೈತ ಕುಟುಂಬಗಳಿಗೆ 45 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ನಾಗರಿಕ ಸಮಾಜ ಹಾಗೂ ವಿರೋಧ ಪಕ್ಷಗಳ ವಿರೋಧಕ್ಕೆ ಘಟನೆ ಗುರಿಯಾಗಿದ್ದು, ಉತ್ತರ ಪ್ರದೇಶ ಪೊಲೀಸರು, ಆಶೀಶ್‌ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ. ಈ ಘಟನೆ ಬಿಜೆಪಿಯ ಮೇಲೆ ಚುನಾವಣೆಯ ಸಂದರ್ಭದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನಲಾಗಿದೆ.

ರೈತರ ಕುಟುಂಬದಲ್ಲಿ ಜನಿಸಿದ ಮಿಶ್ರಾ ಅವರ ರಾಜಕೀಯ ವೃತ್ತಿಜೀವನ ವಿವಾದಗಳಿಂದ ಕೂಡಿದೆ. ರಾಜಕೀಯಕ್ಕೆ ಧುಮುಕುವ ಮುನ್ನ ಕಾನೂನು ಅಭ್ಯಾಸ ಮಾಡಿದ್ದರು. ಮುಂದೆ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಹಿಂದಿ ದಿನಪತ್ರಿಕೆಯಾದ ನವಭಾರತ್ ಟೈಮ್ಸ್ ಪ್ರಕಾರ 2000ರಲ್ಲಿ ಕೊಲೆ ಪ್ರಕರಣದಲ್ಲಿ ಮಿಶ್ರಾ ಆರೋಪಿಯಾಗಿದ್ದರು. ಆದರೆ 2004ರಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರು. 2012ರಲ್ಲಿ ನಿಗಾಸಸ್‌ನಿಂದ ಶಾಸಕರಾಗಿ ಆಯ್ಕೆಯಾದರು. ನಾಲ್ಕು ವರ್ಷಗಳ ಅವಧಿಯಲ್ಲಿ , ಅವರು 2014ರಲ್ಲಿ ಲಖಿಂಪುರ್ ಖೇರಿಯಿಂದ ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದರು. ಅವರು 2014 ಮತ್ತು 2019ರ ಸಂಸತ್ ಚುನಾವಣೆಗಳಲ್ಲಿ ಭಾರೀ ಅಂತರದಿಂದ ಗೆದ್ದರು, ಯುಪಿಯಲ್ಲಿ ಪ್ರಸ್ತುತ ಬ್ರಾಹ್ಮಣ ಮುಖವನ್ನು ಹುಡುಕುತ್ತಿದ್ದಾಗ ಬಿಜೆಪಿ ನಾಯಕತ್ವದ ವಿಶ್ವಾಸವನ್ನು ಗಳಿಸಿದರು. ಒಂದು ದಶಕದಲ್ಲಿ ಬ್ರಾಹ್ಮಣ ನಾಯಕನಾಗಿ ಬೆಳೆದಿದ್ದಾರೆ. ಆದರೆ ರೈತರ ಹತ್ಯೆಯಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿರುವುದು ಒತ್ತಡಕ್ಕೆ ಸಿಲುಕಿದ್ದಾರೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...