Homeಕರ್ನಾಟಕಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

ಹಲವು ಬಾರಿ ನಾಲಿಗೆ ಹರಿಯಬಿಟ್ಟು ಮನಬಂದಂತೆ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಇಂದು ಮತ್ತೆ ತಮ್ಮ ತಪ್ಪನ್ನು ಪುನಾರಾವರ್ತನೆ ಮಾಡಿದ್ದಾರೆ. ಅಧಿಕಾರಿಯೊಬ್ಬರ ಮನೆಯ ವೈಯಕ್ತಿಕ ವಿಷಯಗಳನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ತುಮಕೂರಿನಲ್ಲಿ ನಡೆದ 2020-21 ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಿಆರ್‌ಐಡಿ ಎಇಇ ಅಧಿಕಾರಿಯ ವಿರುದ್ದ ಏಕವಚನದಲ್ಲಿ ಹರಿಹಾಯ್ದಿದ್ದಾರೆ.

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ? ಕೆಲಸ ಮಾಡದಿದ್ದರೂ ನಿನ್ನ ರಕ್ಷಣೆಗೆ ಬರುವ ಆ ಸೀರೆ ಸುತ್ತುವ ಕೃಷ್ಣ ಯಾರು? ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

ಕೆಲಸ ಮಾಡದೇ ಅಧಿಕಾರಿಗಳು ಜಿಲ್ಲೆಯನ್ನೇ ಸಾಯಿಸುತ್ತಿದ್ದಾರೆ. ಕೊರೊನಾ, ನೀತಿ ಸಂಹಿತೆಯ ಹೆಸರಿನಲ್ಲಿ ಜಡಗಟ್ಟಿದ್ದಾರೆ. ಒಂದೇ ಒಂದು ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಇದೇ ಮಾಧುಸ್ವಾಮಿಯವರು ಈ ಹಿಂದೆ ಕೋಲಾರದಲ್ಲಿ ಮನವಿ ನೀಡಲು ಬಂದ ರೈತ ಮಹಿಳೆಯನ್ನು ರ್ಯಾಸ್ಕಲ್ ಎಂದು ಕರೆಯುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದರು. ತುಮಕೂರಿನಲ್ಲಿ ಹಿರಿಯ ರೈತ ಮುಖಂಡರೊಂದಿಗೆ ಅನುಚಿತವಾಗಿ ವರ್ತಿಸಿ ಟೀಕೆ ಎದುರಿಸಿದ್ದರು. ಇಂದು ಸಹ ಅದನ್ನು ಪುನಾರಾವರ್ತನೆ ಮಾಡಿದ್ದಾರೆ.

ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮಾಜಿ ಸಚಿವರಾದ ಡಾ.ಎಚ್.ಸಿ ಮಹದೇವಪ್ಪನವರು ಪ್ರತಿಕ್ರಿಯಿಸಿ “ಶಾಸನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ವಿಶ್ವಾಸನೀಯವಾದ ಭಾಷೆಯನ್ನು ಬಳಸದೇ ಇದ್ದರೆ ಅದು ಸಂವಿಧಾನಕ್ಕೆ ಅಗೌರವ ತೋರಿದಂತೆ. ಕಾನೂನು ಸಚಿವರಾದ ಮಾಧುಸ್ವಾಮಿಯವರು ಹೀಗೆ ದರ್ಪದಿಂದ ಮಾತನಾಡುತ್ತಿರುವುದು ಮೊದಲ ಬಾರಿ ಏನಲ್ಲ. ಆದರೂ ಇವರು ಹೇಗೆ ಮಾತನಾಡಿದರೂ ನಡೆಯುತ್ತದೆ. ಆದರೆ ಅಹಿಂದ ವರ್ಗಗಳು ಮತ್ತು ತಳ ವರ್ಗದವರು ಮಾತನಾಡಿದಾಗ ಮಾತ್ರ ಅದು ಅಹಂಕಾರ, ದರ್ಪ ಇತ್ಯಾದಿ ಎನಿಸಿಕೊಳ್ಳುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧರ್ಮ ಪ್ರಕಾಶ್ ಎಂಬುವವರು “ಅವರ ಹೆಂಡತಿಯ ಸೀರೆಯನ್ನು ಯಾವ ಸೋಪಲ್ಲಿ ಆದ್ರೂ ತೊಳಿತಾರೆ ಅದನ್ ಕಟ್ಕೊಂಡು ನಿನಗೇನಾಗಬೇಕು’ ಡಿಟರ್ಜೆಂಟ್ ಮಾಧುಸ್ವಾಮಿ. ಅವರ ಮನೆಗೆ ಹೋಗಿ ಅವರ ಬಟ್ಟೆಗಳನ್ನು ನೀನು ತೊಳೆದು ಕೊಡುತ್ತೀಯಾ. ಇಂತಹ ದರ್ಪದ ಮಾತುಗಳನ್ನು ಮೊದಲು ಬಿಡು ಇಲ್ಲಾಂದ್ರೆ ನಿಮ್ಮ ಪಕ್ಷವನ್ನು ಕರ್ನಾಟಕ ಜನ ತೊಳೆದು ಹಾಕುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾದೇವಸ್ವಾಮಿ ಒಬ್ಬ ಮಂತ್ರಿಯಾಗಿರಿ ಅಷ್ಟೇ ..ಸಂಸತ್ತಿನಲ್ಲಿ ಎರಡು ಮಾತಾಡ್ ತಕ್ಷಣ ಅವರು ತನ್ನನ್ನು ತಾನು ರಾಜ ಅಂತ ತಿಳ್ಕೊಂಡಿದ್ದಾರೆ. ಸಸ್ಪೆಂಡ್ ಮಾಡೊಕೆ ನೀವ್ಯಾರು ?ಆಡಳಿತ ನಡೆಸಿ . ದಬ್ಬಾಳಿಕೆ ಬೇಡ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...