Homeಮುಖಪುಟರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

- Advertisement -
- Advertisement -

ಜುಲೈನಲ್ಲಿ ಕ್ಯಾಬಿನೇಟ್‌ ಪುನರ್‌ ರಚನೆಯಾದಾಗ ಕೇಂದ್ರದ ಸಂಪುಟ ಸೇರಿರುವ ಅಜಯ್‌ ಮಿಶ್ರಾ ಅವರು ಉತ್ತರ ಪ್ರದೇಶದಿಂದ ಸಂಪುಟಕ್ಕೆ ಆಯ್ಕೆಯಾದ ಏಳು ಮಂದಿಯಲ್ಲಿದ್ದ ಒಬ್ಬರೇ ಒಬ್ಬರು ಬ್ರಾಹ್ಮಣ ಪ್ರತಿನಿಧಿಯಾಗಿದ್ದಾರೆ.

ರೈತರ ಮೇಲೆ ವಾಹನ ಚಲಾಯಿಸಿ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಕೊಂದಿದ್ದಾರೆ ಎಂಬ ಆರೋಪ ಬಂದಿದ್ದು, ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆಯಬೇಕು ಎಂಬ ಆಗ್ರಹ ಕೇಳಿಬಂದಿದೆ. ಒಂದು ವೇಳೆ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆದರೆ ಎದುರಾಗುವ ಬ್ರಾಹ್ಮಣ ಪ್ರಾತಿನಿಧ್ಯವನ್ನು ಸರಿದೂಗಿಸುವುದು ಹೇಗೆ ಎಂಬ ಬಿಕ್ಕಟ್ಟು ಬಿಜೆಪಿಗೆ ಎದುರಾಗಿದೆ.

ಸಂಪುಟಕ್ಕೆ ಸೇರಿದ ಉತ್ತರ ಪ್ರದೇಶದ ಏಳು ಮಂದಿಯಲ್ಲಿ ಆರು ಮಂದಿ ಓಬಿಸಿ ಹಾಗೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೆಚ್ಚಿನ ಹೊಸ ಮುಖಗಳು ಸಂಸತ್ತಿನಲ್ಲಿ ಯಾವುದೇ ಅಭೂತಪೂರ್ವ ಸಾಧನೆಯನ್ನು ಮಾಡಿದವರಾಗಿರಲಿಲ್ಲ. ಹೇಳಬೇಕೆಂದರೆ ತಮ್ಮ ಕ್ಷೇತ್ರಗಳ ಹೊರಗೆ ಅಷ್ಟೇನೂ ಈ ಹೊಸ ಮುಖಗಳು ತಿಳಿದಿರಲಿಲ್ಲ. ಆದಾಗ್ಯೂ, ಮಿಶ್ರಾ ಅವರ ಸೇರ್ಪಡೆ ಹೆಚ್ಚಿನ ಗಮನ ಸೆಳೆಯಿತು. ಏಕೆಂದರೆ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪನಾಯಕರನ್ನಾಗಿ ನೇಮಿಸಲಾಯಿತು.

ಇದನ್ನೂ ಓದಿರಿ: ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಉತ್ತರ ಪ್ರದೇಶದಲ್ಲಿ ಬಿಜೆಪಿ ಬ್ರಾಹ್ಮಣ ವಿರೋಧಿಯಾಗಿದೆ ಎಂಬ ಆರೋಪವನ್ನು ತೊಳೆದು ಹಾಕಲು ಮಿಶ್ರಾ ಅವರನ್ನು ಕ್ಯಾಬಿನೇಟ್‌ಗೆ ಸೇರಿಸಲಾಯಿತು. ಠಾಕೂರ್‌ ಜಾತಿಗೆ ಸೇರಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬ್ರಾಹ್ಮಣರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬ ಟೀಕೆಗಳು ಈ ಹಿಂದಿನ ವರ್ಷಗಳಲ್ಲಿ ಕೇಳಿಬಂದಿದ್ದವು.

2022ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕೇಸರಿ ಪಕ್ಷವಾದ ಬಿಜೆಪಿ, ಮೇಲ್ಜಾತಿಯನ್ನು, ಯಾದವರಲ್ಲದ ಓಬಿಸಿಗಳನ್ನು ಜಾಠವರಲ್ಲದ ದಲಿತರನ್ನು ತನ್ನ ಹಿಡಿತಕ್ಕೆ ತರಲು ಯತ್ನಿಸಿದೆ. ಆದರೆ ಕೆಲವೇ ತಿಂಗಳಲ್ಲಿ ಮಿಶ್ರಾ ಅವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ ಅವರ ಹಾದಿಗೆ ಮುಳ್ಳಾಗಿ ಪರಿಣಮಿಸಿದ್ದಾರೆ. ಅಜಿತ್‌ ಮಿಶ್ರಾ ಅವರ ಮಗ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು, ರೈತರ ಕೊಲೆಯಲ್ಲಿ ಹೆಸರು ಕೇಳಿಬಂದಿರುವುದು ಬಿಜೆಪಿಗೆ ಅಘಾತ ತಂದಿದೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದೆ. ಸಾವನ್ನಪ್ಪಿದ ರೈತ ಕುಟುಂಬಗಳಿಗೆ 45 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ನಾಗರಿಕ ಸಮಾಜ ಹಾಗೂ ವಿರೋಧ ಪಕ್ಷಗಳ ವಿರೋಧಕ್ಕೆ ಘಟನೆ ಗುರಿಯಾಗಿದ್ದು, ಉತ್ತರ ಪ್ರದೇಶ ಪೊಲೀಸರು, ಆಶೀಶ್‌ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ. ಈ ಘಟನೆ ಬಿಜೆಪಿಯ ಮೇಲೆ ಚುನಾವಣೆಯ ಸಂದರ್ಭದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನಲಾಗಿದೆ.

ರೈತರ ಕುಟುಂಬದಲ್ಲಿ ಜನಿಸಿದ ಮಿಶ್ರಾ ಅವರ ರಾಜಕೀಯ ವೃತ್ತಿಜೀವನ ವಿವಾದಗಳಿಂದ ಕೂಡಿದೆ. ರಾಜಕೀಯಕ್ಕೆ ಧುಮುಕುವ ಮುನ್ನ ಕಾನೂನು ಅಭ್ಯಾಸ ಮಾಡಿದ್ದರು. ಮುಂದೆ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಹಿಂದಿ ದಿನಪತ್ರಿಕೆಯಾದ ನವಭಾರತ್ ಟೈಮ್ಸ್ ಪ್ರಕಾರ 2000ರಲ್ಲಿ ಕೊಲೆ ಪ್ರಕರಣದಲ್ಲಿ ಮಿಶ್ರಾ ಆರೋಪಿಯಾಗಿದ್ದರು. ಆದರೆ 2004ರಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರು. 2012ರಲ್ಲಿ ನಿಗಾಸಸ್‌ನಿಂದ ಶಾಸಕರಾಗಿ ಆಯ್ಕೆಯಾದರು. ನಾಲ್ಕು ವರ್ಷಗಳ ಅವಧಿಯಲ್ಲಿ , ಅವರು 2014ರಲ್ಲಿ ಲಖಿಂಪುರ್ ಖೇರಿಯಿಂದ ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದರು. ಅವರು 2014 ಮತ್ತು 2019ರ ಸಂಸತ್ ಚುನಾವಣೆಗಳಲ್ಲಿ ಭಾರೀ ಅಂತರದಿಂದ ಗೆದ್ದರು, ಯುಪಿಯಲ್ಲಿ ಪ್ರಸ್ತುತ ಬ್ರಾಹ್ಮಣ ಮುಖವನ್ನು ಹುಡುಕುತ್ತಿದ್ದಾಗ ಬಿಜೆಪಿ ನಾಯಕತ್ವದ ವಿಶ್ವಾಸವನ್ನು ಗಳಿಸಿದರು. ಒಂದು ದಶಕದಲ್ಲಿ ಬ್ರಾಹ್ಮಣ ನಾಯಕನಾಗಿ ಬೆಳೆದಿದ್ದಾರೆ. ಆದರೆ ರೈತರ ಹತ್ಯೆಯಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿರುವುದು ಒತ್ತಡಕ್ಕೆ ಸಿಲುಕಿದ್ದಾರೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...