Homeಕರ್ನಾಟಕವಾಲ್ಮೀಕಿ ನಿಗಮದ ಖಾತೆಯಿಂದ ₹87 ಕೋಟಿ ಹಣ ವರ್ಗಾವಣೆ: ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

ವಾಲ್ಮೀಕಿ ನಿಗಮದ ಖಾತೆಯಿಂದ ₹87 ಕೋಟಿ ಹಣ ವರ್ಗಾವಣೆ: ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಅವ್ಯವಹಾರ ನಡೆದಿರುವುದನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಒಪ್ಪಿಕೊಂಡಿದ್ದಾರೆ. ಆದರೆ, ಈ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಆದ್ದರಿಂದ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರನ್ (48) ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ವಿರೋಧ ಪಕ್ಷಗಳ ನಾಯಕರು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆ ಸಚಿವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ನಿಗಮದ ಮುಖ್ಯ ಖಾತೆಯಿಂದ ಯೂನಿಯನ್ ಬ್ಯಾಂಕ್‌ನ ಎಂ.ಜಿ ರಸ್ತೆ ಶಾಖೆಯ ಅನಧಿಕೃತ ಖಾತೆಗೆ ಮೂರು ಬಾರಿ ಹಣವನ್ನು ವರ್ಗಾವಣೆ ಮಾಡಲಾಗಿದೆ. ನಿಗಮದ ಖಾತೆಯಲ್ಲಿ 2023-24 ಹಾಗೂ 2024-25ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ರೂಪಾಯಿ ಹಣದಲ್ಲಿ 87 ಕೋಟಿ ರೂ. ವರ್ಗಾವಣೆಯಾಗಿದೆ. ಈ ವಿಷಯ ನನ್ನ ಮತ್ತು ನಿಗಮದ ಅಧ್ಯಕ್ಷರ ಗಮನಕ್ಕೂ ಬಂದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ದೊಡ್ಡ ಮೊತ್ತದ ಹಣವನ್ನು ನಿಗಮದ ಮುಖ್ಯ ಖಾತೆಯಿಂದ ವರ್ಗಾವಣೆ ಮಾಡಲು ಆಡಳಿತ ಮಂಡಳಿಯ ಅನುಮೋದನೆ ಪಡೆಯಬೇಕು. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರವೂ ಆದೇಶ ಮಾಡಲು ಸಾಧ್ಯವಿಲ್ಲ. ಸಹಿ ನಕಲು ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರೇ ದೂರು ನೀಡಿದ್ದಾರೆ. ಕೆಳ ಹಂತದ ಅಧಿಕಾರಿಗೆ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುವ ಅಧಿಕಾರ ಹೇಗೆ ನೀಡಲಾಯಿತು? ಯಾರದ್ದಾದರೂ ಒತ್ತಡವಿತ್ತಾ? ಎನ್ನುವುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಕೂಡ ಇದರಲ್ಲಿ ಪಾಲ್ಗೊಂಡಿರುವ ಶಂಕೆಯಿಂದೆ. ಹಣ ವರ್ಗಾವಣೆಯಾದಾಗ ಸಂದೇಶ ಕೂಡ ಬರದಂತೆ ಮಾಡಲಾಗಿದೆ. ಬ್ಯಾಂಕ್‌ನ ಉನ್ನತಾಧಿಕಾರಿಗಳನ್ನು ಸಂಪರ್ಕಿಸಿ ಹಣವನ್ನು ನಿಗಮದ ಖಾತೆಗೆ ಮರಳಿಸುವಂತೆ ಸೂಚಿಸಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಈ ವಿಷಯ ಸರ್ಕಾರದ ಗಮನಕ್ಕೆ ಬಂದ ಬೆನ್ನಲೇ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಲಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಅತ್ಯಂತದ ದುಖಃದ ವಿಷಯ. ಈ ಸಂಬಂಧ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಮತ್ತು ಬ್ಯಾಂಕ್ ವ್ಯವಸ್ಥಾಪಕಿ ಸುಚಿಸ್ಮಿತಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಒಟ್ಟು ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಾವು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹಣ ಮರಳಿಸಲು ಅಂತಿಮ ಗಡುವು

ನಿಗಮದ ಮುಖ್ಯ ಖಾತೆಯಿಂದ 87 ಕೋಟಿ ರೂ. ವರ್ಗಾವಣೆಯಾಗಿದೆ. ಈ ಪೈಕಿ 28 ಕೋಟಿ ರೂ. ಮರಳಿ ಬಂದಿದೆ. ಉಳಿದ ಹಣವನ್ನು ಮರಳಿಸುವ ಸಂಬಂಧ ಬ್ಯಾಂಕ್‌ನ ಉನ್ನತಾಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಹಣ ಮರಳಿಸಲು ಅಂತಿಮ ಗಡುವು ಕೊಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಾಫ್ಟ್‌ವೇರ್ ಕಂಪನಿ ಖಾತೆಗೆ ಹಣ ವರ್ಗಾವಣೆ

ಮಾರ್ಚ್ 1ರಿಂದ 31ರ ನಡುವೆ ನಿಗಮದ ಮೂಲ ಖಾತೆಯಿಂದ 87 ಕೋಟಿ ರೂಪಾಯಿ ಹಣವನ್ನು ಎಂ.ಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಶಾಖೆಯ ಅನಧಿಕೃತ ಖಾತೆಯೊಂದಕ್ಕೆ ವರ್ಗಾಯಿಸಲಾಗಿದೆ. ಅಲ್ಲಿಂದ ಸಾಫ್ಟ್‌ವೇರ್ ಕಂಪನಿಯೊಂದರ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಎನ್‌ ಮಂಜುನಾಥ್ ಅವರಿಗೆ ನಿಗಮದ ಅಧಿಕಾರಿಗಳು ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿ ಇದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರು ಉನ್ನತಾಧಿಕಾರಿಗಳ ವಿರುದ್ದ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...