Homeಕರ್ನಾಟಕಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌...

ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

- Advertisement -
- Advertisement -

ಸಂಕ್ರಾಂತಿಯ ದಿನ ನಿನ್ನೆ ಕೇರಳ ಟೂರಿಸಂ ಇಲಾಖೆಯ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಹಂಚಿಕೊಂಡಿತ್ತು. ಅದನ್ನು ಬಿಜೆಪಿ ಮುಖಂಡ ಮತ್ತು ಕರ್ನಾಟಕ ಪ್ರವಾಸೋಧ್ಯಮ ಇಲಾಖೆ ಸಚಿವ ಸಿ.ಟಿ ರವಿ ವೆಲ್‌ಕಂ ಟು ಕರ್ನಾಟಕ ಎಂದು ಬರೆದು ಷೇರ್‌ ಮಾಡುವ ಮೂಲಕ ನೆಟ್ಟಿಗರ ಟ್ರೋಲ್‌ಗೆ ತುತ್ತಾಗಿದ್ದಾರೆ.

ಸಿಟಿ ರವಿಯವರು ಷೇರ್‌ ಮಾಡಿರುವ ಫೋಟೊ ಕಣ್ಣಿಗೆ ಬಿದ್ದಿದ್ದೆ ತಡ ನೆಟ್ಟಿಗರು “ನಮ್ ಹಿಂದೂ ಧರ್ಮ ಗೋ ಮಾತೆ ಬಗ್ಗೆ ಪುಂಕಾನು ಪುಂಕ ಪುಂಗಿ ಈರೀತಿ ಟ್ವೀಟ್ ಮಾಡಿದಿರಲ್ಲ ಸ್ವಾಮಿ. ಅಮಾಯಕರನ್ನು ಧರ್ಮದ ಬಗ್ಗೆ ತಲೆಗೆ ತುಂಬಿ ನೀವು ಈತರ ಮಾಡೊದು ಸರಿಯೇ…? ಎಂದು ಪ್ರಶ್ನಿಸಿದ್ದಾರೆ.

ಏನ್ಸಾರ್​ ಇದು, ಬೀಪ್​ ವೆಲ್​ಕಮ್​ ಮಾಡ್ತೀದಿರಾ..? ಅವ್ರೇನೋ ಸೆಕ್ಯೂಲರ್​ ಹೆಸರಲ್ಲಿ, ಸಂಸ್ಕ್ರತಿಯನ್ನೆಲ್ಲಾ ಬಿಟ್ಟಾಕಿ ಮಾಡಬಾರದ್ದನ್ನೆಲ್ಲಾ ಮಾಡ್ತೀದಾರೆ. ನೀವು ಅದನ್ನ ವೆಲ್​ಕಮ್​ ಅಂತೀದಿರಾ…! ನಾವು ಇದನ್ನ ಬಿಜೆಪಿ ನಾಯಕರಿಂದ ನಿರೀಕ್ಷಿಸಿರಲಿಲ್ಲ ಎಂದು ಮಂಜು ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ತೀರಾ ವಿಪರೀತಕ್ಕೆ ಹೋಗಿ ಮಟ ಮಟ ಮಧ್ಯಾಹ್ನವೇ ಈ ಥರ ಟ್ವೀಟ್‌ ಮಾಡಿದ್ದರಲ್ಲ? ಯಾವ ಬ್ರಾಂಡ್‌ ಎಂದೆಲ್ಲಾ ಟೀಕಿಸಿದ್ದಾರೆ. ಬೀಫ್ ಪರನೋ ವಿರೋಧನೋ ಸ್ಪಷ್ಟಪಡಿಸಿ ಎಂದು ಕೆಲವರು ಆಗ್ರಹಿಸಿದ್ದಾರೆ.

ಸಿ.ಟಿ ರವಿಯವರ ಇನ್ನೊಂದು ಲೆಕ್ಕಾಚಾರವೂ ಈ ಟ್ವೀಟ್‌ನಲ್ಲಿ ಇದ್ದಂತೆ ಕಾಣುತ್ತಿದೆ. ಕೇರಳದಲ್ಲಿ ಭೀಫ್‌ ಊಟವೇ ಹೆಚ್ಚು, ಅದಕ್ಕೆ ಕರ್ನಾಟಕಕ್ಕೆ ಬನ್ನಿ ಎಂಬ ಹುನ್ನಾರವೂ ಇದರಿಂದೆ ಇರಬಹುದು ಎಂತಲೂ ಕೆಲವರು ಸಂಶಯ ವ್ಯಕ್ತಪಡಿಸಿದ್ದಾರೆ.

ಭೀಫ್‌ ಜನತಾ ಪಾರ್ಟಿಗೆ ಸ್ವಾಗತ ಎಂದು ಕೆಲವರು ಚೇಡಿಸಿದ್ದಾರೆ. ಒಟ್ಟಿನಲ್ಲಿ ಕಂಡ ಕಂಡಲ್ಲಿ ಬಿಜೆಪಿ ಪಕ್ಷ ಭೀಫ್‌ ವಿರುದ್ಧ ಮಾತಾಡುತ್ತದೆ. ಭೀಫ್‌ ರಫ್ತಿನಲ್ಲಿ ಭಾರತ ಎರಡನೇ ಸ್ಥಾನ ಪಡೆದಿದೆ. ಅದೇ ರೀತಿ ಸಿ.ಟಿ ರವಿಯವರ ಟ್ವೀಟ್‌ ಸಹ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....