Homeಕರ್ನಾಟಕ‍ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

‍ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ಡಿ.ಕೆ.ಸುರೇಶ್‌ ಮತ್ತು ಅಶ್ವತ್ಥ್‌ ನಾರಾಯಣ್ ನಡುವಿನ ಗಲಾಟೆಯ ಕುರಿತು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್‌ ನಾರಾಯಣ್ ಅವರ ನಡುವೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ರಾಮನಗರದ ಘಟನೆ ಒಬ್ಬ ಸಚಿವರ ದುರಹಂಕಾರದ ಪರಮಾವಧಿ. ಸಚಿವ ಅಶ್ವತ್ಥ್‌ ನಾರಾಯಣ ಅವರು ಮುಖ್ಯಮಂತ್ರಿಯನ್ನು ಕರೆದುಕೊಂಡು ಬಂದಿದ್ದಾರೆ. ಅವರು ಮುಖ್ಯಮಂತ್ರಿಗಳಿರುವ ವೇದಿಕೆಯಲ್ಲಿ ಏನು ಮಾತನಾಡಬೇಕು, ಅವರಿಗೆ ಯಾವ ರೀತಿ ಗೌರವ ಕೊಡಬೇಕು ಎಂಬ ಪರಿಜ್ಞಾನ ಇರಬೇಕು” ಎಂದು ತಿಳಿಸಿದರು.

ರಾಜಕಾರಣದಲ್ಲಿ ಜೈಕಾರ ಹಾಕುವವರು, ಧಿಕ್ಕಾರ ಕೂಗುವವರು, ಕಲ್ಲು, ಮೊಟ್ಟೆ, ಟೊಮೆಟೋ ಹೊಡೆಯುವವರು ಇರುತ್ತಾರೆ. ಯಾವುದೋ ಸನ್ನಿವೇಶದಲ್ಲಿ ದಲಿತರಿಗೆ ನೋವಾಗಿದ್ದು, ಅವರು ಘೋಷಣೆ ಕೂಗಿದ್ದಾರೆ. ಇಂತಹ ಘಟನೆಯನ್ನು ನಾವೂ ಎದುರಿಸಿದ್ದೇವೆ ಎಂದು ಪ್ರತಿಕ್ರಿಯಿಸಿದರು.

ಸಭೆಯನ್ನು ಹೇಗೆ ನಿಭಾಯಿಸಬೇಕು. ಸಿಎಂ ಬಂದ ಸಂದರ್ಭದಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಕನಿಷ್ಟ ಜ್ಞಾನ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಇರಬೇಕು. ಅವರಿಗೆ ಆ ಜ್ಞಾನ ಇಲ್ಲವೋ, ಸಮಯಪ್ರಜ್ಞೆ ಇಲ್ಲವೋ, ಇದು ಅವರ ಸಂಸ್ಕೃತಿಯೋ ಗೊತ್ತಿಲ್ಲ. ಇಲ್ಲಿ ಯಾವುದನ್ನೂ ಕತ್ತಲಲ್ಲಿ ಇಡಲು ಸಾಧ್ಯವಿಲ್ಲ ಎಂದರು.

ನನ್ನ ಸೋದರಿ ಅನಿತಾ ಅವರ ಮನಸಿಗೂ ನೋವಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಮುಖ್ಯಮಂತ್ರಿಗಳು ಕೂಡ ಆ ರೀತಿ ಮಾತಾಡುವುದು ಬೇಡ, ನಿಲ್ಲಿಸು ಎಂದು ಆ ಸಚಿವರಿಗೆ ಸನ್ನೆ ಮಾಡುತ್ತಾರೆ. ಆದರೂ ಅವರು ನಿಲ್ಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ದೇವೇಗೌಡರು, ಎರಡು ಬಾರಿ ಕುಮಾರಸ್ವಾಮಿ ಅವರನ್ನು, 2 ಕಿ.ಮೀ. ದೂರದಲ್ಲಿನ ಎಸ್.ಎಂ. ಕೃಷ್ಣ ಅವರನ್ನು ಸಿಎಂ ಆಗಿ ಕೊಟ್ಟಂತಹ ಜಿಲ್ಲೆ. ಪ್ರತಿ ಮನೆಗೂ ರಾಜಕಾರಣ ಗೊತ್ತಿದೆ. ನಾವು ಅಶ್ವತ್ ನಾರಾಯಣ್ ಅವರಷ್ಟು ದೊಡ್ಡವರಲ್ಲ, ಎಳಸು ಇರಬಹುದು. ಆದರೆ ರಾಮನಗರ ಜಿಲ್ಲೆಯವರು ಅವರ ಬೆದರಿಕೆಗೆ ಹೆದರುವ ಮಕ್ಕಳಲ್ಲ ಎಂದು ಸ್ಪಷ್ಟಪಡಿಸಿದರು.

ಅವರು ಬಂದಿರುವುದು ಬೆಂಗಳೂರು ಕಟ್ಟಿದ ಕೆಂಪೇಗೌಡರು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಕ್ಕೆ. ಅದನ್ನು ಮಾಡಿಸಿದ್ದು ಇವರಲ್ಲ. ಜಿಲ್ಲಾ ಮಂತ್ರಿಯಾಗಿದ್ದಾಗ ನಾನು ಹಾಗೂ ಎಲ್ಲರೂ ಸೇರಿ ನಿರ್ಮಾಣ ಮಾಡಿದ ಪ್ರತಿಮೆ ಎಂದು ಹೇಳಿದರು.

ಅವರು ಅವರ ಪಕ್ಷದ ವೇದಿಕೆಯಲ್ಲಿ ಏನು ಬೇಕಾದರೆ ಹೇಳಿಕೊಳ್ಳಲಿ. ಇದು ಸಿಎಂ ಅವರ ಸಭೆ. ಸಿಎಂ ಇಳಿಸಲು ಮೊದಲಿನಿಂದಲೂ ಬಿಜೆಪಿಯಲ್ಲಿ ಪ್ರಯತ್ನ ನಡೆಯುತ್ತಿದೆ. ಯಡಿಯೂರಪ್ಪನವರನ್ನು ಇಳಿಸಲು ದೊಡ್ಡ ಷಡ್ಯಂತ್ರ ಮಾಡಿದ್ದರು. ಈಗ ಬೊಮ್ಮಾಯಿ ಅವರನ್ನು ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಟ್ ಕಾಯಿನ್ ವಿಚಾರ ತೆಗೆದುಕೊಳ್ಳಿ, ಬೇರೆ ವಿಚಾರ ತೆಗೆದುಕೊಳ್ಳಿ ಎಂದು ನಮಗೆ ಮಾಹಿತಿ ಕೊಟ್ಟವರೇ ಬಿಜೆಪಿಯವರು, ಇದೇ ಅಶ್ವಥ್ ನಾರಾಯಣ್. ಈ ವಿಚಾರಗಳ ಬಗ್ಗೆ ಸಮಯ ಬಂದಾಗ ನಾವು ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದರು.

ಈಗಲೂ ಗುತ್ತಿಗೆದಾರರ ಕಮಿಷನ್ ವಿಚಾರ ಬಳಸಿಕೊಳ್ಳುತ್ತಿದ್ದಾರೆ. ಅವರ ಆಂತರಿಕ ಸಮಸ್ಯೆಗೆ ಮುಖ್ಯಮಂತ್ರಿಗಳನ್ನು ವೇದಿಕೆ ಮೇಲೆ ಕೂರಿಸಿಕೊಂಡು ಅಪಮಾನ ಮಾಡಿದರೆ ಅದು ಸರಿಯೇ? ಮಾಡಲಿ ಬಿಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅನಿತಕ್ಕ ಹಾಗೂ ಮುಖ್ಯಮಂತ್ರಿಗಳೇ ಅವರ ಮಾತು ಸರಿಯಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮೇಲೆ ಅದರ ಬಗ್ಗೆ ನಾನು ಹೇಳುವುದಾದರೂ ಏನಿದೆ. ಅವರ ಎಲ್ಲ ಸವಾಲುಗಳನ್ನು ಎದುರಿಸಲು ನಾವು ಸಿದ್ಧ ಎಂದರು.

ಇದು ಮುಖ್ಯಮಂತ್ರಿ, ಅವರ ಪಕ್ಷ, ಆರ್‌‌ಎಸ್‌ಎಸ್‌, ಜಿಲ್ಲಾಡಳಿತ, ಜಿಲ್ಲೆಯ ಜನರಿಗೆ ಆಗಿರುವ ಅಪಮಾನ. ಇಂಥವರು ಮಂತ್ರಿಯಾಗಿರುವುದೇ ದೊಡ್ಡ ಅವಮಾನ. ಅವರು ಯಾವ ಅಭಿವೃದ್ಧಿ ಮಾಡಿದ್ದಾರೆ. ಅಭಿವೃದ್ಧಿ ಎಂದರೆ ಏನು ಎಂದು ನನಗೂ ತಿಳಿಸಲಿ. ನಾನು ಏಳು ಬಾರಿ ಶಾಸಕನಾಗಿದ್ದೇನೆ, ನನಗೂ ತಿಳಿಸಲಿ. ನಾಳೆ ಅವರೇ ಸಮಯ ನಿಗದಿ ಮಾಡಲಿ. ನಾವು ಬಂದು ತಿಳಿದುಕೊಳ್ಳುತ್ತೇವೆ ಎಂದು ಸವಾಲು ಹಾಕಿದರು.

ಅಂಬೇಡ್ಕರ್ ಪ್ರತಿಮೆ ಅವರು ನಿರ್ಮಿಸಿದರಾ? ಅವರೇನು ಆಣೆಕಟ್ಟು ಕಟ್ಟಿದ್ದಾರಾ? ನರೇಗಾ ಯೋಜನೆಯಲ್ಲಿ ಯಾವುದಾದರೂ ಊರಿನ ಅಂತರ್ಜಲ ಹೆಚ್ಚಿಸಿದ್ದಾರಾ? ಕಟ್ಟಡ ಕಟ್ಟಿದ್ದಾರಾ? ರಸ್ತೆ ಮಾಡಿಸಿದ್ದಾರಾ? ಶಾಲೆ ನಿರ್ಮಿಸಿದ್ದಾರಾ? ಅವರು ಒಂದು ದಿನ ನನ್ನ ಜತೆ ಮಾತನಾಡಿಲ್ಲ. ಯಾವುದೂ ಗೊತ್ತಿಲ್ಲ. 900 ಕೋಟಿ ರೂ. ಎಲ್ಲಿ ಕೊಟ್ಟಿದ್ದಾರೆ? ಸರ್ಕಾರದಿಂದ ಅನುದಾನ ಹೋಗುತ್ತಿದೆಯಾ, ಅದೂ ಗೊತ್ತಿಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನಕ್ಕೆ ನಾವು ಗೌರವ ನೀಡುತ್ತೇವೆ. ಅವರನ್ನು ವೈಯಕ್ತಿಕವಾಗಿ ನಾವು ಮೆಚ್ಚಿಕೊಳ್ಳುತ್ತೇವೆ. ಹಾಗೆಂದು ಅವರ ಸಮ್ಮುಖದಲ್ಲಿ ಮಂತ್ರಿಯೊಬ್ಬರು ಹೇಳಿದ್ದನ್ನೆಲ್ಲ ಕೇಳಿಸಿಕೊಂಡು ಕೂರಲು ಸಾಧ್ಯವೇ? ನಮಗೂ ಸ್ವಾಭಿಮಾನ ಇದೆ. ವೇದಿಕೆ ಮೇಲೆ ಕೂರಿಸಿ ನೀವು ಗಂಡಸಾ ಎಂದು ಕೇಳಿದರೆ ಸುಮ್ಮನೆ ಕೂರಲು ಸಾಧ್ಯವೇ? ರಾಜಕೀಯ, ಅಧಿಕಾರ ಬರುತ್ತದೆ ಹೋಗುತ್ತದೆ. ಆದರೆ ಅವರಿಗೆ ಗೊತ್ತಿರಲಿ. ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರಿನ ಜನರ ರಕ್ತವೇ ಬೇರೆ ಎಂದು ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...