Homeಕರ್ನಾಟಕ‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

- Advertisement -
- Advertisement -

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ‘ಪ್ರಚಾರಕ್ಕಾಗಿ ಪಿಐಎಲ್ ಸಲ್ಲಿಕೆ’ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಅರ್ಜಿದಾರರಿಗೆ ಬರೋಬ್ಬರಿ ₹1 ಲಕ್ಷ ದಂಡ ವಿಧಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. ಇದನ್ನು ಪ್ರಶ್ನಿಸಿ ಬೆಂಗಳೂರಿನ ಎಚ್‌.ಎನ್‌ ಚಂದನಾ ಮತ್ತು ಎಸ್ ವೆಂಕಟೇಶ್ ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ಸಚಿವ ಮಧು ಬಂಗಾರಪ್ಪ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಆದ್ದರಿಂದ ನ್ಯಾಯಾಲಯವು ವಿಶೇಷ ವ್ಯಾಪ್ತಿಯ ಅಧಿಕಾರ ಬಳಸಿ ಈ ಹೇಳಿಕೆಯನ್ನು ವಜಾಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಆದರೆ ಈ ಅರ್ಜಿ ವಿಚಾರಣೆ ನಡೆಸಿದ ಪೀಠ ಬರೀ ಪ್ರಚಾರಕ್ಕಾಗಿ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.

ಹಾಗೆಯೇ ಅರ್ಜಿದಾರರಿಗೆ ₹50,000 ದಂಡ ವಿಧಿಸಿ ಅರ್ಜಿ ವಜಾಗೊಳಿಸಿತ್ತು. ಈ ಮೊತ್ತವನ್ನು ಎರಡು ವಾರಗಳಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿ ಮಾಡಬೇಕು. ಅರ್ಜಿದಾರರು ಗಡುವಿನ ಒಳಗಾಗಿ ದಂಡ ಪಾವತಿಸದಿದ್ದರೆ ಭೂಕಂದಾಯ ಬಾಕಿಯಾಗಿ ವಸೂಲಿ ಮಾಡಲು ಜಿಲ್ಲಾಧಿಕಾರಿಗೆ ಆದೇಶ ಕಳುಹಿಸಿಕೊಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಪತ್ರಿಕೆಗಳ ವರದಿಯಲ್ಲಿ ಇರುವುದು ಮೂರು ಪದಗಳು ಮಾತ್ರ. ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತದೆ ಎಂದು ವರದಿಯೇ ಆಗಿಲ್ಲ. ಆದ್ದರಿಂದ ದಂಡವನ್ನು ₹1 ಲಕ್ಷಕ್ಕೆ ಏರಿಕೆ ಮಾಡಲಾಗುತ್ತಿದೆ” ಎಂದು ಹೇಳಿದೆ.

ಅರ್ಜಿದಾರರ ಪರ ವಕೀಲರ ಮರು ವಾದದ ಬಳಿಕ ದಂಡದ ಮೊತ್ತವನ್ನು ಏರಿಸಿದ ಹೈಕೋರ್ಟ್, “ಇದು ಪ್ರಚಾರಕ್ಕಾಗಿ ಸಲ್ಲಿಸಿದ ಅರ್ಜಿ. ವಿವಾದಾತ್ಮಕ ವಿಷಯದ ಬಗ್ಗೆ ಚರ್ಚೆಯಾಗುತ್ತಿರುವಾಗ ವರದಿಯಾಗದ ಹೇಳಿಕೆ ಆಧಾರದಲ್ಲಿ ಅರ್ಜಿ ಸಲ್ಲಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದೆ.. ಇನ್ನು ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಹಾಜರಿದ್ದರು.

ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿ, ‘ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್‌ಗಳನ್ನು (A, B, C, D) ಮಾತ್ರ ನೀಡಲಾಗುವುದು. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರವನ್ನು ಜಾರಿಗೆ ತರಲಾಗುವುದು” ಎಂದು ಹೇಳಿದ್ದರು.

ಅದರಂತೆ ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಮೊತ್ತಕ್ಕೆ ಪರಿಗಣಿಸುವುದಿಲ್ಲ. ಇದರಿಂದ ಎಸ್‌ಎಸ್‌ಎಲ್‌ಸಿ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಲಿವೆ. ಹಾಗೆಯೇ ತೃತೀಯ ಭಾಷಾ ವಿಷಯದಲ್ಲಿ ಇನ್ನು ಮುಂದೆ ‘ಪಾಸು’ ಅಥವಾ ‘ಫೇಲು’ ಎಂಬ ವ್ಯವಸ್ಥೆ ಇರುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...