Homeಮುಖಪುಟಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

ಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

- Advertisement -
- Advertisement -

ಜಗತ್ತಿನಾದ್ಯಂತ 18.5 ಲಕ್ಷ ಜನರಿಗೆ ಕೊರೋನಾ ಸೋಂಕು ಅಂಟಿದೆ. ಈ ಮಹಾಮಾರಿ ವೈರಸ್‌ನಿಂದ 1.14 ಲಕ್ಷ ಮಂದಿ ಈಗಾಗಲೇ ಅಸುನೀಗಿದ್ದಾರೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 9000 ದಾಟಿದ್ದು, 250ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 247ಜನಕ್ಕೆ ಸೋಂಕು ತಗುಲಿದ್ದು 6ಜನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಗತ್ತಿಗೆ ಪಿಡುಗಾಗಿ ಪರಿಣಮಿಸುತ್ತಿರುವ ಕೊರೋನಾ ಸದ್ಯದ ಮಟ್ಟಿಗಂತೂ ನಿಯಂತ್ರಣಕ್ಕೆ ಬರುವ ಯಾವ ಲಕ್ಷಣವೂ ಗೋಚರವಾಗುತ್ತಿಲ್ಲ.

ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಜಗತ್ತಿನ ಎಲ್ಲಾ ಸರ್ಕಾರಗಳು ಜನಪ್ರತಿನಿಧಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ತಮ್ಮ ದೇಶದ ಜನ ಪ್ರಾಣವನ್ನು ಉಳಿಸಿಕೊಳ್ಳಲು ಕಟಿಬದ್ಧರಾಗಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ. ಆದರೆ, ಈ ನಡುವೆ ಕರ್ನಾಟಕದ ಆರೋಗ್ಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಡಿರುವ ಆ ಒಂದು ಕೆಲಸ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಏನಿದು ಸುಧಾಕರ್ ಪ್ರಕರಣ?

ಸಚಿವ ಕೆ. ಸುಧಾಕರ್ ಭಾನುವಾರ ಮಕ್ಕಳ ಜೊತೆ ಈಜುಕೊಳದಲ್ಲಿ ಆಟವಾಡುತ್ತಿದ್ದ ಪೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, “ತುಂಬಾ ದಿನಗಳ ನಂತರ ನಾನು ನನ್ನ ಮಕ್ಕಳ ಜೊತೆ ಈಜುಕೊಳದಲ್ಲಿದ್ದೇನೆ. ಇಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ” ಎಂದು ಬರೆದಿದ್ದಾರೆ.

ಆದರೆ ಸಚಿವರ ಈ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. “ಲಾಕ್ ಡೌನ್ ಸಮಯದಲ್ಲಿ ವೈದ್ಯರು, ಪೊಲೀಸರು ಕಷ್ಟ ಪಡುತ್ತಿದ್ದಾರೆ. ನೀವು ಈ ಸಮಯದಲ್ಲಿ ಎಂಜಾಯ್ ಮಾಡುತ್ತಿದ್ದೀರ? ವೈದ್ಯಕೀಯ ಮಂತ್ರಿಯಾಗಿ ನಿಮಗೆ ಜವಾಬ್ದಾರಿ ಇಲ್ಲವೇ? ಹೀಗೆ ಮನೆಮಂದಿಯೊಂದಿಗೆ ನೀವು ವಿಶ್ರಾಂತಿ ಮೂಡ್‌ನಲ್ಲಿ ಇರುವುದು ಸರಿಯಾದರೂ ಆ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಅಗತ್ಯ ಏನಿತ್ತು?” ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ಕೆ. ಸುಧಾಕರ್ ತಮ್ಮ ಟ್ವಿಟರ್ ಅಕೌಂಟ್‌ನಿಂದ ಆ ಪೋಟೋವನ್ನು ಡಿಲೀಟ್ ಮಾಡಿದ್ದಾರೆ.

ಈ ಪ್ರಕರಣದ ಕುರಿತು ‌ಇಂದು ಟ್ವೀಟ್ ಮಾಡುವ ಮೂಲಕ ಸಚಿವ ಕೆ. ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕೊರೋನಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದು ನೈತಿಕ ಮಾನದಂಡಗಳ ವಿಷಯವಾಗಿದ್ದು, ಅವರು ತಮ್ಮ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡಬೇಕು ಅಥವಾ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಸಚಿವ ಸಂಪುಟದಿಂದ ಸಚಿವ ಸುಧಾಕರ್ ಅವರನ್ನು ಹೊರಹಾಕಬೇಕು” ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ದಣಿದು ಬೆವರ ತೊಳೆಯುತ್ತಿರುವ ಡಾ.ಸುಧಾಕರ್ ಗೊಂದು ಲೈಕ್ ಕೊಡೋಣವೇ???
ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡ್ತಾ ಇರೋ ವೈದ್ಯಕೀಯ ಸಿಬ್ಬಂದಿಗೆ ಕೂಡಾ ಈ ಅವಕಾಶ ಇದೆಯಾ? ಎಂದು ಡಾ.ಮಹೇಂದ್ರ ಕೆ ರಂಗಪ್ಪ ಎಂಬುವವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...