Homeಮುಖಪುಟಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

ಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

- Advertisement -
- Advertisement -

ಜಗತ್ತಿನಾದ್ಯಂತ 18.5 ಲಕ್ಷ ಜನರಿಗೆ ಕೊರೋನಾ ಸೋಂಕು ಅಂಟಿದೆ. ಈ ಮಹಾಮಾರಿ ವೈರಸ್‌ನಿಂದ 1.14 ಲಕ್ಷ ಮಂದಿ ಈಗಾಗಲೇ ಅಸುನೀಗಿದ್ದಾರೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 9000 ದಾಟಿದ್ದು, 250ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 247ಜನಕ್ಕೆ ಸೋಂಕು ತಗುಲಿದ್ದು 6ಜನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಗತ್ತಿಗೆ ಪಿಡುಗಾಗಿ ಪರಿಣಮಿಸುತ್ತಿರುವ ಕೊರೋನಾ ಸದ್ಯದ ಮಟ್ಟಿಗಂತೂ ನಿಯಂತ್ರಣಕ್ಕೆ ಬರುವ ಯಾವ ಲಕ್ಷಣವೂ ಗೋಚರವಾಗುತ್ತಿಲ್ಲ.

ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಜಗತ್ತಿನ ಎಲ್ಲಾ ಸರ್ಕಾರಗಳು ಜನಪ್ರತಿನಿಧಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ತಮ್ಮ ದೇಶದ ಜನ ಪ್ರಾಣವನ್ನು ಉಳಿಸಿಕೊಳ್ಳಲು ಕಟಿಬದ್ಧರಾಗಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ. ಆದರೆ, ಈ ನಡುವೆ ಕರ್ನಾಟಕದ ಆರೋಗ್ಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಡಿರುವ ಆ ಒಂದು ಕೆಲಸ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಏನಿದು ಸುಧಾಕರ್ ಪ್ರಕರಣ?

ಸಚಿವ ಕೆ. ಸುಧಾಕರ್ ಭಾನುವಾರ ಮಕ್ಕಳ ಜೊತೆ ಈಜುಕೊಳದಲ್ಲಿ ಆಟವಾಡುತ್ತಿದ್ದ ಪೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, “ತುಂಬಾ ದಿನಗಳ ನಂತರ ನಾನು ನನ್ನ ಮಕ್ಕಳ ಜೊತೆ ಈಜುಕೊಳದಲ್ಲಿದ್ದೇನೆ. ಇಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ” ಎಂದು ಬರೆದಿದ್ದಾರೆ.

ಆದರೆ ಸಚಿವರ ಈ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. “ಲಾಕ್ ಡೌನ್ ಸಮಯದಲ್ಲಿ ವೈದ್ಯರು, ಪೊಲೀಸರು ಕಷ್ಟ ಪಡುತ್ತಿದ್ದಾರೆ. ನೀವು ಈ ಸಮಯದಲ್ಲಿ ಎಂಜಾಯ್ ಮಾಡುತ್ತಿದ್ದೀರ? ವೈದ್ಯಕೀಯ ಮಂತ್ರಿಯಾಗಿ ನಿಮಗೆ ಜವಾಬ್ದಾರಿ ಇಲ್ಲವೇ? ಹೀಗೆ ಮನೆಮಂದಿಯೊಂದಿಗೆ ನೀವು ವಿಶ್ರಾಂತಿ ಮೂಡ್‌ನಲ್ಲಿ ಇರುವುದು ಸರಿಯಾದರೂ ಆ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಅಗತ್ಯ ಏನಿತ್ತು?” ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ಕೆ. ಸುಧಾಕರ್ ತಮ್ಮ ಟ್ವಿಟರ್ ಅಕೌಂಟ್‌ನಿಂದ ಆ ಪೋಟೋವನ್ನು ಡಿಲೀಟ್ ಮಾಡಿದ್ದಾರೆ.

ಈ ಪ್ರಕರಣದ ಕುರಿತು ‌ಇಂದು ಟ್ವೀಟ್ ಮಾಡುವ ಮೂಲಕ ಸಚಿವ ಕೆ. ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕೊರೋನಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದು ನೈತಿಕ ಮಾನದಂಡಗಳ ವಿಷಯವಾಗಿದ್ದು, ಅವರು ತಮ್ಮ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡಬೇಕು ಅಥವಾ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಸಚಿವ ಸಂಪುಟದಿಂದ ಸಚಿವ ಸುಧಾಕರ್ ಅವರನ್ನು ಹೊರಹಾಕಬೇಕು” ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ದಣಿದು ಬೆವರ ತೊಳೆಯುತ್ತಿರುವ ಡಾ.ಸುಧಾಕರ್ ಗೊಂದು ಲೈಕ್ ಕೊಡೋಣವೇ???
ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡ್ತಾ ಇರೋ ವೈದ್ಯಕೀಯ ಸಿಬ್ಬಂದಿಗೆ ಕೂಡಾ ಈ ಅವಕಾಶ ಇದೆಯಾ? ಎಂದು ಡಾ.ಮಹೇಂದ್ರ ಕೆ ರಂಗಪ್ಪ ಎಂಬುವವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...