Homeಮುಖಪುಟಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

ಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

- Advertisement -
- Advertisement -

ಜಗತ್ತಿನಾದ್ಯಂತ 18.5 ಲಕ್ಷ ಜನರಿಗೆ ಕೊರೋನಾ ಸೋಂಕು ಅಂಟಿದೆ. ಈ ಮಹಾಮಾರಿ ವೈರಸ್‌ನಿಂದ 1.14 ಲಕ್ಷ ಮಂದಿ ಈಗಾಗಲೇ ಅಸುನೀಗಿದ್ದಾರೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 9000 ದಾಟಿದ್ದು, 250ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 247ಜನಕ್ಕೆ ಸೋಂಕು ತಗುಲಿದ್ದು 6ಜನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಗತ್ತಿಗೆ ಪಿಡುಗಾಗಿ ಪರಿಣಮಿಸುತ್ತಿರುವ ಕೊರೋನಾ ಸದ್ಯದ ಮಟ್ಟಿಗಂತೂ ನಿಯಂತ್ರಣಕ್ಕೆ ಬರುವ ಯಾವ ಲಕ್ಷಣವೂ ಗೋಚರವಾಗುತ್ತಿಲ್ಲ.

ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಜಗತ್ತಿನ ಎಲ್ಲಾ ಸರ್ಕಾರಗಳು ಜನಪ್ರತಿನಿಧಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ತಮ್ಮ ದೇಶದ ಜನ ಪ್ರಾಣವನ್ನು ಉಳಿಸಿಕೊಳ್ಳಲು ಕಟಿಬದ್ಧರಾಗಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ. ಆದರೆ, ಈ ನಡುವೆ ಕರ್ನಾಟಕದ ಆರೋಗ್ಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಡಿರುವ ಆ ಒಂದು ಕೆಲಸ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಏನಿದು ಸುಧಾಕರ್ ಪ್ರಕರಣ?

ಸಚಿವ ಕೆ. ಸುಧಾಕರ್ ಭಾನುವಾರ ಮಕ್ಕಳ ಜೊತೆ ಈಜುಕೊಳದಲ್ಲಿ ಆಟವಾಡುತ್ತಿದ್ದ ಪೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, “ತುಂಬಾ ದಿನಗಳ ನಂತರ ನಾನು ನನ್ನ ಮಕ್ಕಳ ಜೊತೆ ಈಜುಕೊಳದಲ್ಲಿದ್ದೇನೆ. ಇಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ” ಎಂದು ಬರೆದಿದ್ದಾರೆ.

ಆದರೆ ಸಚಿವರ ಈ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. “ಲಾಕ್ ಡೌನ್ ಸಮಯದಲ್ಲಿ ವೈದ್ಯರು, ಪೊಲೀಸರು ಕಷ್ಟ ಪಡುತ್ತಿದ್ದಾರೆ. ನೀವು ಈ ಸಮಯದಲ್ಲಿ ಎಂಜಾಯ್ ಮಾಡುತ್ತಿದ್ದೀರ? ವೈದ್ಯಕೀಯ ಮಂತ್ರಿಯಾಗಿ ನಿಮಗೆ ಜವಾಬ್ದಾರಿ ಇಲ್ಲವೇ? ಹೀಗೆ ಮನೆಮಂದಿಯೊಂದಿಗೆ ನೀವು ವಿಶ್ರಾಂತಿ ಮೂಡ್‌ನಲ್ಲಿ ಇರುವುದು ಸರಿಯಾದರೂ ಆ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಅಗತ್ಯ ಏನಿತ್ತು?” ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ಕೆ. ಸುಧಾಕರ್ ತಮ್ಮ ಟ್ವಿಟರ್ ಅಕೌಂಟ್‌ನಿಂದ ಆ ಪೋಟೋವನ್ನು ಡಿಲೀಟ್ ಮಾಡಿದ್ದಾರೆ.

ಈ ಪ್ರಕರಣದ ಕುರಿತು ‌ಇಂದು ಟ್ವೀಟ್ ಮಾಡುವ ಮೂಲಕ ಸಚಿವ ಕೆ. ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕೊರೋನಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದು ನೈತಿಕ ಮಾನದಂಡಗಳ ವಿಷಯವಾಗಿದ್ದು, ಅವರು ತಮ್ಮ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡಬೇಕು ಅಥವಾ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಸಚಿವ ಸಂಪುಟದಿಂದ ಸಚಿವ ಸುಧಾಕರ್ ಅವರನ್ನು ಹೊರಹಾಕಬೇಕು” ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ದಣಿದು ಬೆವರ ತೊಳೆಯುತ್ತಿರುವ ಡಾ.ಸುಧಾಕರ್ ಗೊಂದು ಲೈಕ್ ಕೊಡೋಣವೇ???
ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡ್ತಾ ಇರೋ ವೈದ್ಯಕೀಯ ಸಿಬ್ಬಂದಿಗೆ ಕೂಡಾ ಈ ಅವಕಾಶ ಇದೆಯಾ? ಎಂದು ಡಾ.ಮಹೇಂದ್ರ ಕೆ ರಂಗಪ್ಪ ಎಂಬುವವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...