Homeಕರ್ನಾಟಕಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ: ಕಾಂಗ್ರೆಸ್ ಆಕ್ರೋಶ, ಕ್ಷಮೆ ಕೇಳಿದ ಈಶ್ವರಪ್ಪ

ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ: ಕಾಂಗ್ರೆಸ್ ಆಕ್ರೋಶ, ಕ್ಷಮೆ ಕೇಳಿದ ಈಶ್ವರಪ್ಪ

- Advertisement -
- Advertisement -

ಸಚಿವ ಈಶ್ವರಪ್ಪ ಜೋಕರ್ ಎಂದು ಹೆಸರು ಬದಲಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅವಾಚ್ಯ ಪದ ಬಳಸಿದ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿದ್ದು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸಚಿವ ಈಶ್ವರಪ್ಪ ಮಾತಿಗೆ “ಹೊಲಸು ಬಾಯಿಯ ಈಶ್ವರಪ್ಪ, ಒಂದು ಕ್ಷಣವೂ ರಾಜಕೀಯ ಬದುಕಿನಲ್ಲಿ ಮುಂದುವರೆಯಲು ಅರ್ಹರಲ್ಲ. ಸಭ್ಯ, ಮರ್ಯಾದಸ್ಥ ಕನ್ನಡಿಗರಿಗೆ ಈಶ್ವರಪ್ಪ ಕಪ್ಪು ಚುಕ್ಕೆ. ಅವರು ಕೂಡಲೇ ರಾಜೀನಾಮೆ ನೀಡಲಿ, ಸಭ್ಯ ಕನ್ನಡಿಗರು ಮುಜುಗರಪಟ್ಟುಕೊಳ್ಳುವಂತೆ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಲಿ. ತಮ್ಮ ನಾಲಿಗೆಯನ್ನು ಗೋಮೂತ್ರದಿಂದ ಶುಚಿಗೊಳಿಸಿಕೊಳ್ಳಲಿ!” ಎಂದು ಕಾಂಗ್ರೆಸ್ ಕಿಡಿ ಕಾರಿತ್ತು.

“ಮಾನಸಿಕ ಅನಾರೋಗ್ಯ ಹೊಂದಿದವರು ಚುನಾಯಿತ ಪ್ರತಿನಿಧಿಗಳ ಸ್ಥಾನದಲ್ಲಿರಲು ಅನರ್ಹರು ಎಂಬ ನಿಯಮವಿದೆ. ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಕಾರಣ ಈಶ್ವರಪ್ಪನವರು. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ, ನಿಯಮದ ಪ್ರಕಾರ ಅವರನ್ನು ಜನಪ್ರತಿನಿಧಿಯ ಸ್ಥಾನದಿಂದ ಅನರ್ಹಗೊಳಿಸಬೇಕು. ಕನ್ನಡಿಗರ ಸಭ್ಯತನಕ್ಕೆ ಈಶ್ವರಪ್ಪನವರು ಅತೀ ದೊಡ್ಡ ಕಳಂಕ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಡಿ.ಕೆ. ಶಿವಕುಮಾರ್

“ಬಾರ್ ಮುಂದಿನ ಕುಡುಕರಿಗಿಂತ ಕೀಳಾಗಿ ಮಾತನಾಡುವ “ಹೊಲಸು ಬಾಯಿ ಈಶ್ವರಪ್ಪ”ಅವರು ಬಿಜೆಪಿ ಸಂಸ್ಕೃತಿಯ ಪ್ರತಿನಿಧಿ. ಅವರ ಮಾತುಗಳು ಬಿಜೆಪಿ ಅಸಲಿ ಸಂಸ್ಕೃತಿಯನ್ನ ತೋರಿಸುತ್ತದೆ, RSS ಶಾಖೆಯಲ್ಲಿ ಪಡೆದ ಅಶ್ಲೀಲತೆಯ ತರಬೇತಿಯನ್ನು ಸಾರ್ವಜನಿಕ ಬದುಕಲ್ಲಿ ತೋರಿಸುತ್ತಿದ್ದಾರೆ ಇಂತಹ ಸಂಸ್ಕಾರಹೀನರು ರಾಜಕಾರಣಕ್ಕೆ, ಸಾರ್ವಜನಿಕ ಬದುಕಿಗೆ ಅನರ್ಹರು” ಎಂದು ಕಾಂಗ್ರೆಸ್ ಕಿಡಿ ಕಾರಿದೆ.
“ಈಶ್ವರಪ್ಪ ಅವರು ಕಾಂಗ್ರೆಸ್ಸಿಗರ ಬಗ್ಗೆ ಆಡಿರುವ ಅವಾಚ್ಯ ಮಾತಿಗೆ ಮುಂದಿನ ದಿನಗಳಲ್ಲಿ ರಾಜ್ಯದ ಕಾಂಗ್ರೆಸ್ಸಿಗರು ಸೂಕ್ತ ಉತ್ತರ ನೀಡಲಿದ್ದಾರೆ. ರಾಗ-ದ್ವೇಷ ಇಲ್ಲದೇ ನಡೆದುಕೊಳ್ಳುತ್ತೇನೆ ಎಂಬ ಪ್ರಮಾಣವಚನಕ್ಕೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಉತ್ತರ ನೀಡಬೇಕು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಮಾತಿಗೆ ಕ್ಷಮೆ ಕೇಳಿದ್ದಾರೆ. ಕೋಪದಲ್ಲಿ ಬಾಯಿಯಲ್ಲಿ ಬಂದ ಪದಕ್ಕೆ ಕ್ಷಮೆ ಕೇಳುತ್ತೇನೆ. ಅದನ್ನು ಮುಂದುವರೆಸುವುದು ಬೇಡ, ಆಡಿದ ಮಾತನ್ನು ಹಿಂಪಡೆಯುವುದಾಗಿ ಈಶ್ವರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಸಚಿವ ಈಶ್ವರಪ್ಪ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಈಶ್ವರಪ್ಪ ಅವರ ಹೇಳಿಕೆ ಬಿಜೆಪಿ ಸಂಸ್ಕೃತಿಯ ಪ್ರತಿಬಿಂಬ: ಡಿ.ಕೆ. ಶಿವಕುಮಾರ್…ವಿಡಿಯೊ ನೋಡಿ


ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...